ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೊಸೂರು ಗ್ರಾಮದ ವಿಜಿತ್ ಕುಮಾರ್ ಅವರಿಗೆ ಇಟಲಿಯ ಪ್ರತಿಷ್ಠಿತ ಪಾಲಿಟೆಕ್ನಿಕೋ ಡಿ ಮಿಲಾನ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ವಿಜಿತ್ ಕುಮಾರ್ ಅವರ ‘ಹೈಡ್ರೋಜನ್ ಅಂಡ್ ಹ್ಯಾಲೊಜೆನ್ ಬಾಂಡಿಂಗ್; ಟವರ್ಡ್ಸ್ ಮೊಲಿಕ್ಯುಲರ್ ರೆಕೊಗ್ನಿಷನ್ ಅಂಡ್ ಸಪರೇಷನ್’ ಎಂಬ ಮಹಾಪ್ರಭಂದಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇಟಲಿಯ ಗ್ಯುಸೆಪ್ಪಿ ರೆಸ್ನಾಟಿಯವರ ಮಾರ್ಗದರ್ಶನದಲ್ಲಿ ಮತ್ತು ಜಪಾನ್ ನ ಟೋಕಿಯೋ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪಿಎಚ್ಡಿ ಪೂರೈಸಿದ್ದಾರೆ.
ವಿಜತ್ ಅವರು ಇಡೂರು-ಕುಂಜ್ಞಾಡಿಯ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಂಡ್ಸೆಯಲ್ಲಿ ಪಡೆದಿರುತ್ತಾರೆ. ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಮಡಿಕೇರಿಯ ಎಫ್.ಎಂ.ಕಾರ್ಯಪ್ಪ ಕಾಲೇಜು ಮತ್ತು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಹಳೆ ಪದವಿ ತನಕದ ಶಿಕ್ಷಣ ಪೂರೈಸಿದ್ದರು. ತಾಲೂಕಿನ ಹೊಸೂರು ಗ್ರಾಮದ ಸರೋಜಿನಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರರಾಗಿರುವ ವಿಜಿತ್ ಕುಮಾರ್, ಇಟಲಿಯ ಪಾಲಿಟೆಕ್ನಿಕೋ ಡಿ ಮಿಲಾನ್ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟೊರಲ್ ಫೆಲೋ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.