Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪುರಸಭೆ: ಯುಜಿಡಿ ಕಾಮಗಾರಿಗಾಗಿ ಅಗೆದ ರೋಡ್‌ಗಳನ್ನು ಸರಿಪಡಿಸಲು ಆಗ್ರಹ
    ಕುಂದಾಪ್ರದ್ ಸುದ್ಧಿ

    ಕುಂದಾಪುರ ಪುರಸಭೆ: ಯುಜಿಡಿ ಕಾಮಗಾರಿಗಾಗಿ ಅಗೆದ ರೋಡ್‌ಗಳನ್ನು ಸರಿಪಡಿಸಲು ಆಗ್ರಹ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:15ದಿನಗಳೊಳಗಾಗಿ ಅಪೂರ್ಣ ಯುಜಿಡಿ ಕಾಮಗಾರಿಗಳನ್ನು ಪೂರ್ಣಮಾಡಿ. ಮಳೆಗಾಲ ಸಮೀಪಿಸಿರುವುದರಿಂದ ನಗರದ ವಿವಿದೆಡೆ ಕಟ್ಟಿಂಗ್ ಮಾಡಲಾಗಿರುವ ರಸ್ತೆಗಳನ್ನು ಯಥಾ ಸ್ಥಿತಿಗೆ ತನ್ನಿ. ಮಳೆಗಾಲ ಮುಗಿಯುವವರೆಗೆ ಯಾವ ಸಿಮೆಂಟ್ ರಸ್ತೆಗಳನ್ನು ಕಟ್ಟಿಂಗ್ ಮಾಡಕೂಡದು.

    Click Here

    Call us

    Click Here

    ಕುಂದಾಪುರ ಪುರಸಭೆ ಡಾ. ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಯುಜಿಡಿ ಕಾಮಗಾರಿ ಬಗೆಗೆ ನಡೆದ ಚರ್ಚೆಯಲ್ಲಿ ಪಕ್ಷಭೇದ ಮರೆದು ಸದಸ್ಯರು ಯುಜಿಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ನಗರದ ವಿವಿಧೆಡೆ ಯುಜಿಡಿ ಕಾಮಗಾರಿಗಳು ಅಪೂರ್ಣಗೊಂಡಿದ್ದು ನಾಗರಿಕರು ತೀವ್ರ ತೊಂದರೆ ಉಂಟಾಗುತ್ತಿದೆ. ಶ್ರೀಘ್ರವೇ ಅಪೂರ್ಣ ಕಾಮಗಾರಿಗಳನ್ನು ಮುಗಿಸಿ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದರು. ರಿಂಗ್ ರಸ್ತೆಯಲ್ಲಿ ಯುಜಿಡಿ ಕಾಮಗಾರಿ ಸಾಧ್ಯವಿಲ್ಲ ಎನ್ನುತ್ತಿರಿ ಆದರೆ ಖಾಸಗಿ ಜಾಗದಲ್ಲಿ ನಿರ್ಮಾಣಗೊಂಡ ಸಮುಚ್ಚಯದ ಜಾಗದಲ್ಲಿ ಕಾಮಗಾರಿ ನಡೆದಿದೆ ಎಂದು ಆಕ್ಷೇಪಿಸಿದ ಸದಸ್ಯರು, ರಿಂಗ್‌ರೋಡಿನಲ್ಲಿಯೂ ಕಾಮಗಾರಿ ಮಾಡುವಂತೆ ಆಗ್ರಹಿಸಿದರು.

    ಸಂಗಮ್ ಪರಿಸರದಲ್ಲಿ ವೆಟ್‌ವೆಲ್ ನಿರ್ಮಾಣಕ್ಕೆ ನದಿ ಪಾತ್ರದ ಸರಕಾರಿ ಸ್ಥಳ ಗುರುತಿಸಿ ಅಂತಿಮಗೊಳಿಸಿದ್ದು, ಯುಜಿಡಿಗೆ ಬಿಟ್ಟುಕೊಡಲಾಗುವುದು ಎಂದರು. ವೆಟ್‌ವೆಲ್ ಹಾಗೂ ಎಸ್‌ಟಿಪಿಗೆ ಖಾಸಗಿ ಜಾಗ ಪಡೆದುಕೊಳ್ಳಲು ಈಗಾಗಲೇ ಹಣ ಮೀಸಲಿಟ್ಟಿದ್ದು ಅನುಮತಿ ದೊರೆತ ಕೂಡಲೇ ಹಣ ವರ್ಗಾವಣೆ ಮಾಡಲಾಗುವುದು ಎಂದರು.

    ಒಳಚರಂಡಿ ಇಲಾಖೆ ಸಹಾಯಕ ಅಭಿಯಂತರರು ರಕ್ಷಿತ್ ಪ್ರತಿಕ್ರಿಯಿಸಿ ರಸ್ತೆ ಕಟ್ಟಿಂಗ್, ಪೈಪ್ ಅಳವಡಿಕೆ ಕಾಮಗಾರಿ 29 ಕಿ.ಮೀ ಯಲ್ಲಿ 5 ಕಿ.ಮೀ ಮಾತ್ರ ಬಾಕಿ ಇದೆ. ಕಟ್ಟಿಂಗ್ ಆಗಿರುವ ರಸ್ತೆಗಳನ್ನು ಮಳೆಗಾಲದೊಳಗೆ ಇಂಟರ್‌ಲಾಕ್ ಮತ್ತು ಸಿಮೆಂಟ್ ಬಳಸಿ ಪೂರ್ಣಗೊಳಿಸಲಾಗುವುದು. ಮಳೆಗಾಲದ ಸಂದರ್ಭದಲ್ಲಿ ಯಾವ ರಸ್ತೆಗಳನ್ನು ಕಟ್ಟಿಂಗ್ ಮಾಡಲಾಗುವುದಿಲ್ಲ. ಸಮಸ್ಯೆ ಇದ್ದಲ್ಲಿ ಸದಸ್ಯರು ಗಮನಕ್ಕೆ ತಂದರೆ ಅದನ್ನು ಸರಿಪಡಿಸಲಾಗುವುದು ಎಂದರು.

    Click here

    Click here

    Click here

    Call us

    Call us

    ಮಳೆಗಾಲದ ತಯಾರಿ, ವಿದ್ಯುತ್ ಸಮಸ್ಯೆ ಹಾಗೂ ಅಜೆಂಡಾದ ಮೇಲೆ ಸಭೆಯಲ್ಲಿ ಚರ್ಚೆ ನಡೆಯಿತು. ಪುರಸಭೆ ಆಡಳಿತ ಪಕ್ಷದ ಸದಸ್ಯರಾದ ಮೋಹನದಾಸ್ ಶೆಣೈ, ಸತೀಶ್ ಶೆಟ್ಟಿ, ರವಿರಾಜ್ ಖಾರ್ವಿ, ಪುಪ್ಪಾ ಶೇಟ್, ವಿರೋಧ ಪಕ್ಷದ ಸದಸ್ಯರಾದ ಕಲಾವತಿ, ಪ್ರಭಾಕರ ಕೋಡಿ, ಶ್ರೀಧರ ಶೇರುಗಾರ್, ಚಂದ್ರಶೇಖರ ಖಾರ್ವಿ, ಸಂದೀಪ್ ಪೂಜಾರಿ ಮೊದಲಾದವರು ಮಾತನಾಡಿದರು. ವಸಂತಿ ಮೋಹನ್‌ಸಾರಂಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಜೇಶ್ ಕಾವೇರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸಿಸಿಲಿ ಕೋಟ್ಯಾನ್, ಮುಖ್ಯಾಧಿಕಾರಿ ಗೋಪಾಲಕೃಷ್ಣ ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d