Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದಲಿತರ ಸಮಸ್ಯೆ ಪರಿಹಾರಕ್ಕೆ ಇಲಾಖೆ ಸದಾ ಸಿದ್ಧ: ಕುಂದು ಕೊರತೆ ಸಭೆಯಲ್ಲಿ ಡಿವೈಎಸ್ಪಿ ಪ್ರವೀಣ್ ನಾಯ್ಕ್
    ಊರ್ಮನೆ ಸಮಾಚಾರ

    ದಲಿತರ ಸಮಸ್ಯೆ ಪರಿಹಾರಕ್ಕೆ ಇಲಾಖೆ ಸದಾ ಸಿದ್ಧ: ಕುಂದು ಕೊರತೆ ಸಭೆಯಲ್ಲಿ ಡಿವೈಎಸ್ಪಿ ಪ್ರವೀಣ್ ನಾಯ್ಕ್

    Updated:30/05/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಗ್ರಾಮ ಬೀಟ್ ಪೊಲೀಸ್ ಜೊತೆ ದಲಿತ ಮುಖಂಡರು ನಿರಂತರ ಸಂಪರ್ಕದಲ್ಲಿದ್ದು, ಏನಾದರೂ ಸಮಸ್ಯೆ ಇದ್ದರೆ ಬೀಟ್ ಪೊಲೀಸರ ಗಮನಕ್ಕೆ ತನ್ನಿ ಠಾಣೆಗೆ ಹೋಗುವ ಸಂದರ್ಭ ಬಂದರೆ ಬೀಟ್ ಪೊಲೀಸರ ಜೊತೆ ಹೋದರೆ ಅವರು ನಿಮ್ಮ ಸಮಸ್ಯೆ ಪರಿಹಾರ ನೀಡಲು ಸಹಕಾರ ಮಾಡುತ್ತಾರೆ ಎಂದು ಕುಂದಾಪುರ ಡಿಎಸ್ಪಿ ಪ್ರವೀಣ್ ಹೆಚ್. ನಾಯ್ಕ್ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನದಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮದಲ್ಲಿ ಅಕ್ರಮ ಸಾರಾಯಿ ದಂದೆ ನಡೆಯುತ್ತಿದ್ದು, ಅಬಕಾರಿ ಇಲಾಖೆ ಗಮನಕ್ಕೆ ತಂದರೆ ಅವರು ಅಕ್ರಮ ಮದ ಮಾರಾಟ ಮಾಡುವವವರಿಗೆ ಮಾಹಿತಿ ನೀಡಿ, ದಾಳಿ ನಡೆಸುವುದರಿಂದ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ನಾರಾಯಣ ಕಿರಿಮಂಜೇಶ್ವರ ಆರೋಪಿಸಿದ್ದು, ಉತ್ತರಿಸಿದ ಡಿಎಸಿ,ಅಬಕಾರಿ ಇಲಾಖೆ ಗಮನಕ್ಕೆ ತಂದು ಮುಂದೆ ಹೀಗಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.

    ತಲ್ಲೂರು ಗ್ರಾಮ ಉಪ್ಪಿನಕುದ್ರು ದಲಿತ ಕುಟುಂಬ ಕಳೆದ ೨೦ ವರ್ಷದಿಂದ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಹಾಕಿದರೂ ಮೆಸ್ಕಾಂ ಸಂಪರ್ಕ ನೀಡುತ್ತಿಲ್ಲ. ಅದೇ ಪರಿಸರದ ಬೇರೆ ಬೇರೆ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿ ಮೆಸ್ಕಾಂ ತಾರತಮ್ಯ ಮಾಡುತ್ತಿದೆ. ದಲಿತ ಕುಟುಂಬಕ್ಕೆ ತಕ್ಷಣ ವಿದ್ಯುತ್ ಸಂಪರ್ಕ ನೀಡುವಂತೆ ಸ್ಥಳೀಯ ದಲಿತ ಮುಂಡರು ಒತ್ತಾಯಿಸಿದರು.

    ಸುಳ್ಳು ದೂರು ನೀಡಿ ದಲಿತ ಕುಟುಂಬದ ಕುಡಿಯುವ ನೀರಿನ ವ್ಯವಸ್ಥೆ ನಿರಾಕರಿಸಲಾಗಿದೆ. ನಾವು ಯಾರಿಗೂ ಕುಡಿಯುವ ನೀರಿU ಅಡ್ಡಗಾಲಿಕ್ಕಿಲ್ಲ. ಆದರೂ ಸುಳ್ಳು ದೂರು ನೀಡಿದ್ದು, ಅದು ದಲಿತ ವಿರೋದಿ ಆಗಿದ್ದರಿಂದ ದೂರು ನೀಡಿದವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸುವಂತೆ ದಲಿತ ಮಹಾ ಒಕ್ಕೂಟ ಅಧ್ಯಕ್ಷ ಉದಯ ಕುಮಾರ್ ತಲ್ಲೂರು ಒತ್ತಾಯಿಸಿದರು.

    ಅಕ್ರಮ ಮರಗಳುಗಾರಿಕೆ ನಡೆಯುತ್ತಿದ್ದರೂ ಅದನ್ನು ತಡೆಯುತ್ತಿಲ್ಲ. ರಾತ್ರಿ ಮರಳು ಸಾಗಾಟ ನಡೆಯುತ್ತಿದೆ. ಹಳ್ನಾಡಿನಲ್ಲಿ ಮತ್ತೆ ಮರಳು ತೆಗೆಯಲಾಗುತ್ತಿದ್ದು, ಯಾರಿಗೆಪರವಾನಿಗೆ ನೀಡಲಾಗುದೆ ಎಂಬ ಸಂಪೂರ್ಣ ಮಾಹಿತಿ ನೀಡಿ.ಅಕ್ರಮ ಮರಳು ತೆಗೆಯುವ ಬಗ್ಗೆ ದೂರು ನೀಡದವರ ಮೇಲೆ ಹಲ್ಲೆ ನಡೆಯುತ್ತಿದೆ.ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

    Click here

    Click here

    Click here

    Call us

    Call us

    ಬೈಂದೂರು ವೃತ್ತ ನಿರೀಕ್ಷಕ ರಾಘವ ಪಡೀಲ್, ಕುಂದಾಪುರ ಪಿಎಸ್ಸೈ ನಾಸೀರ್ ಹುಸೇನ್, ಗಂಗೊಳ್ಳಿ ಪಿಎಸ್ಸೈ ಸುಬ್ಬಣ್ಣ, ಬೈಂದೂರು ಪಿಎಸ್ಸೈ ಸಂತೋಷ್ ಕಾಯ್ಕಿಣಿ, ಕೊಲ್ಲೂರು ಪಿಎಸ್ಸೈ ಶೇಖರ್ ಮೊದಲಾದವರು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    15 − 2 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.