Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಕೆಲಸವನ್ನು ನಾವು ಗೌರವಿಸಿದರೆ ಸಮಾಜವೂ ಗೌರವಿಸುವುದು: ಶಿರೂರು ಶ್ರೀ
    ಊರ್ಮನೆ ಸಮಾಚಾರ

    ನಮ್ಮ ಕೆಲಸವನ್ನು ನಾವು ಗೌರವಿಸಿದರೆ ಸಮಾಜವೂ ಗೌರವಿಸುವುದು: ಶಿರೂರು ಶ್ರೀ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು. ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಧ್ವನಿ-ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ ಮಟ್ಟದ ಸೇವೆ ನೀಡಬಹುದು ಎಂದು ಉಡುಪಿ ಶಿರೂರು ಮಠಾಧಿಪತಿ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ನಾಗೂರು ಶ್ರೀ ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ನಡೆದ ಉಡುಪಿ ಜಿಲ್ಲಾ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಆರನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಸಂಘಟನೆಯ ಸರ್ವ ಸದಸ್ಯರ ಮಾಹಿತಿ ಕೈಪಿಡಿ ಅನಾವರಣ ಹಾಗೂ ’ವಿದ್ಯಾನಿಧಿ’ ಯೋಜನೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಧ್ವನಿ ಬೆಳಕು ಈಗ ಅನಿವಾರ್ಯ ವ್ಯವಸ್ಥೆ. ಅದರ ಸಂಯೋಜಕರು ಹಗಲು ರಾತ್ರಿಯೆನ್ನದೆ ದುಡಿಯುವ ಶ್ರಮಜೀವಿಗಳು. ವೃತ್ತಿಯೊಂದಿಗೆ ಅವರು ನಡೆಸುತ್ತಿರುವ ಸಮಾಜ ಸೇವೆಯ ಕಾರಣದಿಂದ ಸಮಾಜ ಸದಾ ಅವರನ್ನು ಗುರುತಿಸುತ್ತದೆ ಹಾಗೂ ಸ್ಮರಿಸುತ್ತದೆ ಎಂದರು.

    ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್. ಉದಯ್ ಆಚಾರ್ಯ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಗೌರವಾಧ್ಯಕ್ಷ ಆಂಟನಿ ಡೇಸಾ ಶಂಕರಪುರ ಇವರು ಮಹಾಸಭೆ ಉದ್ಘಾಟಿಸಿದರು. ಸಭೆಯ ನಡಾವಳಿಯಂತೆ ಜಿಲ್ಲಾ ಕಾರ್ಯದರ್ಶಿ ಕೆ. ದಾಮೋದರ್ ವಾರ್ಷಿಕ ವರದಿ, ಜಿಲ್ಲಾ ಕೋಶಾಧಿಕಾರಿ ಸಂತೋಷ್ ಶೆಟ್ಟಿಗಾರ್ ಆಯ-ವ್ಯಯ, ಲೆಕ್ಕಪತ್ರವನ್ನು ಮತ್ತು ಪ್ರಸ್ತುತ ಸಾಲಿನ ಬಜೆಟ್ ಮಂಡಿಸಿ ಅನುಮೋದನೆ ಪಡೆದರು. ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಿರಿಯ ಕಾರ್ಮಿಕರಿಗೆ ಮತ್ತು ವಲಯಗಳ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಲಾಯಿತು. ಸಂಘಕ್ಕೆ ನಿವೇಶನ ಪಡೆದು ಕಟ್ಟಡ ನಿರ್ಮಿಸುವ, ಸಂಘದ ಆಶ್ರಯದಲ್ಲಿ ಸಹಕಾರಿ ಸಂಘ ಸ್ಥಾಪಿಸುವ ಕುರಿತು ವಿಚಾರ ವಿನಿಮಯ ನಡೆಯಿತು. ಘಾಟ್ಗೇ ಕರ್ಕೇರಾ ಪವರ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಶೇಖರ ಕರ್ಕೇರಾ ಇವರಿಂದ ವಿದ್ಯುತ್ ಉಪಕರಣ ಹಾಗೂ ಜನರೇಟರ್‌ಗಳ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು.

    ಮನೆಗಳಲ್ಲಿ ರಾತ್ರಿ ನಡೆಯುವ ಕಾರ್ಯಕ್ರಮಗಳಲ್ಲಿ ಡಿಜೆ ಸೌಂಡ್ ಸಿಸ್ಟಮ್ ಬಳಸುವಾಗ ಪರಿಸರದ ನಿವಾಸಿಗಳಿಗೆ ತೊಂದರೆಯಾಗುತ್ತದೆ ಎಂಬ ದೂರು ಇರುವುದರಿಂದ ಅದನ್ನು ರಾತ್ರಿ ೧೧ರ ವರೆಗೆ ಮಾತ್ರ ಬಳಸುವ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿಗಳನ್ನು ವಿನಂತಿಸಲು ನಿರ್ಧರಿಸಲಾಯಿತು.

    ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಕುಂದಾಪುರ ವಲಯಾಧ್ಯಕ್ಷ ರೋನಿ ಬೆರೆಟ್ಟೊ, ಬ್ರಹ್ಮಾವರದ ಪುಂಡಲೀಕ್ ಕಾಮತ್, ಉಡುಪಿಯ ಅನಿಲ್ ಕುಮಾರ್, ಕಾಪುವಿನ ರಾಘು ಡಿ. ಕೋಟ್ಯಾನ್, ಕಾರ್ಕಳದ ವಲಯಾಧ್ಯಕ್ಷ ಜಗದೀಶ್ ಆಚಾರ್ ಮತ್ತಿತರು ಉಪಸ್ಥಿತರಿದ್ದರು. ಬೈಂದೂರು ವಲಯಾಧ್ಯಕ್ಷ ಎನ್. ಶಶಿಧರ್ ಶೆಣೈ ಸ್ವಾಗತಿಸಿ, ಪ್ರಾಸ್ತಾವಿಸಿದರು. ಶಾಂತಾರಾಮ ಮಣಿಪಾಲ್ ನಿರೂಪಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ

    15/11/2025

    ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

    15/11/2025

    ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ

    15/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ
    • ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 
    • ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
    • ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ
    • ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ಆರ್‌ಜೆ ನಯನಾ ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d