ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾಯ್ಕನಕಟ್ಟೆ ಕೆರ್ಗಾಲ್‌ನಲ್ಲಿ ಸರಕಾರಿ ಬಸ್ ನಿಲುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ನಾಯ್ಕನಕಟ್ಟೆ ಕೆರ್ಗಾಲ್ ಬಳಿ ಕುಂದಾಪುರ ಭಟ್ಕಳ ಸರಕಾರಿ ಬಸ್ ನಿಲುಗಡೆ ಮಾಡುವಂತೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಬೇಡಿಕೆಯಿಟ್ಟಿದ್ದು ಅದರಂತೆ ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಕೆರ್ಗಾಲಿನಲ್ಲಿ ಇಂದಿನಿಂದ ಬಸ್ ನಿಲುಗಡೆಗೊಳ್ಳಲಿದ್ದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Call us

Click Here

ಈ ಭಾಗದಲ್ಲಿ ಹಲವಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದು, ಸರಕಾರಿ ಬಸ್ ಪಾಸ್ ಸೌಲಭ್ಯದಿಂದ ವಂಚಿತರಾಗಿದ್ದರು. ಈ ಸಂಬಂಧ ಸಾರ್ವಜನಿಕರು ಸರಕಾರಿ ಬಸ್ ನಿಲುಗಡೆಗೆ ಬೇಡಿಕೆಯಿಟ್ಟಿದ್ದರು. ಇದಕ್ಕೆ ಸ್ಪಂದಿಸಿದ್ದ ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ದೇವಾಡಿಗ ಅವರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ ಕುಂದಾಪುರ ಡಿಪೋ ಮ್ಯಾನೆಜರ್ ಅವರ ಗಮನಕ್ಕೆ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದರು.

ಇಂದು ಮೊದಲ ಭಾರಿಗೆ ಬಸ್ ನಿಲುಗಡೆ ಮಾಡಲಾಗಿದ್ದುಸಾರ್ವಜನಿಕರು ಸಂತಸಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ತಾ.ಪಂ ಸದಸ್ಯ ಜಗದೀಶ ದೇವಾಡಿಗ, ಕೆರ್ಗಾಲ್ ಗ್ರಾಪಂ ಅಧ್ಯಕ್ಷ ಸೋಮ, ಉಪಾಧ್ಯಕ್ಷ ಸುಂದರ ಕೊಠಾರಿ, ಗ್ರಾಪಂ ಸದಸ್ಯರು ಜೊತೆಗಿದ್ದರು.

Leave a Reply