ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಆರಂಭಗೊಂಡು ಸರಿಸುಮಾರು ಒಂದೂವರೆ ತಿಂಗಳಾದರೂ ಕೆಲವು ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾಗಿಲ್ಲ. ಶಾಲೆಗಳಲ್ಲಿ ನಾಲ್ಕೈದು ಪಾಠಗಳು ಮುಗಿದು ಕಿರುಪರೀಕ್ಷೆಗಳು ಹತ್ತಿರ ಬಂದರೂ ಮಕ್ಕಳಿಗಿನ್ನೂ ಪುಸ್ತಕ ದೊರೆತಿಲ್ಲ.
ಒಂದರಿಂದ ಹತ್ತನೇ ತರಗತಿಯ ತನಕ ಪಠ್ಯಪುಸ್ತಕ ದೊರೆತಿಲ್ಲ. ಎಸೆಸೆಲ್ಸಿ ವಿದ್ಯಾರ್ಥಿಗಳ ಕನ್ನಡ ಪಠ್ಯ ಪುಸ್ತಕ ದೊರೆತಿಲ್ಲ. ಕೆಲವು ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಝೆರಾಕ್ಸ್ ಪ್ರತಿಗಳನ್ನು ಕೊಟ್ಟು ಪಾಠ ಮಾಡುತ್ತಿದ್ದಾರೆ. ಈ ಬಗ್ಗೆ ಇಲಾಖೆಯನ್ನು ಪ್ರಶ್ನಿಸಿದರೇ ಒಂದು ವಾರದಲ್ಲಿ ಎಲ್ಲಾ ಶಾಲೆಗಳಿಗೂ ಪಠ್ಯ ಪುಸ್ತಕ ಪೂರೈಕೆ ಆಗಲಿದೆ ಎಂಬ ಭರವಸೆ ನೀಡಿದ್ದಾರೆ.