Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವರ್ಗಾವಣೆಗೊಂಡ ನ್ಯಾಯಾಧೀಶ ಆರ್ ವಿ ಪಾಟೀಲ್ ಅವರಿಗೆ ಬೀಳ್ಕೊಡುಗೆ
    ಊರ್ಮನೆ ಸಮಾಚಾರ

    ವರ್ಗಾವಣೆಗೊಂಡ ನ್ಯಾಯಾಧೀಶ ಆರ್ ವಿ ಪಾಟೀಲ್ ಅವರಿಗೆ ಬೀಳ್ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ವಿ ಪಾಟೀಲ್ ಅವರನ್ನು ಕುಂದಾಪುರ ಬಾರ್ ಅಸೋಷಿಯೇಶನ್ ರಿ. ಕುಂದಾಪುರ ಇದರ ವತಿಯಿಂದ ಬೀಳ್ಕೊಡಲಾಯಿತು.

    Click Here

    Call us

    Click Here

    ಕುಂದಾಪುರದ ನ್ಯಾಯಾಲಯದಲ್ಲಿ ಮೂರು ವರ್ಷಗಳ ಕಾಲ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ಅವರು ಇದೀಗ ಬೆಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿರುತ್ತಾರೆ.

    ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿ ನನ್ನ ಅವಧಿಯಲ್ಲಿ ಬಹಳಷ್ಟು ಕಸ್ಟಡಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿದ ಸಮಾಧಾನ ಇದೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಧೀಶರಾದವರು ಸಾಕಷ್ಟು ಪರಿಶೀಲಿಸಿ ನ್ಯಾಯಾದಾನ ಮಾಡೋ ಅವಶ್ಯಕತೆ ಬಹಳಷ್ಟು ಇದೆ ಎಂದರಲ್ಲದೆ, ಕುಂದಾಪುರ ವಕೀಲರ ಸಹಕಾರವನ್ನು ಸ್ಮರಿಸಿದರು.

    ಕುಂದಾಪುರ ಬಾರ್ ಅಸೋಷಿಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ ನಾನು ಕಂಡ ಮೇಧಾವಿ ಜಡ್ಜ್‌ಗಳಲ್ಲಿ ಪಾಟೀಲ್ ಕೂಡಾ ಒಬ್ಬರು. ಮಾನವೀಯತೆಯ ಜೊತೆಗೆ ಪ್ರಕರಣಗಳನ್ನು ಸುಲಭವಾಗಿ ಪರಿಶೀಲಿಸಿ ನ್ಯಾಯದಾನ ಮಾಡುವ ಶಕ್ತಿ ಪಾಟೀಲ್‌ರಿಗೆ ಇದೆ. ಎಲ್ಲರನ್ನು ಪ್ರೀತಿಸುವ ಜೊತೆ, ಗೌರವದಿಂದ ನೋಡುವ ಭಾವನೆ ಇದ್ದು, ಅವರೊಬ್ಬ ಸೇಹ್ನ ಜೀವಿ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಲಾವಣ್ಯ ಎಚ್ ಎನ್, ೨ನೇ ಹಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚಂದ್ರಶೇಖರ ಬಣಕಾರ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಹಿರಿಯ ನ್ಯಾಯವಾದಿಗಳಾದ ಎ.ಬಿ.ಶೆಟ್ಟಿ, ಜಿ ಸಂತೋಷ್ ಕುಮಾರ್ ಶೆಟ್ಟಿ, ರಾಮಕೃಷ್ಣ ರಾವ್, ರವಿಕಿರಣ್ ಮುರ್ಡೆಶ್ವರ, ಟಿ.ಬಿ.ಶೆಟ್ಟಿ, ಕಾಳಾವಾರ ಉದಯ್ ಕುಮಾರ್ ಶೆಟ್ಟಿ, ಸಳ್ವಾಡಿ ನಿರಂಜನ್ ಹೆಗ್ಡೆ, ಎ. ಶಶಿಧರ ಹೆಗ್ಡೆ, ಕಾಳಾವರ ಪ್ರದೀಪ್ ಶೆಟ್ಟಿ, ಕೈಲಾಡಿ ಬಾಲಕೃಷ್ಣ ಶೆಟ್ಟಿ, ಕೆ.ಸಿ.ಶೆಟ್ಟಿ, ಕೆ. ಕುಸುಮಾಕರ ಶೆಟ್ಟಿ, ಕೆರಾಡಿ ಪ್ರಸನ್ನ ಕುಮಾರ ಶೆಟ್ಟಿ, ರಾಮದಾಸ್ ನಾಯಕ್, ಧನಂಜಯ ಶೆಟ್ಟಿ ಮತ್ತು ಸಹಾಯಕ ಸರಕಾರಿ ಅಭಿಯೋಜಕರಾದ ಮಮ್ತಾಜ್ ಮುಂತಾದವರು ನ್ಯಾಯಾಧೀಶರ ಸೇವೆಯನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

    ಕುಂದಾಪುರ ಬಾರ್ ಅಸೋಷಿಯೇಶನ್ ಕುಂದಾಪುರ ಇದರ ಪ್ರಧಾನ ಕಾರ್ಯದರ್ಶಿ ಹೆಚ್. ರವೀಶ್ಚಂದ್ರ ಶೆಟ್ಟಿ ವಂದಿಸಿದರು, ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.