Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲ ತೀರಿಸುವುದಕ್ಕಾಗಿ ಮಹಿಳೆಯ ಸರ ಅಪಹರಿಸಲು ಯತ್ನ. ಬಂಧನ
    ಅಪಘಾತ-ಅಪರಾಧ ಸುದ್ದಿ

    ಸಾಲ ತೀರಿಸುವುದಕ್ಕಾಗಿ ಮಹಿಳೆಯ ಸರ ಅಪಹರಿಸಲು ಯತ್ನ. ಬಂಧನ

    Updated:27/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ : ಇಬ್ಬರು ಸರಗಳ್ಳರನ್ನು ಕೋಟ ಪೊಲೀಸ್‌ ಠಾಣೆಯ ಸಿಬ್ಭಂದಿಯೋರ್ವರು ಸಾಹಸ ಮೆರೆದು ಬಂಧಿಸಿದ್ದು, ಆರೋಪಿಗಳನ್ನು ಬುಧವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

    Click Here

    Call us

    Click Here

    ನಾವುಂದ ನಿವಾಸಿಗಳಾದ ನಾಗೇಶ ಖಾರ್ವಿ(22), ಮಧುಕರ ಖಾರ್ವಿ (25) ಆರೋಪಿಗಳು. ಬೈಕ್‌ನಲ್ಲಿ 15 ಕಿ.ಮೀ. ಬೆನ್ನಟ್ಟಿ ಬಂಧನ ಆರೋಪಿಗಳು ಸೋಮವಾರ ರಾತ್ರಿ ಪಲ್ಸರ್‌ ಬೈಕ್‌ನಲ್ಲಿ ಬಂದು ಸಾಲಿಗ್ರಾಮ ಸಮೀಪ ಕಾರ್ಕಡ ಹಿ.ಪ್ರಾ. ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳ ಕುತ್ತಿಗೆಯಿಂದ ಸರ ಅಪಹರಿಸಲು ಪ್ರಯತ್ನಿಸಿದ್ದು, ಈ ಸಂದರ್ಭ ಆಕೆ ಜೋರಾಗಿ ಕೂಗಿಕೊಂಡಿದ್ದರು. ಆಗ ಸಮೀಪ ಕರ್ತವ್ಯ ನಿರತರಾಗಿದ್ದ ಕೋಟ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಪ್ರದೀಪ್‌ ನಾಯಕ್‌ ಬೈಕ್‌ನಲ್ಲಿ ಅವರನ್ನು ಬೆನ್ನಟ್ಟಿದ್ದು, ಆರೋಪಿಧಿಗಳು ಬೈಕಿನಲ್ಲಿ ಬ್ರಹ್ಮಾವರ ಕಡೆಗೆ ವೇಗವಾಗಿ ಸಾಗಿದರು. ಅನಂತರ ಬ್ರಹ್ಮಾವರ ಆಕಾಶವಾಣಿ ಸರ್ಕಲ್‌ನಿಂದ ಬಾಕೂìರು ರಸ್ತೆಯ ಮೂಲಕ ಪರಾರಿಯಾಗಲು ಯತ್ನಿಸಿದಾಗ ಪ್ರದೀಪ್‌ ನಾಯಕ್‌ ಕೂಡ ಅಷ್ಟೇ ವೇಗದಲ್ಲಿ ಅವರನ್ನು ಬೆನ್ನಟ್ಟಿ ಘಟನೆ ಈ ಕುರಿತು ಸ್ಥಳೀಯರಿಗೆ ಹಾಗೂ ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

    ಬಾರ್ಕೂರು ಕಲ್ಲುಚಪ್ಪರ ಬಳಿ ಆರೋಪಿಗಳು ಬೈಕನ್ನು ಕಾಳಿಕಾಂಬಾ ದೇವಸ್ಥಾನದ ಒಳರಸ್ತೆಗೆ ತಿರುಗಿಸಿದರು. ಶರಣಾಗುವಂತೆ ಸೂಚಿಸಿದರೂ ಕೇಳದೆ ಮುಂದೆ ಸಾಗಿದಾಗ ಮೂಡುಕೇರಿ ಸಮೀಪ ಇಕ್ಕಟ್ಟಾದ ರಸ್ತೆಯಲ್ಲಿ ಬೈಕ್‌ ನಿಯಂತ್ರಣ ತಪ್ಪಿ ಕೆಳಗೆ ಬಿತ್ತು. ಈ ಸಂದರ್ಭ ಸ್ಥಳೀಯರ ನೆರವಿನೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು. ಆರೋಪಿಗಳು ಈ ಹಿಂದೆ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯ ನಾಲ್ಕು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಹಾಗೂ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿ ದಾಳಿ ನಡೆಸುತ್ತಿ ದ್ದರು ಎನ್ನಲಾಗಿದೆ.

    ಸಾಲ ತೀರಿಸುವುದಕ್ಕಾಗಿ ಕಳವು :
    ಮಧುಕರ ಪದವಿ ಶಿಕ್ಷಣವನ್ನು ಅರ್ಧದಲ್ಲೇ ಮೊಟಕು ಗೊಳಿಸಿದ್ದು, ನಾಗೇಶ್‌ ಎಸೆಸೆಲ್ಸಿ ಮುಗಿಸಿದ್ದ. ಅವರಿಬ್ಬರು ಸಹೋದರ ಸಂಬಂಧಿಗಳಾಗಿದ್ದು ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಲವನ್ನು ತೀರಿಸಲು ಕಳ್ಳತನ ನಡೆಸುತ್ತಿದ್ದರು. ಕದ್ದ ಚಿನ್ನವನ್ನು ಮಂಗಳೂರಿನ ಖಾಸಗಿ ಜುವೆಲರಿಯೊಂದರಲ್ಲಿ ಮಾರಾಟ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

    ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಅವರ ನೇತೃತ್ವದಲ್ಲಿ ಕೋಟ ಠಾಣಾಧಿಕಾರಿ ಹಾಗೂ ಸಿಬಂದಿ ವಿಚಾರಣೆ ನಡೆಸಿದ್ದಾರೆ. ಆರೋಪಿಗಳಿಗೆ ಒಂದು ವಾರಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Click here

    Click here

    Click here

    Call us

    Call us

    ಸುಮಾರು 15 ಕಿ.ಮೀ. ವರೆಗೆ ಬೆನ್ನಟ್ಟಿ, ಆರೋಪಿಗಳನ್ನು ಬಂಧಿಸಿದ ಹೆಡ್‌ ಕಾನ್‌ಸ್ಟೆಬಲ್‌ ಪ್ರದೀಪ್‌ ನಾಯಕ್‌ ಅವರ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದ್ದು, ಸಾಹಸ ಮೆರೆದ ಅವರಿಗೆ ಸೂಕ್ತ ಗೌರವ ನೀಡಬೇಕು ಎನ್ನುವ ಮಾತುಗಳು ಕೇಳಿಬಂದಿದೆ.

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d