ಸಾಲಮನ್ನದ ಪ್ರಯೋಜನ ಹೆಚ್ಚಿನ ರೈತರಿಗೆ ದೊರೆಯುವಂತೆ ಮಾಡಿ. ಮುಖ್ಯಮಂತ್ರಿಗಳ ಭೇಟಿಯಾದ ನಿಯೋಗ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೈತರ ಸಾಲಮನ್ನ ವಿಚಾರವಾಗಿ ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರಾವಳಿಯ ಸಚಿವರು, ಸಂಸದರು ಹಾಗೂ ಶಾಸಕರ ನಿಯೋಗ ಭೇಟಿಮಾಡಿ ಮನವಿ ಸಲ್ಲಿಸಿತು.

Call us

Click Here

ಕಾಂಗ್ರೆಸ್ ಸರಕಾರ ರೈತರ ಸಾಲಮನ್ನಾ ಘೋಷಿಸಿರುವ ಬಗ್ಗೆ ಸರಕಾರವನ್ನು ಅಭಿನಂದಿಸಿದ ನಿಯೋಗ, ಈ ಪ್ರಯೋಜನ ಇನ್ನೂ ಹೆಚ್ಷಿನ ರೈತರಿಗೆ ಲಭಿಸಬೇಕು. 2015-16ನೇ ಸಾಲಿನಲ್ಲಿ ಸಾಲ ಪಡೆದು ಅವಧಿ ಮುಗಿದ ಸಾಲವನ್ನು ಕ್ಲಪ್ತ ಸಮಯಕ್ಕೆ ಪಾವತಿಸಿ ಪುನಃ ಸಾಲ ನವೀಕರಣಕ್ಕೆ ಅರ್ಜಿ ಸಲ್ಲಿಸಿರುವ ರೈತರ ಸಾಲವನ್ನೂ ಕೂಡ ಮುಖ್ಯಮಂತ್ರಿಗಳು ಪರಿಶೀಲಿಸಿ ಮನ್ನಾ ಮಾಡಬೇಕೆಂದು ಈ ಸಮಯದಲ್ಲಿ ಒತ್ತಾಯಿಸಲಯಿತು.

ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಸಚಿವ ರಮನಾಥ ರೈ, ಸಚಿವ ಪ್ರಮೋದ್ ಮಧ್ವರಾಜ್, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಅವರು ನಿಯೋಗದಲ್ಲಿದ್ದರು.

Leave a Reply