Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ: ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನ ಭಜನೆ ಕಾರ್ಯಕ್ರಮ ಸಂಪನ್ನ
    Uncategorized

    ಕೋಟೇಶ್ವರ: ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನ ಭಜನೆ ಕಾರ್ಯಕ್ರಮ ಸಂಪನ್ನ

    Updated:12/04/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೋಟೇಶ್ವರ ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ವತಿಯಿಂದ ಸುಮಾರು ಓಂಭತ್ತು ದಿನಗಳ ಕಾಲ ವಿಶೇಷ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಪ್ರತಿದಿನ ಸಂಜೆ ೭ ರಿಂದ ರಾತ್ರಿ ೯.೩೦ರ ವರೆಗೆ ದೇವಸ್ಥಾನ ಪರಿಸರದ ದೊಡ್ಡೋಣಿ ರಸ್ತೆಯಲ್ಲಿರುವ ಹಲವಾರು ಮನೆಗಳಿಗೆ ತೆರೆಳಿ ದೇವರ ಭಜನೆ, ಸಂಕೀರ್ತನೆಯೊಂದಿಗೆ ಸಾಗಿ ಬಂದ ಭಜನಾ ತಂಡ ಮನೆಯ ಎದುರುಗಡೆ ಬಿಡಿಸಿದ ರಂಗೋಲಿ, ತುಳಸಿಕಟ್ಟೆ ಹಾಗೂ ದೀಪಕ್ಕೆ ಕುಣಿತ ಭಜನೆಯ ಮೂಲಕ ಸುತ್ತು ಬಂದು ಮುಂದೆ ಸಾಗಿದರು. ಕಾರ್ಯಕ್ರಮದ ಕೊನೆಯ ದಿನದಂದು ದೊಡ್ಮನೆಬೆಟ್ಟು ಶ್ರೀ ಆಂಜನೇಯ ದೇವಸ್ಥಾನ, ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ, ಶ್ರೀ ಕೋದಂಡ ರಾಮ ದೇವಸ್ಥಾನ, ಶ್ರೀ ಮಾರಿಯಮ್ಮ ದೇವಸ್ಥಾನ ಹಾಗೂ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆರಳಿ ದೇವರ ಸಮ್ಮುಖದಲ್ಲಿ ಕುಣಿತ ಭಜನೆ ನೆರವೇರಿಸಿದರು. ಈ ತಂಡದಲ್ಲಿ ಮಕ್ಕಳು, ಯುವಕರು, ಯುವತಿಯರು ಹೀಗೆ ಎಲ್ಲಾ ವಯೋಮಾನದ ಸದಸ್ಯರ ಉಪಸ್ಥಿತಿ ವಿಶೇಷ. ಇತ್ತೀಚೆಗೆ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಧರ ವಿ ಕಾಮತ್ ಮಾತನಾಡುತ್ತಾ ಭಜನೆಯ ಮೂಲಕ ದೇವಸ್ಥಾನದ ಸಾನಿಧ್ಯ ಹೆಚ್ಚಿಸಲು ಸಾಧ್ಯ ಎಂದು ಹೇಳಿದ್ದರು. ಇದರಿಂದ ಪ್ರೇರಣೆಗೊಂಡ ದೇವಸ್ಥಾನದ ಭಜನಾ ಮಂಡಳಿಯ ಸದಸ್ಯರು ಕುಣಿತ ಭಜನೆಯ ಮೂಲಕ ದೇವರ ಸೇವೆ ಸಲ್ಲಿಸಿದರು. ಪ್ರತಿ ದಿನದ ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು ಭಜನಾ ಮಂಡಳಿಯ ಸದಸ್ಯರಿಗೆ ಪನಿವಾರ, ಹಣ್ಣು ಹಂಪಲುಗಳನ್ನು ನೀಡಿ ಸತ್ಕರಿಸಿ ಮುಂದಿನ ದಿನಗಳಲ್ಲಿ ವರ್ಷಂಪ್ರತಿ ಇನ್ನೂ ಹಲವು ದಿನಗಳವರೆಗೆ ಈ ಕಾರ್ಯಕ್ರಮ ನಡೆಯಲಿ ಎಂದು ಆಶಿಸಿದರು.

    ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಪನ್ನಗೊಳಿಸಿದ ತಂಡದ ಸರ್ವ ಸದಸ್ಯರನ್ನು ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಶೆಟ್ಟಿಗಾರ್ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ರವೀಂದ್ರ ದೊಡ್ಮನೆ, ಶಿಲ್ಪಿ ರಾಜಗೋಪಾಲ ಆಚಾರ್ಯ, ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    seventeen − sixteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.