ಜಿಎಸ್‌ಬಿ ಸಮಾಜದವರಿಂದ ಗಂಗೊಳ್ಳಿಯಿಂದ ತಿರುಪತಿಗೆ ಪಾದಯಾತ್ರೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀದೇವರ 350ನೇ ಪ್ರತಿಷ್ಠಾ ಮಹೋತ್ಸವದ ಸವಿನೆನಪಿಗಾಗಿ ಗಂಗೊಳ್ಳಿಯ ಗೌಡ ಸಾರಸ್ವತ ಸಮಾಜದ ಹನ್ನೊಂದು ಮಂದಿ ಗಂಗೊಳ್ಳಿಯಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

Call us

Click Here

ಸೋಮವಾರ ಬೆಳಿಗ್ಗೆ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಯಾತ್ರಾರ್ಥಿಗಳು ತಿರುಪತಿಯ ಶ್ರೀ ತಿಮ್ಮಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಆರಂಭಿಸಿದರು. ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀದೇವರ 350ನೇ ಪ್ರತಿಷ್ಠಾ ಮಹೋತ್ಸವದ ಸವಿನೆನಪಿಗಾಗಿ, ಗೌಡ ಸಾರಸ್ವತ ಸಮಾಜದ ಉನ್ನತಿ, ಗ್ರಾಮದ ಶ್ರೇಯೋಭಿವೃದ್ಧಿ, ಮತ್ಸ್ಯಕ್ಷಾಮ ನಿವಾರಣೆ ಹಾಗೂ ಗ್ರಾಮದಲ್ಲಿ ಸರ್ವರಿಗೂ ಸುಖಶಾಂತಿ ಲಭಿಸುವಂತಾಗಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕರಮಣ ಆಚಾರ್ಯ ನೇತೃತ್ವದಲ್ಲಿ ಮಹಾಪ್ರಾರ್ಥನೆ ನಡೆಯಿತು. ದೇವಳದ ಆಡಳಿತ ಮಂಡಳಿಯ ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ಜಿ.ವೆಂಕಟೇಶ ನಾಯಕ್, ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ, ಬಿ.ರಾಘವೇಂದ್ರ ಪೈ, ಎನ್.ರವೀಂದ್ರ ನಾಯಕ್, ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್, ಕೆ.ಶಾಂತಾರಾಮ ನಾಯಕ್, ಜಿ.ರವೀಂದ್ರ ಶೆಣೈ, ಜಿ.ಗಂಗಾಧರ ಪೈ, ಯು.ಶ್ರೀಕಾಂತ ಶೆಣೈ, ಜಿ.ಸುದರ್ಶನ ಆಚಾರ್ಯ, ಬದ್ರಿನಾಥ ಶೆಣೈ, ಆದಿತ್ಯ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ಗಣೇಶ ಶೆಣೈ ಮತ್ತು ಕೃಷ್ಣ ಪಡಿಯಾರ್ ನೇತೃತ್ವದಲ್ಲಿ ನವೀನ ಭಟ್ ಹಟ್ಟಿಯಂಗಡಿ, ಗಣೇಶ ಕಿಣಿ, ವಿಜೇಶ ಮಲ್ಯ, ವಿಜೇಶ ಪಡಿಯಾರ್, ವಿಘ್ನೇಶ ಪಡಿಯಾರ್, ಕೆ.ಹರೀಶ ನಾಯಕ್, ಜಿ.ವಿಜೇಂದ್ರ ನಾಯಕ್, ಜಿ.ವಿಷ್ಣುದಾಸ ಭಟ್, ಶ್ರೀಧರ ಪ್ರಭು ಕುಂದಾಪುರ ಇವರು ಪಾದಯಾತ್ರೆ ಕೈಗೊಂಡಿದ್ದು, ಜುಲೈ ೧೭ರಂದು ತಿರುಪತಿ ತಲುಪಲಿದ್ದಾರೆ.

 

Leave a Reply