Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರಿನಲ್ಲಿ ಸಚಿವರುಗಳಿಂದ ಭರಪೂರ ಭರವಸೆ. ಅಭಿವೃದ್ಧಿ ಪರ ಸಮಾರಂಭಕ್ಕೆ ಸಾಕ್ಷಿಯಾಯ್ತು ಶಿರೂರು ಉತ್ಸವ
    ಊರ್ಮನೆ ಸಮಾಚಾರ

    ಶಿರೂರಿನಲ್ಲಿ ಸಚಿವರುಗಳಿಂದ ಭರಪೂರ ಭರವಸೆ. ಅಭಿವೃದ್ಧಿ ಪರ ಸಮಾರಂಭಕ್ಕೆ ಸಾಕ್ಷಿಯಾಯ್ತು ಶಿರೂರು ಉತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಶಿರೂರಿಗೆ ಹರಿದು ಬಂದ ಸಚಿವರ ದಂಡು, ಆದರ್ಶಗ್ರಾಮ ಯೋಜನೆಯಡಿಯಲ್ಲಿ ಊರಿನ ಅಭಿವೃದ್ಧಿ

    Click Here

    Call us

    Click Here

    _MG_1983
    ಬೈಂದೂರು: ಯಾವುದೇ ಊರಿನ ಅಭಿವೃದ್ಧಿಯಾಗಬೇಕಾದರೂ ಖಾಸಗಿ ವ್ಯಕ್ತಿಗಳ ಸಹಭಾಗಿತ್ವ ಅಗತ್ಯವಾದದು. ಸರಕಾರದೊಂದಿಗೆ ಖಾಸಗಿ ವ್ಯಕ್ತಿಗಳು ಕೈಜೋಡಿಸಿದಾಗಲೇ ಸಾಮಾಜಿಕ ಕಾರ್ಯಗಳು ಯಶಸ್ವಿಯಾಗಲು ಸಾಧ್ಯ ಎಂದು ಕರ್ನಾಟಕ ಸರಕಾರದ ಪಶಸಂಗೋಪನಾ ಸಚಿವ ಟಿ. ಬಿ. ಜಯಚಂದ್ರ ಹೇಳಿದರು.

    ಅವರು ಶಿರೂರು ಉತ್ಸವ 2015ರ ಎರಡನೇ ದಿನದ ಕಾರ್ಯಕ್ರಮದಲ್ಲಿ ಶಿರೂರಿನ ಅರ್ಹ ಫಲಾನುಭವಿಗಳಿಗೆ ಜಾನುವಾರುಗಳನ್ನು ದಾನ ನೀಡಿ ಮಾತನಾಡಿದರು. ಹಿಂದೂ ಧರ್ಮದಲ್ಲಿ ಗೋದಾನ ಶ್ರೇಷ್ಠವಾದದ್ದು. ಊರಿನ ಉದ್ಯಮಿಯೊಬ್ಬರು ಬಡವರ ಜೀವನ ನಿರ್ವಹಣೆಗಾಗಿ ಗೋವುಗಳನ್ನು ನೀಡುತ್ತಿರುವ ಕಾರ್ಯ ಶ್ಲಾಘನೀಯ. ಮಂದಿನ ದಿನಗಳಲ್ಲಿ ಗೋವುಗಳ ಚಿಕಿತ್ಸೆಗಾಗಿ ಬಹುಕಾಲದ ಬೇಡಿಕೆಯಾದ ಪಶುಆಸ್ಪತ್ರೆಯನ್ನು ನೀಡುವುದಾಗಿ ಅವರು ಭರವಸೆ ನೀಡಿದ ಅವರು ದೇವಸ್ಥಾನಗಳನ್ನು ಕಟ್ಟುವುದರಿಂದ ನಮಗೆ ದೇವರು ಹತ್ತಿರವಾಗುವುದಿಲ್ಲ ಬದಲಿಗೆ ಸಮಾಜದ ಕಟ್ಟಕಡೆಯ ಜನರಿಗೆ ಸಹಾಯ ಮಾಡುವ ಮೂಲಕ ದೇವರು ಹತ್ತಿರವಾಗುತ್ತಾನೆ ಎಂದರು.

    _MG_1979ಈ ಭಾಗದಲ್ಲಿ ಪ್ರಾಯೋಗಿಕವಾಗಿ ಶುದ್ಧ ಕುಡಿಯುವ ನೀರಿನ ಘಟಕ

    ಸಮಾರಂಭದಲ್ಲಿ ಅತಿಥಿಯಾಗಿದ್ದ ಕರ್ನಾಟಕ ಸರಕಾರದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್. ಕೆ. ಪಾಟೀಲ್ ಮಾತನಾಡಿ ಸಮದ್ರದ ತಟದಲ್ಲಿಯೇ ಇರುವ ಜನರಿಗೆ ಕುಡಿಯುವ ನೀರಿನದ್ದು ಬಹುದೊಡ್ಡ ಸಮಸ್ಯೆ. ಇದಕ್ಕೆ ಪರಿಹಾರೋಪಾಯವಾಗಿ ಸಮುದ್ರದ ನೀರನ್ನು ಶುದ್ಧೀಕರಿಸಿ ನೀರಿನ ಕೊರತೆಯನ್ನು ನೀಗಿಸುವ ಕೆಲಸವನ್ನು ಮಾಡಬೇಕಾಗಿದೆ. ಪ್ರಯೋಗಾರ್ಥವಾಗಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿರೂರಿನಲ್ಲಿಯೇ ಸಮುದ್ರದ ನೀರನ್ನು ಶುದ್ಧೀಕರಿಸುವ ಘಟಕ ಆರಂಭಿಸುವ ಭರವಸೆ ನೀಡಿದರು.

    Click here

    Click here

    Click here

    Call us

    Call us

    ದೇಶದ ಹಳ್ಳಿಗರಿಗೆ ಒಳ್ಳೆಯ ಜೀವನವನ್ನು ನೀಡಬೇಕು ಎಂದು ನಮ್ಮ ಜನ ಯೋಚಿಸಿದವರಲ್ಲ. ಪ್ರತಿ ಹಳ್ಳಿಗನಿಗೂ ಶುದ್ಧ ಕುಡಿಯುವ ನೀರು, ತಂತ್ರಜ್ಞಾನದ ಬಳಕೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಓದಗಿಸುವ ಮೂಲಕ ಸಮಾನತೆಯನ್ನು ಸಾಧಿಸಬೇಕಿದೆ. ಸಂಸದರ ಆದರ್ಶಗ್ರಾಮ ಯೋಜನೆ ಹಾಗೂ ಶಾಸಕರ ಗ್ರಾಮ ವಿಕಾಸ ಯೋಜನೆಯ ಸಮರ್ಪಕ ಅನುಷ್ಠಾನದಿಂದ ಇದು ಸಾಧ್ಯವಾಗಲಿದೆ. ಕೇಂದ್ರ ಸರಕಾರವು ಆದರ್ಶಗ್ರಾಮ ಯೋಜನೆಯಡಿಯಲ್ಲಿ ಕನಿಷ್ಠ 5ಕೋಟಿಯನ್ನು ಒದಗಿಸುವಂತಾದರೇ, ಯೋಜನೆಯು ಸಂಪೂರ್ಣವಾಗಿ ಯಶಸ್ವಿಯಾಗುತ್ತದೆ. ರಾಜ್ಯ ಸರಕಾರದ ಶಾಸಕರ ಗ್ರಾಮ ವಿಕಾಸ ಯೋಜನೆಯ ಮೂಲಕ ಶಾಸಕರು ಐದು ಗ್ರಾಮಗಳನ್ನು ಕೈಗೆತ್ತಿಕೊಳ್ಳಬಹುದಾಗಿದ್ದು, ಪ್ರತಿ ಗ್ರಾಮಕ್ಕೆ 75ಲಕ್ಷ ಅನುದಾನ ದೊರೆಯುತ್ತಲಿದೆ ಎಂದರು.

    ಬಳಿಕ ಅರಣ್ಯ ಸಚಿವ ರಮಾನಾಥ ರೈ ಮಾತನಾಡಿ ಕರಾವಳಿಗರಿಗೆ ಸಿ.ಆರ್.ಝಡ್ ಗಡಿ 200ಮೀ ದೂರದವರೆಗೆ ಇರುವುದರಿಂದ ಸಮಸ್ಯೆಯಾಗಿದೆ. ಗೋವಾ ಕೇರಳದಂತೆ ಅವರ ಮಿತಿಯನ್ನು 100ಮೀ. ಗುರುತಿಸುಲು ಕೇಂದ್ರ ಸರಕಾರ ಅನುವು ಮಾಡಿಕೊಡಬೇಕಾಗಿದೆ. ಕಸ್ತೂರಿರಂಗನ್ ವರದಿಯಲ್ಲಿ ಇಲ್ಲದೇ ಇರುವ ವಿಚಾರಗಳು ಚರ್ಚಿಗೆ ಬಂದು ದಾರಿ ತಪ್ಪಿಸುವ ಕೆಲಸ ಮಾಡಲಾಗಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

    ಆರೋಗ್ಯ ಸಚಿವ ಯು.ಟಿ ಖಾದರ್ ಮಾತನಾಡಿ ಇಂದು ಜನರಲ್ಲಿ ಸಾಮಾಜಿಕ ಮನೋಭಾವ ಕಡಿಮೆಯಾಗುತ್ತಿದೆ. ಯಾವುದೇ ಕಾರ್ಯಕ್ರಮದಲ್ಲಾದರೂ ಜನಸಾಮಾನ್ಯವರು ಸಕ್ರೀಯವಾಗಿ ತೊಡಗಿಸಿಕೊಂಡು ಊರಿನ ಅಭಿವೃದ್ಧಿಯಲ್ಲಿ ಭಾಗಿದಾರರಾಗಬೇಕು. ಸ್ವಚ್ಚತೆ ಹಾಗೂ ಆರೋಗ್ಯದ ಕಡೆಗೂ ಜನರು ವಿಶೇಷವಾದ ಗಮನ ಹರಿಸಬೇಕು ಎಂದರು.

    ಬೈಂದೂರು ಶಾಸಕ ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ವಿಜಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಸಾವಿತ್ರಿ ಅಳ್ವೆಗದ್ದೆ ಶಿರೂರು ವೆಲ್ಫೇರ್ ಟ್ರಸ್ಟ್ ನ ಸೈಯದ್ ಅಬ್ದುಲ್ ಖಾದರ್ ಬಾಶು, ಗ್ರಾ,ಪಂ. ಅಧ್ಯಕ್ಷ ರಾಮು ಮೇಸ್ತ, ಕಾಂಗ್ರೆಸ್ ಮುಖಂಡ ಎಂ. ಎ. ಗಪೂರ್ ಮೊದಲಾದವರು ಉಪಸ್ಥಿತರಿದ್ದರು.

    ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹಾಗೂ ಶಿರೂರು ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಸೈಯದ್ ಅಬ್ದುಲ್ ಖಾದರ್ ಬಾಶು ಅವರನ್ನು ಗೌರವಿಸಲಾಯಿತು.
    ಶಿರೂರು ಉತ್ಸವವ ಸಂಯೋಜಕ ಅರುಣಕುಮಾರ್ ಶಿರೂರು ಕಾರ್ಯಕ್ರಮವನ್ನು ನಿರ್ವಹಿಸಿ, ಕಾರ್ಯದರ್ಶಿ ಪುಪ್ಪರಾಜ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.