Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋಪ್ರೇಮಿ, ಮಾನವ ದ್ವೇಷಿ ಗೋ ಭಯೋತ್ಸಾದಕರು ಹೆಚ್ಚಿದ್ದಾರೆ: ಕೆ. ಎಲ್. ಅಶೋಕ್
    ಊರ್ಮನೆ ಸಮಾಚಾರ

    ಗೋಪ್ರೇಮಿ, ಮಾನವ ದ್ವೇಷಿ ಗೋ ಭಯೋತ್ಸಾದಕರು ಹೆಚ್ಚಿದ್ದಾರೆ: ಕೆ. ಎಲ್. ಅಶೋಕ್

    Updated:13/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಗೋವುಗಳನ್ನು ಪ್ರೀತಿಸಿ ಮನುಷ್ಯರನ್ನು ಕೊಲ್ಲುವ ಗೋ ಭಯೋತ್ಪಾದಕ ಪಡೆ ಇಂದು ಹುಟ್ಟಿಕೊಂಡಿದೆ. ಅವರುಗಳ ದಬ್ಬಾಳಿಕೆಗೆ ಹೆದರದೇ ಐಕ್ಯತೆಯಿಂದ ಮುನ್ನಡೆಯುವ ನಮ್ಮ ನಡೆಯಿಂದ ಅಮಾಯಕರ ಮೇಲೆ ಹಲ್ಲೆ ನಡೆಸಿದವರ ಎದೆ ನಡುಗಬೇಕು. ಈ ದೇಶದ ಮೂಲ ನಿವಾಸಿ ಜನಾಂಗದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿರುವವರನ್ನು ಬಂಧಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ. ಎಲ್. ಅಶೋಕ್ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟ, ಕರ್ನಾಟಕ ದಲಿತ ಹಿಂದುಳಿತ ಮತ್ತು ಅಲ್ಪಸಂತ್ಯಾತ ಸಂಘಟನೆಗಳ ಒಕ್ಕೂಟ, ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮೊವಾಡಿ ಚಲೋ ಜಾಥಾ ಮತ್ತು ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ಕರಾವಳಿಯಲ್ಲಿ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರು ಬದುಕಬಾರದು ಎಂದು ಬ್ರಾಹ್ಮಣ್ಯವನ್ನು ಉಸಿರಾಗಿಸಿಕೊಂಡಿರುವ ಸಂಘ ಪರಿವಾರ ನಿರ್ಧರಿಸಿವೆ. ಆಹಾರ ಕ್ರಮದಲ್ಲಿ ಶ್ರೇಷ್ಠ ಕನಿಷ್ಠ ಎಂದು ವಿಂಗಡಿಸುವ ಇಂತಹ ಮನಸ್ಥಿತಿಯವರಿಂದ ಕರಾವಳಿ ಜಿಲ್ಲೆಗಳಲ್ಲಿ ಗೋವಿನ ಕಾರಣಕ್ಕೆ ಎಷ್ಟೋ ಕೊಲೆಗಳಾಗಿವೆ ಆರ್ಥಿಕತೆಗೆ ಭಂಗವಾಗಿದೆ. ಮೇಲು ಕೀಳನ್ನು ಸಮರ್ಥಿಸುವ ಇಂತಹ ಸಂಘಟನೆಗಳಿಂದ ಯುವಕರು ದೂರ ಉಳಿಯುವುದು ಒಳ್ಳೆಯದು ಎಂದಅವರು ಹೇಳಿದರು.

    ದನ ತಿನ್ನುವುದಿಲ್ಲ ಎನ್ನುವವರ ಬಗ್ಗೆ ನಮಗೆ ಗೌರವವಿದೆ. ನಾವು ಅವರ ಆಹಾರ ಸಂಸ್ಕೃತಿಯನ್ನು ಪ್ರಶ್ನಿಸಲಾರೆವು. ಆದರೆ ಹಾಲು ಕೊಡದ, ವಯಸ್ಸಾದ ಜಾನವಾರುಗಳನ್ನು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರೆ ಗೋಪ್ರೇಮಿಗಳಲ್ಲಿ ಉತ್ತರವಿಲ್ಲ. ಗೋವು ಆಹಾರವಾಗಿ ಬೇಕು ಎಂಬುದನ್ನು ದೇಶದ ಬಹುಸಂಖ್ಯಾತರಾದ ಹಿಂದೂಗಳೇ ಹೇಳುತ್ತಾರೆ ಎಂದವರು ನುಡಿದರು.

    ದಲಿತರು ಹಾಗೂ ದಮನಿತರ ಮೇಲೆ ನಡೆಸುವ ಹಲ್ಲೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ನ್ಯಾಯ ಸಿಗುವ ತನಕ ಕೆಚ್ಚೆದೆಯಿಂದ ಹೋರಾಡುತ್ತೇವೆ ಎಂದ ಅವರು ಭಾರತದ ಪ್ರಜಾಪ್ರಭುತ್ವ ವಿರೋಧಿ ಕಾನೂನು ಎಲ್ಲಾ ಸಮಾಜದ ಎಲ್ಲಾ ವರ್ಗದವರ ಮೇಲೆಯೂ ಅಡ್ಡ ಪರಿಣಾಮ ಬೀರಲಿದೆ ಎಂದವರು ಹೇಳಿದರು.

    Click here

    Click here

    Click here

    Call us

    Call us

    ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಉದಯಕುಮಾರ್ ತಲ್ಲೂರು ಅಧ್ಯಕ್ಷತೆ ವಹಿಸಿದ್ದರು. ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಸಂಚಾಲಕ ಬಿ. ಆರ್. ಭಾಸ್ಕರ್ ಪ್ರಸಾದ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದರು. ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿ ಮಹಮ್ಮದ್ ಹೂಡೆ, ಕರ್ನಟಕ ಕೇರಳ ಕೊರಗ ಸಂಘಟನೆಗಳ ಅಭಿವೃದ್ಧಿ ಒಕ್ಕೂಟದ ಅಧ್ಯಕ್ಷ ಸುಂದರ ಬೆಳುವಾಯಿ, ಕೊರಗ ಸಂಘಟನೆಯ ಮುಖಂಡರಾದ ಗೌರಿ ಕೆಂಜೂರು, ಕೆ.ಕೆ.ಎಸ್.ವಿ ಉಡುಪಿ ಜಿಲ್ಲಾಧ್ಯಕ್ಷ ಜಿ. ರಾಜಶೇಖರ್, ಸುಂದರ್ ಮಾಸ್ತರ್, ಶೇಖರ ಹೆಜಮಾಡಿ, ಪ್ರಶಾಂತ್ ಜತ್ತನ್ನ, ವಿಶ್ವನಾಥ ಪೇತ್ರಿ, ಚಂದ್ರ ಅಲ್ತಾರು, ಮೈಕಲ್ ಪಿಂಟೋ, ಶಾಬನ್ ಹಂಗಳೂರು, ಹನಿಫ್ ಗಂಗೊಳ್ಳಿ, ಸುಂದರ ಕಪ್ಪೆಟ್ಟು, ಶ್ಯಾಮಸುಂದರ್ ತೆಕ್ಕಟ್ಟೆ, ಶ್ಯಾಮರಾಜ್ ಬಿರ್ತಿ, ಬೊಗ್ರ ಕೊರಗ ಕೊಕ್ಕರ್ಣೆ, ಚಂದ್ರಮ ತಲ್ಲೂರು, ಯಾಸಿನ್ ಕೋಡಿಬೇಂಗ್ರೆ, ಜೆರಾಲ್ಡ್ ನ್ಯೋಟನ್, ಅಸ್ಗರ್ ಅಲಿ, ಕೆ.ಎಸ್. ವಿಜಯ, ಸತೀಶ್ ತೆಕ್ಕಟ್ಟೆ, ವಿಠಲ್ ತೊಟ್ಟಂ, ವಾಸುನೇಜಾರ್, ಗೋಪಾಲ ವಿ, ಸುರೇಶ್ ಬಾಬು ಮೊದಲಾದವರು ಉಪಸ್ಥಿತರಿದ್ದರು.

    ಕರ್ನಾಟಕ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟ (ದಲಿತ ಸ್ವಾಭಿಮಾನಿ ಹೋರಾಟ ಸಮಿತಿ)ದ ಗೌರವಾಧ್ಯಕ್ಷ ರೆ.ಫಾ. ವಿಲಿಯಂ ಮಾರ್ಟಿಸ್, ಮೊವಾಡಿ ಚಲೋ ಜಾಥಾಕ್ಕೆ ಮೊವಾಡಿಯಲ್ಲಿ ಚಾಲನೆ ನೀಡಿ ಮಾತನಾಡಿದರು.
    ಮೊವಾಡಿಯಲ್ಲಿ ದೌರ್ಜನ್ಯಕ್ಕೊಳಗಾದ ಶಕುಂತಲಾ ಅವರು ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕುಂದಾಪುರ ಕ್ಯಾಥೋಲಿಕ್ ಸಭಾದ ವಿನೋದ್ ಕ್ರಾಸ್ತಾ ಸ್ವಾಗತಿಸಿ, ಎಸ್. ಎಸ್. ಪ್ರಸಾದ್ ಧನ್ಯವಾದಗೈದರು. ಅನಂತ ಮಚ್ಚಟ್ಟು, ವಸಂತ್ ವಂಡ್ಸೆ ನಿರೂಪಿಸಿದರು.

    ?
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.