Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಡಿಕೆ ಮಾರುವ ಹುಡುಗ ಕೃತಿ ಲೋಕಾರ್ಪಣೆ
    ಕುಂದಾಪ್ರದ್ ಸುದ್ಧಿ

    ಮಡಿಕೆ ಮಾರುವ ಹುಡುಗ ಕೃತಿ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಓದು ಹಾಗೂ ಗ್ರಹಿಕೆ ಹೆಚ್ಚಿಸಿಕೊಂಡು ಬರಹ ಜನನುಡಿಯಾಗಬಲ್ಲದು: ಡಾ| ರೇಖಾ ಬನ್ನಾಡಿ

    Click Here

    Call us

    Click Here

    ಕುಂದಾಪುರ: ಜಾಗತೀಕರಣದ ಪರಿಣಾಮದಿಂದಾಗಿ ಸ್ವರ್ಧೆಗೆ ಬಿದ್ದಿರುವ ಯುವಜನರು ಸೃಜನಶೀಲತೆಯನ್ನೇ ಮರೆತಿದ್ದಾರೆ. ಪೂರ್ತಿ ಗ್ರಾಮೀಣ ಸೊಗಡನ್ನು ಕಳೆದುಕೊಳ್ಳದ, ಸಂಪೂರ್ಣವಾಗಿ ಹೊಸತನಕ್ಕೆ ತೆರೆದುಕೊಳ್ಳದ ಕುಂದಾಪುರದಲ್ಲಿಯೂ ಸಾಹಿತ್ಯದ ಆಸಕ್ತಿ ಕ್ಷೀಣಿಸುತ್ತಿದೆ. ಇಂತಹ ಪರಿಸ್ಥಿತಿಯ ನಡುವೆಯೂ ಅಲ್ಲಲ್ಲಿ ಉತ್ತಮವಾದ ಸಾಹಿತ್ಯ ಸೃಷ್ಟಿಯಾಗುತ್ತಿರುವುದು ಅಭಿನಂದನಾರ್ಹ ಎಂದು ಉಪನ್ಯಾಸಕಿ ಡಾ| ರೇಖಾ ವಿ. ಬನ್ನಾಡಿ ಹೇಳಿದರು.

    _MG_2138

    ಅವರು ಕುಂದಪ್ರಭ ಟ್ರಸ್ಟ್ ನ ಆಶ್ರಯದಲ್ಲಿ ಜ್ಯೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ‘ಮಡಿಕೆ ಮಾರುವ ಹುಡುಗ’ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕವಿಯ ದಾರ್ಶನಿಕತೆ ಹಾಗೂ ಜನನುಡಿ ಕವಿತ್ವದಿಂದ ಹೊರಬೇರಬೇಕಾದರೆ ಆತನ ಓದು ಹಾಗೂ ಸಾಹಿತ್ಯ ಗ್ರಹಿಕೆಯ ಮಟ್ಟ ಹೆಚ್ಚಬೇಕು. ಮಡಿಕೆ ಮಾರುವ ಹುಡುಗ ಕೃತಿಯಲ್ಲಿ ಬಾಲ್ಯ ಹಾಗೂ ಬದುಕಿನ ಚಿತ್ರಣವನ್ನು ಕವಿಯು ಸರಳವಾಗಿ ಕಟ್ಟಿಕೊಟ್ಟಿರುವ ಕೆಲಸ ಮಾಡಿದ್ದಾರೆ ಎಂದರು.

    ಪುಸ್ತಕದ ಕುರಿತು ಮಾತನಾಡಿದ ಹಿರಿಯ ಸಾಹಿತಿ ಕೊ. ಶಿವಾನಂದ ಕಾರಂತ, ಮಡಿಕೆ ಮಾರುವ ಹುಡುಗ ಪುಸ್ತಕದ ಹೆಸರೇ ಕವಿ ಮನಸ್ಸುಗಳನ್ನು ಹಿಡಿದಿಡಬಲ್ಲ ಶಕ್ತಿಯನ್ನು ಹೊಂದಿದೆ. ಇಲ್ಲಿ ಕವಿ ಯಾರನ್ನೋ ಮೆಚ್ಚಿಸಲು ಕವನಗಳನ್ನು ಬರೆಯದೇ, ನೈಜತೆಯನ್ನು ಕವನಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಭಾವುಕತೆಗೂ ಹೊಸ ರೀತಿಯ ಚೌಕಟ್ಟನ್ನು ಹಾಕಿಕೊಟ್ಟಿದ್ದಾರೆ ಎಂದರು.

    Click here

    Click here

    Click here

    Call us

    Call us

    _MG_2220

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಮಾಜಿ ಕಸಾಪ ಅಧ್ಯಕ್ಷ ಎ.ಎಸ್.ಎನ್ ಹೆಬ್ಬಾರ್ ಮಾತನಾಡಿ ಕನ್ನಡ ಭಾಷೆಯನ್ನು ಯಾರೋ ಬಂದು ಉಳಿಸುವುದಿಲ್ಲ. ಎಲ್ಲಿಯೇ ಇದ್ದರೂ ಕೂಡ ತಮ್ಮ ಮಕ್ಕಳಿಗೆ ಕನ್ನಡ ಭಾಷೆಯನ್ನು ಕಲಿಸಬೇಕಾದ ಜವಾಬ್ದಾರಿ ತಂದೆತಾಯಿಗಳದ್ದು. ಮಕ್ಕಳಲ್ಲಿ ಭಾಷೆಯ ಬಗೆಗೆ ಅಭಿಮಾನ ಮೂಡಿಸುವುದೇ ನಿಜವಾದ ಕನ್ನಡದ ಕೆಲಸ ಎಂದ ಅವರು, ಮಡಿಕೆ ಮಾರುವ ಹುಡುಗ ಕವನ ಸಂಕಲನದಲ್ಲಿ ನಮ್ಮೂರ ಮಣ್ಣಿನ ವಾಸನೆ ಇದೆ. ಈ ಪರಿಸರದ ದುಃಖ ದುಮ್ಮಾನಗಳನ್ನು ಕವಿ ಚನ್ನಾಗಿ ಚಿತ್ರಿಸಿದ್ದಾರೆಂದರು.

    _MG_2209

    ಸಮಾರಂಭವನ್ನು ಸಿರಿ ಸೌಂದರ್ಯ ಕನ್ನಡ ಮಾಸಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚಿಕ್ಕಣ್ಣ ಉದ್ಘಾಟಿಸಿದರು. ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ನ ನಿರ್ದೇಶಕ ರಾಮಮೋಹನ್, ಸಾಹಿತಿ ಡಾ| ರಂಜಿತಕುಮಾರ್ ಶೆಟ್ಟಿ, ನಟ ನಿರ್ದೇಶಕ ಕಾಸರಗೋಡು ಚಿನ್ನಾ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಸಿರಿ ಸೌಂದರ್ಯ ಮಾಸ ಪತ್ರಿಕೆಯ ನಿರ್ದೇಶಕ ಸುರೇಶ್ ಚಿಕ್ಕಣ್ಣ, ಮಾಡಿಕೆ ಮಾರುವ ಹುಡುಗ ಕವನ ಸಂಕಲನದ ಕವಿ ಸಂದೀಪ ಶೆಟ್ಟಿ ಹೆಗ್ಗದ್ದೆ, ವಸ್ತು ಪ್ರದರ್ಶನ ಆಯೋಜಿಸಿದ ಜಿ.ಬಿ. ಕಲೈಕಾರ್ ಅವರನ್ನು ಗೌರವಿಸಲಾಯಿತು.

    ಕುಂದಪ್ರಭ ಟ್ರಸ್ಟ್ ನ ಯು,ಎಸ್. ಶೆಣೈ ಸ್ವಾಗತಿಸಿ, ಕೃತಿಕಾರ ಸಂದೀಪ್ ಶೆಟ್ಟಿ ಹೆಗ್ಗದ್ದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು, ನ್ಯಾಯವಾದಿ ರವಿಕುಮಾರ್ ಗಂಗೊಳ್ಳಿ ಧನ್ಯವಾದಗೈದರು, ಲೇಖಕ ಜಯವಂತ ಪೈ ವಂದಿಸಿದರು.

    ಸಮಾರಂಭದಲ್ಲಿ ಜಿ. ಬಿ. ಕಲೈಕಾರ್ ಅವರ ಸಂಗ್ರಹದ ಅಪೂರ್ವ ವಸ್ತುಗಳ ಪ್ರದರ್ಶನ ಹಾಗೂ ಸಂಗೀತ ರಸಮಂಜರಿಯನ್ನು ಆಯೋಜಿಸಲಾಗಿತ್ತು.

    _MG_2118 _MG_2126

    Madike Maruva Huduga
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.