Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲ್ಲಡ್ಕ ಅವರನ್ನು ಬಂಧಿಸುವ ಬದಲು ಕಾಂಗ್ರೆಸ್ ಪಕ್ಷದ ಗೂಂಡಾಗಳ ಬಂಧಿಸಲಿ: ರೈ ವಿರುದ್ದ ಪ್ರತಿಭಟನೆಯಲ್ಲಿ ಆಗ್ರಹ
    Recent post

    ಕಲ್ಲಡ್ಕ ಅವರನ್ನು ಬಂಧಿಸುವ ಬದಲು ಕಾಂಗ್ರೆಸ್ ಪಕ್ಷದ ಗೂಂಡಾಗಳ ಬಂಧಿಸಲಿ: ರೈ ವಿರುದ್ದ ಪ್ರತಿಭಟನೆಯಲ್ಲಿ ಆಗ್ರಹ

    Updated:20/06/20171 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಅಲ್ಪಸಂಖ್ಯಾತರನ್ನು ಓಲೈಸುವ ಕಾರಣಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸುವಂತೆ ಹೇಳಿರುವ ಸಚಿವ ರಮಾನಾಥ ರೈ ತುಷ್ಠೀಕರಣದ ರಾಜಕಾರಣ ಮಾಡಿದ್ದಾರೆ. ಹಿಂದೂಗಳು ಬಹಳ ಗೌರವದಿಂದ ಕಾಣುವ ಪ್ರಭಾಕರ ಭಟ್ ಅವರ ಹೆಸರನ್ನು ಗಲಭೆಯೊಂದಿಗೆ ತಳುಕು ಹಾಕಿ ಬಂಧಿಸುವಂತೆ ಒತ್ತಡ ಹೇರಿ ಅಧಿಕಾರ ದುರುಪಯೋಗ ಪಡೆಸಿಕೊಂಡಿದ್ದಾರೆ. ಇಂತವರು ಆಡಳಿತ ಯಂತ್ರದಲ್ಲಿ ಇರುವುದು ಸರಿಯಲ್ಲ. ತಕ್ಷಣವೇ ರಾಜಿನಾಮೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಆಗ್ರಹಿಸಿದರು.

    Click Here

    Call us

    Click Here

    ಬೈಂದೂರು ಪೇಟೆಯಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಸಚಿವ ರಮಾನಾಥ ರೈ ವಿರುದ್ಧ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

    ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಮಾತನಾಡಿ ಪ್ರಭಾಕರ ಭಟ್ ಅವರ ಮೇಲೆ ಕೇಸ್ ಹಾಕಬೇಕು ಎಂಬ ರಮಾನಾಥ ರೈ ಅವರು ಕಲ್ಲಡ್ಕದ ಪೇಟೆಯಲ್ಲಿ ಗಲಭೆ ಎಬ್ಬಿಸಿ ಓಡಿಹೋದವರು. ದಕ್ಷಿಣ ಕನ್ನಡದಲ್ಲಿ ಇರುವ ಕಾಂಗ್ರೆಸ್ ಸಚಿವ ಮಂತ್ರಿಗಳು ಗೂಂಡಾ ಹಿನ್ನೆಲೆಯವರು. ಮೊದಲು ಅವರ ಮೇಲೆ ಕೇಸ್ ಹಾಕಿ ಬಂಧಿಸಲಿ. ನಾಲ್ಕು ಗೋಡೆಗಳ ಮಧ್ಯೆ ನಿಂತು ಅಧಿಕಾರ ದುರುಪಯೋಗ ಪಡಿಸಿಕೊಳ್ಳುವ ಗೂಂಡಾ ಪ್ರವೃತ್ತಿ ನಿಲ್ಲಿಸಿ ಪ್ರಭಾಕರ ಭಟ್ ಅವರನ್ನು ನಿಂದಿಸಿರುವ ಬಗ್ಗೆ ಕ್ಷಮೆಯಾಚಿಸಲಿ ಎಂದವರು ಆಗ್ರಹಿಸಿದರು.

    ಉಪ್ಪುಂದ ಟೆಂಪೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಮಾತನಾಡಿ ಬಹುಸಂಖ್ಯಾತರನ್ನು ವಿರೋಧಿಸಿ ಅಲ್ಪಸಂಖ್ಯಾತರನ್ನು ತುಷ್ಠಿಕರಣ ಮಾಡಿದರೆ ಓಟ್ ಬ್ಯಾಂಕ್ ತಮ್ಮ ಪರವಾಗುತ್ತದೆ ಎಂಬ ಭಾವನೆ ಕಾಂಗ್ರೆಸ್ ನಾಯಕರಲ್ಲಿದೆ. ಹಾಗಾಗಿ ಆಗಿಂದಾಗಿ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಬರುವಂತಹ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ರಮಾನಾಥ ರೈಗಳು ಪ್ರಭಾಕರ ಭಟ್ ಅವರನ್ನು ಕೇಸ್ ಹಾಕಿ ಓಡಿಸುವ ಮೊದಲು ತಮಗೆ ಓಡುವ ಸಾಮಥ್ಯವಿದೆಯೇ ಎಂಬುದನ್ನು ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

    ವಿಶ್ವ ಹಿಂದೂ ಪರಿಷತ್ – ಬಜರಂಗದಳ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು ಮಾತನಾಡಿ ಕಾಂಗ್ರೆಸ್ ಪಕ್ಷದವರು ಸೈನಿಕ ಮುಖ್ಯಸ್ಥರನ್ನು ಗೂಂಡಾ ಎಂದು ಕರೆಯುತ್ತಿರಿ. ಪಕ್ಷಕ್ಕೆ ರಾಷ್ಟ್ರೀಯತೆ, ಹಿಂದುಗಳ ಮೇಲೆ ಗೌರವೂ ಇಲ್ಲ. ಹಿಂದೂಗಳು ದೇವರು ಎಂದು ಪೂಜಿಸುವ ಗೋವು ಹತ್ಯೆಗೆ ಬೆಂಬಲಿಸುತ್ತೀರಿ. ಹಿಂದೂಗಳನ್ನು ಕೆರಳಿಸಿ ತನ್ನ ಕಾರ್ಯಸಾಧಿಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ನೈತಿಕ ದಿವಾಳಿತನದತ್ತ ನಡೆದಿದೆ. ಮತಬ್ಯಾಂಕ್ ಭದ್ರಪಡಿಸಲು ಕೋಮು ಬಣ್ಣ ಹಚ್ಚಿ ಓಟ್ ಬ್ಯಾಂಕ್ ಆಗಿ ಪರಿವರ್ತಿಸಿಕೊಳ್ಳವ ತಂತ್ರ ನಡೆಯದು. ರಾಷ್ಟ್ರದ ಕೆಲವೆಡೆಯಷ್ಟೇ ತನ್ನ ಅಸ್ತಿತ್ವ ಉಳಿಸಿಕೊಂಡಿರುವ ಪಕ್ಷ ಇಂತಹ ಪ್ರವೃತ್ತಿ ಮುಂದುವರಿಸಿದರು ಹೇಳ ಹೆಸರಿಲ್ಲದಂತಾಗುತ್ತದೆ ಎಂದರು.

    Click here

    Click here

    Click here

    Call us

    Call us

    ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟ್ವಾಡಿ, ಶಂಕರ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಪುಪ್ಪರಾಜ್ ಶೆಟ್ಟಿ, ಸದಸ್ಯೆ ಮಾಲಿನಿ ಕೆ, ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ರೈತಮೊರ್ಚಾದ ದೀಪಕ್‌ಕುಮಾರ್ ಶೆಟ್ಟಿ, ಸಂಘಟನೆಯ ಪ್ರಮುಖರಾದ ಜಯಾನಂದ ಹೋಬಳಿದಾರ್, ಸದಾಶಿವ ಡಿ. ಪಡುವರಿ, ಜಗದೀಶ್ ಉಪ್ಪುಂದ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

    Read this: ಕಲ್ಲಡ್ಕ ಅವರ ಬಂಧನವಲ್ಲ, ಕೂದಲನ್ನೂ ಮುಟ್ಟಲಾಗದು: ಸುಬ್ರಹ್ಮಣ್ಯ ಹೊಳ್ಳ  – http://kundapraa.com/?p=23576 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    1 Comment

    1. Pingback: ಕಲ್ಲಡ್ಕ ಅವರ ಬಂಧನವಲ್ಲ, ಕೂದಲನ್ನೂ ಮುಟ್ಟಲಾಗದು: ಸುಬ್ರಹ್ಮಣ್ಯ ಹೊಳ್ಳ | Kundapra.com ಕುಂದಾಪ್ರ ಡಾಟ್ ಕಾಂ

    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.