Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವದ ಪ್ರತಿಷ್ಠಿತ ಕಲಾ ಮೇಳಕ್ಕೆ ಕುಂದಾಪುರ ಮೂಲದ ತಲ್ಲೂರು ಎಲ್.ಎನ್. ಆಯ್ಕೆ
    ವ್ಯಕ್ತಿ - ವಿಶೇಷ

    ವಿಶ್ವದ ಪ್ರತಿಷ್ಠಿತ ಕಲಾ ಮೇಳಕ್ಕೆ ಕುಂದಾಪುರ ಮೂಲದ ತಲ್ಲೂರು ಎಲ್.ಎನ್. ಆಯ್ಕೆ

    Updated:17/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    L N Talluru 1

    Click Here

    Call us

    Click Here

    ಕುಂದಾಪುರ: ವಿಶ್ವದ ಅತ್ಯಂತ ಪ್ರತಿಷ್ಠಿತ ಸಮಕಾಲೀನ ಕಲಾ ಮೇಳವಾದ ಆರ್ಟ್ ಬಾಷೆಲ್‌ನ ‘ಆರ್ಟ್ ಅನ್ ಲಿಮಿಟೆಡ್‌’ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲು ಕುಂದಾಪುರ ಮೂಲದ ಕಲಾವಿದ ತಲ್ಲೂರು ಎಲ್.ಎನ್. ಆಯ್ಕೆ ಆಗಿದ್ದಾರೆ.

    ಸ್ವಿಡ್ಜರ್‌ಲ್ಯಾಂಡ್- ಜರ್ಮನಿ ಗಡಿ ಭಾಗದಲ್ಲಿರುವ ಬಾಷೆಲ್ ನಗರದಲ್ಲಿ ಇದೇ ಜೂ.13ರಿಂದ 16ರ ತನಕ ಈ ಕಲಾಮೇಳ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಪ್ರದರ್ಶನದಲ್ಲಿ ತಲ್ಲೂರು ಎಲ್.ಎನ್ ಅವರನ್ನು ಮುಂಬಯಿಯ ಕೆಮೊಲ್ಡ್ ಮತ್ತು ದಿಲ್ಲಿಯ ನೇಚರ್ ಮೋರ್ತಾ ಗ್ಯಾಲರಿಗಳು ಜೊತೆಯಾಗಿ ಪ್ರಾಯೋಜಿಸಿವೆ.

    ಆರ್ಟ್ ಅನ್ ಲಿಮಿಟೆಡ್ ಕಲಾ ಪ್ರದರ್ಶನದಲ್ಲಿ ಜಗತ್ತಿನಾದ್ಯಂತ ಆಯ್ದ 79 ಮಂದಿ ಕಲಾವಿದರು ಭಾಗವಹಿಸುತ್ತಿದ್ದು, ವಿವಿಧ ವಿಭಾಗಗಳಲ್ಲಿ ಜಗತ್ತಿನ ಒಟ್ಟು 300 ಗ್ಯಾಲರಿಗಳು ತಮ್ಮ ಕಲಾವಿದರ ಕಲಾಕೃತಿಗಳನ್ನು ಇಲ್ಲಿ ಪ್ರದರ್ಶಿಸಲಿದೆ.

    ತಲ್ಲೂರ್ ಎನ್. ಎಲ್ ಪರಿಚಯ:
    1971ರಲ್ಲಿ ತಾಲೂಕಿನ ತಲ್ಲೂರಿನಲ್ಲಿ ಜನಿಸಿದ ತಲ್ಲೂರು ಎಲ್. ಎನ್(ತಲ್ಲೂರು ಲಕ್ಷ್ಮೀನಾರಾಯಣ), ಮೈಸೂರು ವಿಶ್ವವಿದ್ಯಾನಿಲಯದಿಂದ ಚಿತ್ರಕಲೆಯಲ್ಲಿ ಬಿ.ಎಫ್.ಎ(bachelor of fine arts) ಪದವಿ, ಬರೋಡಾ ವಿಶ್ವವಿದ್ಯಾನಿಲಯದಿಂದ ಎಂ.ಎಫ್.ಎ ಪದವಿ ಪಡೆದು, ಯು.ಕೆಯ ಲೀಡ್ದ್ ವಿಶ್ವವಿದ್ಯಾನಿಲಯದಲ್ಲಿ ಸಮಕಾಲೀನ ಕಲೆ ಕುರಿತು ಎಂ.ಎ ಪದವಿ ಪಡೆದಿದ್ದಾರೆ. ಅವರು ಪ್ರಸ್ತುತ ದಕ್ಷಿಣ ಕೋರಿಯಾದಲ್ಲಿ ವಾಸವಾಗಿದ್ದಾರೆ.

    Click here

    Click here

    Click here

    Call us

    Call us

    ಪ್ರಶಸ್ತಿಗಳು:
    ತಲ್ಲೂರು ಎಲ್. ಎನ್ ಅವರಿಗೆ 1995ರಲ್ಲಿ ಕರ್ನಾಟಕ ಲಲಿತಕಲಾ ಅಡಾಡೆಮಿಯ ವಿದ್ಯಾರ್ಥಿ ವೇತನ, 1996ರಲ್ಲಿ ಭಾರತ ಸರ್ಕಾರದಿಂದ ರಾಷ್ಟೀಯ ವಿದ್ಯಾರ್ಥಿ ವೇತನ, 1997ರಲ್ಲಿ ದೆಹಲಿಯ ಇನ್ಲಾಕ್ಸ್ ಪೈನ್ ಆರ್ಟ್ ಪ್ರಶಸ್ತಿ, 1999ರಲ್ಲಿ ನ್ಯೂಯಾರ್ಕನಲ್ಲಿ ಎಮರ್ಜಿಂಗ್ ಆರ್ಟಿಸ್ಟ್ ಪ್ರಶಸ್ತಿ, 2003ರಲ್ಲಿ ದೆಹಲಿಯ ಸಂಸ್ಕ್ರತಿ ಫೌಂಡೇಶನ್ ನಿಡುವ ಸಂಸ್ಕೃತಿ ಪ್ರಶಸ್ತಿ ದೊರೆತಿರುವುದಲ್ಲಿದೇ 2012ರಲ್ಲಿ ಅವರು ತಮ್ಮ ಸಮಕಾಲೀನ ಕಲಾಕೃತಿಗಳಿಗಾಗಿ 12 ಲಕ್ಷ ನಗದು ಹೊಂದಿರುವ ವಿಶ್ವಪ್ರತಿಷ್ಠಿತ ‘ಸ್ಕೋಡಾ-2012’ ಪ್ರಶಸ್ತಿಯನ್ನು ಗೆದ್ದು ಕೊಂಡಿದ್ದರು.
    ತಲ್ಲೂರು ಎಲ್ ಎನ್ ಜಗತ್ತಿನ ವಿವಿಧ ದೇಶಗಳಾದ ಅಮೇರಿಕಾ, ಚೈನಾ, ಯೋರೋಪ್, ಜರ್ಮನಿ, ದಕ್ಷಿಣ ಕೋರಿಯಾ, ಲಂಡನ್ ಹಾಗೂ ಭಾರತದ ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದ್ದಾರೆ. ಹಲವಾರು ಕಾರ್ಯಾಗಾರ ಗಳಲ್ಲಿ ಭಾಗವಹಿಸಿದ್ದಾರೆ.
    ಕಲಾಮೇಳದಲ್ಲಿ ತಲ್ಲೂರು ಎಲ್.ಎನ್. ಅವರ ‘ವೆನಿ, ವಿಡಿ, ವಿಸಿ’ ಕಲಾಕೃತಿಗಳು ಪ್ರದರ್ಶನಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳ ಜೊತೆ ಬಾಷೆಲ್ ಮಿಷನರಿಗಳ ನಿಡುಗಾಲದ ಸಂಬಂಧಗಳ ಹಿನ್ನೆಲೆಯಲ್ಲಿ ಅವರದೇ ಕೊಡುಗೆಯಾದ ಹೆಂಚುಗಳನ್ನು ಬಳಸಿಕೊಂಡು ಸಿದ್ಧಪಡಿಸಿರುವ ಕಲಾಕೃತಿ ಮೂಲ ಬಾಷೆಲ್ ನಗರದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ಮಹತ್ವದ್ದೆನಿಸಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023

    ಸೃಜನಶೀಲ ವ್ಯಕ್ತಿತ್ವಕ್ಕೆ ಕೈಗನ್ನಡಿ ನರೇಂದ್ರ ಕುಮಾರ್ ಕೋಟ

    07/09/2021

    ಸಾಹಿತ್ಯಿಕ, ಸಾಂಸ್ಕೃತಿಕ ಪರಿಚಾರಿಕೆಯಲ್ಲಿ ಪ್ರಸನ್ನತೆ ಪಡೆಯುವ ಮರವಂತೆ ಪ್ರಕಾಶ ಪಡಿಯಾರ್

    01/08/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d