ಕುಂದಾಪುರ : ಶೆಟ್ಲ ಬ್ಯಾಡ್ಮಿಂಟನ್ ಪಂದ್ಯಾ ಕೂಟದ ಬಹುಮಾನ ವಿತರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಜೆ.ಸಿ.ಐ ಕುಂದಾಪುರ ಚೆರಿಷ್ಮಾ ಮತ್ತು ಜೆ.ಸಿ.ಐ ಕುಂದಾಪುರದ ಆಶ್ರಯದಲ್ಲಿ ರೋಟರಿ, ಲಯನ್ಸ್ ಹಾಗೂ ಜೇಸಿ ಸದಸ್ಯರಿಗಾಗಿ ನೆಹರೂ ಪೇವಿಲಿಯನ್‌ನಲ್ಲಿ ನಡೆದ ಶೆಟ್ಲ ಬ್ಯಾಡ್ಮಿಂಟನ್ ಪಂದ್ಯಾಕೂಟದ ೪೦ ವಯೋಮಾನ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ರೋಟರಿ ಕ್ಲಬ್ ಕುಂದಾಪುರದ ಸತೀಶ್ ಕೋಟ್ಯಾನ್ ಮತ್ತು ರಾಜೇಶ್ ನಾಯರ್ ಪ್ರಥಮ ಸ್ಥಾನ ಪಡೆದರು.

Call us

Click Here

ರೋಟರಿ ಕ್ಲಬ್ ಕುಂದಾಪುರ ಸೌತ್‌ನ ಸುಪ್ರೀತ್ ಚಾತ್ರಾ ಮತ್ತು ಪ್ರಸಾದ್ ದ್ವೀತಿಯ ಸ್ಥಾನ, 40 ವಯೋಮಾನದೊಳಗಿನ ಪುರುಷರ ವಿಭಾಗದಲ್ಲಿ ರೋಟರಿ ಕ್ಲಬ್ ಕುಂದಾಪುರ ಸೌತ್‌ನ ವಿನಾಯಕ್ ಪೈ ಮತ್ತು ಸಂತೋಷ ಕಾಮತ್ ಪ್ರಥಮ, ಜೆಸಿಐ ಕುಂದಾಪುರದ ಚಂದನ್ ಮತ್ತು ಶಂಕರ್ ನಾರಾಯಣ ದ್ವಿತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದಲ್ಲಿ ಜೆಸಿಐ ಕುಂದಾಪುರ ಚರಿಷ್ಮಾದ ಗೀತಾಂಜಲಿ ಆರ್. ನಾಯ್ಕ್ ಮತ್ತು ರೋಶನಿ ಪ್ರಥಮ, ಜ್ಯೂನಿಯರ್ ಜೇಸಿ ಕುಂದಾಪುರದ ಸ್ಪಂದನಾ ಮತ್ತು ನಕ್ಷಾ ದ್ವಿತೀಯ ಸ್ಥಾನ ಪಡೆದರು.

ಬಹುಮಾನ ವಿತರಣಾ ಸಮಾರಂಭದಲ್ಲಿ ಹಂಗಳೂರಿನ ಸೂಪರ್ ಗ್ರೇಡ್ ಇಲೆಕ್ಟ್ರೀಕಲ್ ಕಂಟ್ರ್ಯಾಕ್ಟರ್ ಕೆ.ಆರ್. ನಾಯ್ಕ್, ಭಾರತೀಯ ಜೇಸಿಐನ ಪೂರ್ವ ಉಪಾಧ್ಯಕ್ಷ ಸದಾನಂದ ನಾವಡ, ಜೇಸಿಐ ಕುಂದಾಪುರದ ನಿಕಟಪೂರ್ವಾಧ್ಯಕ್ಷ ವಿಷ್ಣು ಕೆ.ಬಿ, ಜೆಸಿಐ ಕುಂದಾಪುರದ ಅಧ್ಯಕ್ಷೆ ಅಕ್ಷತಾ ಗಿರೀಶ್, ಜೇಸಿ ಕುಂದಾಪುರದ ಚರಿಷ್ಮಾದ ಅಧ್ಯಕ್ಷೆ ಗೀತಾಂಜಲಿ ಆರ್. ನಾಯ್ಕ್, ಕಾರ್ಯದರ್ಶಿ ಜಯಲಕ್ಷ್ಮೀ ಅರುಣ್, ಜ್ಯೂ.ಜೇಸಿ ಅಧ್ಯಕ್ಷ ಸುಬ್ರಮಣ್ಯ ಗುಲ್ವಾಡಿ, ಕಾರ್ಯಕ್ರಮ ನಿರ್ದೇಶಕರಾದ ಶರ್ಮಿಳಾ ಕಾರಂತ್, ಚಂದನ್ ಗೌಡ ಇನ್ನಿತರರು ಉಪಸ್ಥಿತರಿದ್ದರು.

Leave a Reply