Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಕುಂದಾಪುರ ಮೂಲದವರು ಜ್ಯೂನಿಯರ್ ಎನ್‌ಟಿಆರ್!
    Recent post

    ನಮ್ಮ ಕುಂದಾಪುರ ಮೂಲದವರು ಜ್ಯೂನಿಯರ್ ಎನ್‌ಟಿಆರ್!

    Updated:03/04/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಟಾಲಿವುಡ್‌ನ ಪ್ರಖ್ಯಾತ ನಟ, ತೆಲುಗು ಸಿನಿಪ್ರೀಯರ ಕಣ್ಮಣಿ, ಜ್ಯೂನಿಯರ್ ಎನ್‌ಟಿಆರ್ ಕುಂದಾಪುರ ಮೂಲದವರು!

    Click Here

    Call us

    Click Here

    ಹೌದು. ಇಂತಹದ್ದೊಂದು ಹುಬ್ಬೇರಿಸುವ ಕಥೆಯನ್ನು ಸ್ವತಃ ಜ್ಯೂನಿಯರ್ ಎನ್‌ಟಿಆರ್ ಅದೂ ಶುದ್ಧ ಕನ್ನಡದಲ್ಲಿಯೇ ಹೇಳಿಕೊಂಡಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ಚಿತ್ರರಂಗದ ಪ್ರಖ್ಯಾತ ನಟ ಎನ್.ಟಿ. ರಾಮ ರಾವ್ ಅವರ ಮೊಮ್ಮಗನಾಗಿರುವ ಜ್ಯೂನಿಯರ್ ಎನ್‌ಟಿಆರ್ ಐಫಾ ಚಿತ್ರೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸುವ ಸಂದರ್ಭ ಭಾವುಕರಾಗಿ ತಮ್ಮ ಕುಂದಾಪುರದ ನಂಟನ್ನು ಬಿಚ್ಚಿಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಏನಂದ್ರು ಜ್ಯೂ. ಎನ್‌ಟಿಆರ್:
    ಐಫಾ ಚಿತ್ರೋತ್ಸವದ ಕೊನೆಯ ದಿನ ಅವರ ’ಜನತಾ ಗ್ಯಾರೇಜ್’ ಸಿನೆಮಾ ನಟನೆಗೆ ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತಿದ್ದರು. ಕಾಕತಾಳಿಯವೆಂಬಂತೆ ಕರಾವಳಿಯ ನಟ ರಕ್ಷಿತ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಲು ವೇದಿಕೆಗೆ ಬಂದಿದ್ದರು. ನಿರೂಪಕರು ನಟ ರಕ್ಷಿತ್ ಶೆಟ್ಟಿ ಅವರ ಪರಿಚಯ ಮಾಡುತ್ತಿದ್ದಾಗ ಅವರ ಊರಿನ ಬಗೆಗೆ ಹೇಳುತ್ತಿದ್ದರು. ಆಗ ಜ್ಯೂನಿಯರ್ ಎನ್‌ಟಿಆರ್ ತನಗೂ ಕರಾವಳಿಗೂ ಇರುವ ನಂಟನ್ನು ಬಿಚ್ಚಿಟ್ಟರು.

    ನನ್ನ ಅಮ್ಮ ಕನ್ನಡದವರು. ಅವರು ಮೂಲತಃ ಕುಂದಾಪುರದವರು. ತನ್ನ ತಾತ ಎನ್‌ಟಿಆರ್ ಕುಟುಂಬದ ಹಾಗೆಯೇ ನಮ್ಮ ಅಮ್ಮನದ್ದು ದೊಡ್ಡ ಕುಟುಂಬ ಆಗಾಗ ನಾನೂ ಅಲ್ಲಿಗೆ ಹೋಗಿ ಬರುತ್ತೇನೆ. ಕನ್ನಡ ಹಾಗೂ ಕರ್ನಾಟಕ ನನ್ನ ಬದುಕಿನಲ್ಲಿ ಗೊತ್ತಿಲ್ಲದೇ ಬೆಸೆದುಕೊಂಡಿದೆ ಎಂದು ಹೇಳುತ್ತಾ ಭಾವುಕರಾದರು. ಕುಂದಾಪ್ರ ಡಾಟ್ ಕಾಂ.

    ತೆಲುವು ಚಿತ್ರನಟ ನಂದಮುರಿ ಹರಿಕೃಷ್ಣನ್ ಹಾಗೂ ಶಾಲಿನಿ ಭಾಸ್ಕರ್ ರಾವ್ ದಂಪತಿಯ ಪುತ್ರರಾಗಿರುವ ಜ್ಯೂನಿಯರ್ ಎನ್‌ಟಿಆರ್ ಹುಟ್ಟಿ ಬೆಳೆದಿದ್ದೆಲ್ಲವೂ ಹೈದರಾಬಾದಿನಲ್ಲಿ. ಅವರ ತಾಯಿ ಶಾಲಿನಿ ಅವರ ಹುಟ್ಟೂರು ಕುಂದಾಪುರ. ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬ. ಚಿಕ್ಕವರಿರುವಾಗಲೇ ಹೈದರಾಬಾದಿಗೆ ಹೋಗಿ ನೆಲೆಸಿದ್ದರು. ಆದರೆ ಈಗಲೂ ಅಮ್ಮ ಮಗ ಕುಂದಾಪುರದ ನಂಟು ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.

    Click here

    Click here

    Click here

    Click Here

    Call us

    Call us

    Telugu actor junior ntr mother origin is kundapura. Junior nrt knows kannada well and told his link with kundapura in iifa award ceremony

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    three + 6 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.