ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕಲಿಕಾ ಸಾಮಾಗ್ರಿ ವಿತರಣಾ ಸಮಾರಂಭ’ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷ ಪ್ರಭಾಕರ್ ಗಾಣಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯತ್ ಸದಸ್ಯೆ ಭವಾನಿ, ಲಕ್ಷ್ಮೀ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟರಮಣ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಧಾನ ಪೋಷಕರು ಉಪಸ್ಥಿತರಿದ್ದರು.
ಸಹಶಿಕ್ಷಕಿ ಸಂಗೀತ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಗಾಣಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜ್ಯೋತಿ.ಎಚ್ ವಂದಿಸಿದರು. ಸಾರಿಕಾ ನಿರೂಪಿಸಿದರು. ಶಿಕ್ಷಕಿಯರಾದ ಭಾಗೀರಥಿ, ಅಂಬಾಬಾಯಿ ಮತ್ತು ಗೌರವ ಶಿಕ್ಷಕಿ ನಾಗರತ್ನ ಸಹಕರಿಸಿದ್ದರು.