Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒತ್ತಿನಣೆ ಗುಡ್ಡ ಕುಸಿತ ಪ್ರದೇಶಕ್ಕೆ ಬೈಂದೂರು ಶಾಸಕರ ಭೇಟಿ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶಾಸಕ
    ಊರ್ಮನೆ ಸಮಾಚಾರ

    ಒತ್ತಿನಣೆ ಗುಡ್ಡ ಕುಸಿತ ಪ್ರದೇಶಕ್ಕೆ ಬೈಂದೂರು ಶಾಸಕರ ಭೇಟಿ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶಾಸಕ

    Updated:22/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸತತ ಮಳೆಯಿಂದಾಗಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಒತ್ತಿನಣೆ ಗುಡ್ಡ ಜರಿದು ಹೆದ್ದಾರಿ ತಡೆಯುಂಟಾದ ಪ್ರದೇಶಕ್ಕೆ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ವೀಕ್ಷಿಸಿದರು. ಇಲಾಖೆ ಹಾಗೂ ಗುತ್ತಿಗೆ ಪಡೆದ ಕಂಪೆನಿಯ ಅಭಿಯಂತರರಿಗೆ ಸತತವಾಗಿ ಮುನ್ನೆಚ್ಚರಿಕೆ ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

    Click Here

    Call us

    Click Here

    ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯೋಜನಾ ನಿರ್ದೇಶಕರು ಹಾಗೂ ಅರಣ್ಯ ಇಲಾಖೆಯ ಡಿಎಫ್‌ಓ ಅವರಿಗೆ ಕರೆಮಾಡಿದ ಶಾಸಕರು, ಕಳೆದ ಆರು ತಿಂಗಳುಗಳಿಂದ ಕಾಮಗಾರಿಯಿಂದ ಎದುರಾಗಬಹುದಾದ ಅಪಾಯದ ಮನ್ಸೂಚನ್ನೆಯನ್ನು ನೀಡಲಾಗಿತ್ತು. ಆದಾಗ್ಯೂ ಯಾರೋಬ್ಬರೂ ಈ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದ್ದೀರಿ. ಪ್ರತಿನಿತ್ಯ ಸಾವಿರಾರು ವಾಹನಗಳು ತಿರುಗಾಡುವ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ ಆಗುವ ಅನಾಹುತಗಳಿಗೆ ಹೊಣೆ ಯಾರು ಎಂದು ಪ್ರಶ್ನಿಸಿದರು. ನಿಮ್ಮ ನಿರ್ಲಕ್ಷ್ಯ ಅಮಾಯಕರ ಸಮಯ ಹಾಗೂ ಬದುಕಿನೊಂದಿಗೆ ಚಲ್ಲಾಟವಾಡುವಂತಿರಬಾರದು. ಕೂಡಲೇ ಎಲ್ಲರೂ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ಅರಣ್ಯ ಇಲಾಖೆಯ ಜಾಗದಲ್ಲಿ ಒತ್ತಿನಣೆ ಗುಡ್ಡದ ಮೇಲಿನಿಂದ ಹರಿದು ಬರುವ ನೀರು ಹೆದ್ದಾರಿಗೆ ಬೀಳದೇ ತಿರುವು ಮಾಡಿಕೊಟ್ಟಿದ್ದರೇ ಗುಡ್ಡ ಕುಸಿಯುವ ಪ್ರಮಾಣ ತೀವ್ರ ಕಡಿಮೆಯಾಗುತ್ತಿತ್ತು. ಗುತ್ತಿಗೆ ಕಂಪೆನಿಯವರಿಗೆ ನೀರು ಡೈವರ್ಷನ್ ಮಾಡಿ ಬಿಡಲು ಅರಣ್ಯ ನಿಯಮ ತಡೆಯುಂಟು ಮಾಡಿದೆ ಎನ್ನುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವವನ್ನು ಅರಿತು ಕ್ರಮ ಕೈಗೊಳ್ಳಲು ಒಪ್ಪಿಕೊಂಡಿದ್ದಾರೆ ಎಂದರು.

    ಗುತ್ತಿಗೆ ನಡೆಸುತ್ತಿರುವ ಐಆರ್‌ಬಿ ಕಂಪೆನಿ ತೀವ್ರ ಕಳಪೆ ಕಾಮಗಾರಿ ನಡೆಸುತ್ತಿದ್ದು ಹೇಗೆಂದರೆ ಹಾಗೆ ಕಾಮಗಾರಿ ನಡೆದಿದೆ. ತಲ್ಲೂರಿನಿಂದ ಶಿರೂರಿನ ತನಕ ರಸ್ತೆ, ಚರಂಡಿ, ಡೈವರ್ಷನ್ ಎಲ್ಲವೂ ಅಪಾಯಕಾರಿಯಾಗಿ ಪರಿಣಮಿಸಿದೆ. ಹತ್ತಾರು ಎಕರೆ ಕೃಷಿ ಗದ್ದೆಗಳಿಗೆ ಜೇಡಿ ಮಣ್ಣು ನುಗ್ಗಿ ಕೃಷಿ ಮಾಡದಂತಾಗಿದೆ. ಸುರತ್ಕಲ್‌ನಿಂದ ಕುಂದಾಪುರದವರೆಗೆ ನಡೆದ ಬೇರೊಂದು ಕಂಪೆನಿಯ ಕಾಮಗಾರಿ ಹಾಗೂ ಇಲ್ಲಿ ನಡೆಯುತ್ತಿರುವ ಐಆರ್‌ಬಿ ಕಂಪೆನಿಯ ಕಾಮಗಾರಿಯನ್ನು ತುಲನೆ ಮಾಡಿದರೆ ನಿಜಸ್ಥಿತಿ ಅರಿವಿಗೆ ಬರಲಿದೆ. ಒತ್ತಿನಣೆ ಅವಾಂತರದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರ ಗಮನಕ್ಕೆ ತರಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಮಾತನಾಡಿ ಕಾಮಗಾರಿಯಂದಾಗಿ ಮಳೆಗಾಲದಲ್ಲಿ ಆಗಬಹುದಾದ ಅಪಾಯದ ಬಗೆಗೆ ಸತತವಾಗಿ ಎಚ್ಚರಿಸಿದ್ದರೂ ಸಂಬಂಧಿಸಿದ ಕಂಪೆನಿಯಾಗಲಿ, ಇಲಾಖಾ ಅಧಿಕಾರಿಗಳಾಗಲಿ ಗಮನ ಹರಿಸಿಲ್ಲ. ಕರಾವಳಿಯ ಮಳೆಯ ಪ್ರಮಾಣ, ಮಣ್ಣಿನ ಗುಣಲಕ್ಷಣದ ಬಗೆಗೆ ಅರಿವಿದ್ದರೂ ಇಂತಹ ನಿರ್ಲಕ್ಷ್ಯ ಧೋರಣೆ ತೋರುವುದು ಸರಿಯಲ್ಲ. ಇದು ಹೀಗೆಯೇ ಮುಂದುವರಿದರೆ ಬೈಂದೂರಿನ ನಾಗರಿಕರು ತೀವ್ರ ಪ್ರತಿಭಟನೆ ನಡೆಸಲಿದ್ದಾರೆ ಎಂದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಗೋಕುಲ್ ಶೆಟ್ಟಿ, ಯುವ ಕಾಂಗ್ರೆಸ್‌ನ ಶೇಖರ್ ಪೂಜಾರಿ, ಪಡುವರಿ ಗ್ರಾಮ ಪಂಚಾಯತ್ ಸದಸ್ಯ ಮಾಣಿಕ್ಯ ಹೋಬಳಿದಾರ್ ಮೊದಲಾದವರು ಜೊತೆಗಿದ್ದರು.

    NH66
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    nine − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.