ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿಯೇ ವಿಶೇಷವಾಗಿ ಗುರುತಿಸಿಕೊಂಡ ಸಂಸ್ಥೆ. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡುತ್ತಿರುವ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಯಶಸ್ಸನ್ನು ಸಾಧಿಸಲಿ ಮತ್ತು ಸಂಸ್ಥೆಯ ಅಭಿವೃದ್ಧಿಗೆ ವೈಯಕ್ತಿಕ ನೆಲೆಯಲ್ಲೂ ನಾನು ಸಹಕರಿಸುತ್ತೇನೆ ಎಂದು ನಂದಿನಿ ಗ್ರೂಫ್ ಆಫ್ ಹೋಟೆಲಿನ ಮಾಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು.

Call us

Click Here

ಅವರು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ, ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಅನಿಲ್ ಚಾತ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್‌ರವರು ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು.

ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ವಿಘ್ನೇಶ್ವರ್ ರಾವ್ ಸ್ವಾಗತಿಸಿದರು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ ಪಾರಂಪಳ್ಳಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕಿ ಪ್ರೀತಿ ಹೆಗ್ಡೆ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅನಿತಾ ಅಲೈಸ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

Leave a Reply