Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಸರಕಾರಿ ಆಯುರ್ವೇದ ಆಸ್ಪತ್ರೆ ಔಷಧ ವಿತರಕಿ ಗೀತಾ ಅವರಿಗೆ ಬೀಳ್ಕೊಡುಗೆ
    ಊರ್ಮನೆ ಸಮಾಚಾರ

    ನಾವುಂದ ಸರಕಾರಿ ಆಯುರ್ವೇದ ಆಸ್ಪತ್ರೆ ಔಷಧ ವಿತರಕಿ ಗೀತಾ ಅವರಿಗೆ ಬೀಳ್ಕೊಡುಗೆ

    Updated:02/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸರಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ, ಆಸ್ಪತ್ರೆಯ ಬೆಳವಣಿಗೆಯಲ್ಲಿಯೂ ತಮ್ಮ ಕೊಡುಗೆಯನ್ನು ನೀಡಿದ್ದ ಔಷಧ ವಿತರಕಿ (ಫಾರ್ಮಾಸಿಸ್ಟ್) ಕೆ. ಗೀತಾ ಅವರ ನಿವೃತ್ತಿ ಜೀವನ ಉತ್ತಮವಾಗಿರಲಿ ಎಂದು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಡಿಗ ಹೇಳಿದರು.

    Click Here

    Call us

    Click Here

    ಅರೆಹೊಳೆ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಸರಕಾರಿ ಆಯುರ್ವೇದ ಆಸ್ಪತ್ರೆ ನಾವುಂದದಲ್ಲಿ ೩೨ ವರ್ಷಗಳ ಕಾಲ ಔಷಧ ವಿತರಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ. ಗೀತಾ ಅವರಿಗೆ ಇಲಾಖೆಯ ವತಿಯಿಂದ ಎರ್ಪಡಿಸಲಾದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿರುವ ಈ ಆಸ್ಪತ್ರೆಯಿಂದ ಅನೇಕರಿಗೆ ಅನುಕೂಲವಾಗಿದೆ. ಗ್ರಾಪಂದಿಂದ ಆಸ್ಪತ್ರೆಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಆದ್ಯತೆಯನ್ನು ನೀಡಲಾಗಿದ್ದು, ಆಸ್ಪತ್ರೆಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿನ ವೈದ್ಯರು, ಸಿಬ್ಬಂದಿಗಳು ಉತ್ತಮ ಸೇವೆ ನೀಡುತ್ತಿದ್ದಾರೆ ಎಂದರು.

    ನಿವೃತ್ತರಾಗುತ್ತಿರುವ ಕೆ. ಗೀತಾ ಅವರು ತಮಗೆ ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಸರಕಾರಿ ಅಧಿಕಾರಿಗಳಿಗೆ ಎಲ್ಲಿ ಕಠಿಣವಾಗಿರಬೇಕು, ಮೃದುವಾಗಿರಬೇಕು ಎಂದು ತಿಳಿದಿರಬೇಕು. ಸರಕಾರ ಜನತೆಗಾಗಿ ನೀಡಿದ ಸೌಲಭ್ಯವನ್ನು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ಪ್ರತಿಯೋರ್ವ ಸರಕಾರಿ ನೌಕರನ ಕರ್ತವ್ಯವಾಗಿದೆ. ನಾನು ಸರಕಾರದಿಂದ ಪ್ರತಿಫಲವನ್ನು ಪಡೆದು ಇಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ನನಗೆ ಹಿರಿಯ ಅಧಿಕಾರಿಗಳ, ಜನತೆಯ ಸಹಕಾರ ದೊರೆತಿರುವುದರಿಂದ ಉತ್ತಮ ಸೇವೆ ಮಾಡಲು ಅನುಕೂಲವಾಯಿತು ಎಂದರು. ಈ ಸಂದರ್ಭ ಆಸ್ಪತ್ರೆಯ ಸುಧಾರಣೆಗೆ, ಜನತೆಗೆ ಉತ್ತಮ ಸೇವೆ ನೀಡಲು ಗ್ರಾಮ ಪಂಚಾಯತ್ ನೀಡಿದ ಸಹಕಾರವನ್ನು ಸ್ಮರಿಸಿ, ಊರಿನ ಹಿರಿಯರು, ಗ್ರಾಮಸ್ಥರ ಸಹಕಾರವನ್ನು ಕೂಡಾ ಸ್ಮರಿಸಿದರು.

    ನಿವೃತ್ತರ ಸೇವಾ ಕಾರ್ಯದ ಕುರಿತು ಅವರ ಸಾಮಾಜಿಕ ಕಾಳಜಿಯ ಕುರಿತು ಊರಿನ ಪ್ರಮುಖರಾದ ನಾಗೇಶ ಶ್ಯಾನಭಾಗ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಬಾಡಕರ್ ಮಾತನಾಡಿದರು. ಅಮಾಸೆಬೈಲ್ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಹೇಮಲತಾ, ಯು. ಸೀತಾರಾಮ ಭಟ್ಟ ಉಪಸ್ಥಿತರಿದ್ದರು.

    ನಾವುಂದದ ಅರೆಹೊಳೆ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿನಯಾ ಸ್ವಾಗತಿಸಿ, ಪ್ರಾಸ್ತಾವಿಸಿದರು. ವೇದಘೋಷದ ಮೂಲಕ ವೆಂಕಟೇಶ ಶಾಸ್ತ್ರಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲ್ತೋಡು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ನಿರೂಪಿಸಿದರು. ಡಾ. ವಿನಯಾ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven − 11 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.