ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ: ಧಾರ್ಮಿಕ ಕಾರ್ಯಕ್ರಮ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶಾನುಸಾರ ಪ್ರಾಯ:ಶ್ಚಿತ್ತ ಶ್ರೀ ಲಘು ವಿಷ್ಣು ಹವನ, ಶ್ರೀದೇವರಿಗೆ ದ್ವಾದಶ ಕಲಶಾಭಿಷೇಕ ಹಾಗೂ ಕುಳಾವಿ ಬಾಂಧವರಿಂದ ಮುಷ್ಠಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.

Call us

Click Here

ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ದ್ವಾದಶ ಕಲಶಾಭಿಷೇಕ, ಮಧ್ಯಾಹ್ನ ಗಂಟೆಗೆ ಶ್ರೀ ಲಘು ವಿಷ್ಣು ಹವನ ಪೂರ್ಣಾಹುತಿ, ೧ ಗಂಟೆಗೆ ಮಹಾಪ್ರಾರ್ಥನೆ ನಡೆದು ಶ್ರೀ ದೇವರಿಗೆ ಮುಷ್ಠಿ ಕಾಣಿಕೆ ಸಮರ್ಪಣೆ ಮಾಡಲಾಯಿತು. ಮಧ್ಯಾಹ್ನ ಮಹಾ ಮಂಗಳಾರತಿ ಹಾಗೂ ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ಯಶಸ್ವಿಯಾಗಿ ಜರಗಿದವು. ದೇವಳದ ಧರ್ಮದರ್ಶಿ ಮಂಡಳಿ ಸದಸ್ಯರು, ಊರ ಪರವೂರ ಸಮಾಜ ಬಾಂಧವರು, ಕುಳಾವಿ ಬಾಂಧವರು, ಭಜಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

 

Leave a Reply