Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾ.31: ಗಲ್ಫ್ ನಮ್ಮ ಕುಂದಾಪ್ರ ಕನ್ನಡ ಬಳಗ ಉದ್ಘಾಟನೆ. ವ್ಯಾಪಾರ- ಕಾರ್ಯನಿರ್ವಾಹಕರ ಸಮಾವೇಶ
    ಕುಂದಾಪುರ

    ಮಾ.31: ಗಲ್ಫ್ ನಮ್ಮ ಕುಂದಾಪ್ರ ಕನ್ನಡ ಬಳಗ ಉದ್ಘಾಟನೆ. ವ್ಯಾಪಾರ- ಕಾರ್ಯನಿರ್ವಾಹಕರ ಸಮಾವೇಶ

    Updated:31/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಘ್ ಇದರ ಉದ್ಘಾಟನಾ ಸಮಾರಂಭ ಹಾಗೂ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶ ಮಾಚ್ 31ರ ಬೆಳಿಗ್ಗೆ ಯುಎಐ ಬರ್‌ದುಬಾಯಿ ರೀಜೆಂಟ್ ಪ್ಯಾಲೇಸ್ ಹೋಟೆಲ್‌ನಲ್ಲಿ ಜರುಗಲಿದ್ದು ಸಕಲ ಸಿದ್ಧತೆ ನಡೆದಿದೆ. ಕುಂದಾಪುರ ಭಾಷಿಕರನ್ನು ಒಂದುಗೂಡಿಸುವುದರೊಂದಿಗೆ ಒಂದು ಸಾಂಸ್ಥಿಕ ರೂಪ ನೀಡಿ, ಪರಸ್ಪರ ಸಹಾಯ ಸಹಕಾರ ಮಾಡುವ ಸಲುವಾಗಿ ಹುಟ್ಟುಹಾಕಿರುವ ಕುಂದಾಪ್ರ ಕನ್ನಡ ಬಳಗದ ಉದ್ಘಾಟನೆಯೊಂದಿಗೆ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶದಲ್ಲಿ ಕುಂದಾಪುರ ಮೂಲಕ ವಿವಿಧ ಉದ್ಯಮಿಗಳು ಒಂದೆಡೆ ಸೇರಲಿದ್ದಾರೆ.

    Click Here

    Call us

    Click Here

    ಕುಂದಾಪ್ರ ಕನ್ನಡ ಬಳಗ:
    ಗಲ್ಫ್ ರಾಷ್ಟ್ರದಲ್ಲಿ ನೆಲೆಸಿರುವ ಕುಂದಾಪ್ರ ಭಾಷಿಕರ ಕೂಡಿವಿಕೆ ಒಂದು ವೇದಿಕೆ ದೊರಕಿಸಿಕೊಡುವುದು. ಉದ್ಯೋಗ ಅರಿಸಿ ಬರುವ ಕುಂದಾಪುರಿಗರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವುದು, ಕುಂದಾಪುರ ಭಾಷೆಯ ಬದುಕು, ಕಲೆ ಸಾಹಿತ್ಯವನ್ನು ದಾಖಲಿಸುವುದು, ಭಾಷಿಕ ಸಾಧಕರನ್ನು ಗುರುತಿಸಿ ಗೌರವ ಸನ್ಮಾನ ನೀಡುವುದು ಇದರ ಜೊತೆ ಜೊತೆಗೆ ಬಡ ವಿದ್ಯಾರ್ಥಿಗಳಿಗೆ, ಅಶಕ್ತರು ಹಾಗೂ ವಯೋವೃದ್ಧರಿಗೆ ನೆರವು ಸೇರಿದಂತೆ ಹಲವು ಪ್ರಮುಖ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಉದ್ದೇಶದೊಂದಿಗೆ ನಮ್ಮ ಕುಂದಾಪ್ರ ಕನ್ನಡ ಬಳಗವನ್ನು ಸ್ಥಾಪಿಸಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ.

    ಸಂಸ್ಥೆಯ ಮಹಾಪೋಷಕರಾಗಿ ರಾಮೀ ಗ್ರೂಫ್ ಆಫ್ ಹೋಟೆಲ್ಸ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾದ ವರದರಾಜ ಶೆಟ್ಟಿ ಅವರಿದ್ದರೇ ಗೌರವಾಧ್ಯಕ್ಷರಾಗಿ ಫಾರ್ಚೂನ್ ಗ್ರೂಫ್ ಆಫ್ ಹೋಟೆಲ್ಸ್ ಅಧ್ಯಕ್ಷ ಪ್ರವೀಣ ಶೆಟ್ಟಿ ವಕ್ವಾಡಿ ತೊಡಗಿಸಿಕೊಂಡಿದ್ದಾರೆ. ಈರ್ವರೂ ಗಲ್ಫ್ ಹಾಗೂ ತಮ್ಮ ಹುಟ್ಟೂರಿನಲ್ಲಿ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡವರು. ಸಂಸ್ಥೆಯ ಅಧ್ಯಕ್ಷರಾಗಿ ಗಲ್ಘ್‌ನಲ್ಲಿ ಉದ್ಯೋಗಿಯಾಗಿರುವ ಕ್ರೀಯಾಶೀಲ ವ್ಯಕ್ತಿತ್ವದ ಮೂಲಕ ಹತ್ತಾರು ಕನ್ನಡಪರ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿರುವ ಸಾಧನಾ ದಾಸ್, ಉಪಾಧ್ಯಕ್ಷರಾಗಿ ದಿನೇಶ್ ಸಿ.ಡಿ, ಕಾರ್ಯದರ್ಶಿಯಾಗಿ ಸುಧಾಕರ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಮನೋಜ್ ದೇವಾಡಿಗ, ಕೋಶಾಧಿಕಾರಿಯಾಗಿ ಸುಜಿತ್ ಶೆಟ್ಟಿ ತೊಡಗಿಸಿಕೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಉದ್ಘಾಟನಾ ಸಮಾರಂಭ:
    ನಮ್ಮ ಕುಂದಾಪ್ರ ಕನ್ನಡ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಚಿತ್ತಾರಿ ಗ್ರೂಫ್ ಆಫ್ ಕಂಪೆನಿ ಆಡಳಿತ ಪಾಲುದಾರ ಪಿ. ಸುಖಾನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆ ಇದ್ದು, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಉದ್ಯಮಿ ಹಮೀದ್, ಮುಂಬೈ ಉದ್ಯಮಿ ಮಂಜುನಾಥ ಬಿಲ್ಲವ, ಉದ್ಯಮಿ ಕೆ. ವೆಂಕಟೇಶ ಕಿಣಿ ಬೈಂದೂರು, ಉದ್ಯಮಿ ಇಬ್ರಾಹಿಂ ಗಂಗೊಳ್ಳಿ, ಜನಾರ್ದನ ಉಪ್ಪುಂದ, ಶೀನಾ ದೇವಾಡಿಗ, ಬಾಸುಮ ಕೊಡಗು ಸೇರಿದಂತೆ ಹಲವು ಪ್ರಮುಖರು ಭಾಗವಹಿಸುವ ನಿರೀಕ್ಷೆ ಇದ್ದು, ವಾಗ್ಮಿ ಪತ್ರಕರ್ತ ಅರುಣ್‌ಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಲಿದ್ದಾರೆ. ಇದರೊಂದಿಗೆ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಹಲವು ಪ್ರಮುಖರು ಭಾಗವಹಿಸಲಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Call us

    Call us

    Namma kundapra kannada balaga gulf inauguration and business & executive meet on 31 march 2017. Place Regent palace hotel burdubai – UAE. 

    Like this:

    Like Loading...

    Related

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d