Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪಾಯಕಾರಿ ಕಲ್ಲುಕೋರೆ ಹೊಂಡಗಳನ್ನು ಮುಚ್ಚಿಸಿ: ಮಕ್ಕಳು ಮತ್ತು ಮಹಿಳಾ ಹಕ್ಕು ಹಾಗೂ ರಕ್ಷಣೆ ಕುರಿತು ಸಂವಾದದಲ್ಲಿ ಪವನ್ ಕುಮಾರ್
    ಊರ್ಮನೆ ಸಮಾಚಾರ

    ಅಪಾಯಕಾರಿ ಕಲ್ಲುಕೋರೆ ಹೊಂಡಗಳನ್ನು ಮುಚ್ಚಿಸಿ: ಮಕ್ಕಳು ಮತ್ತು ಮಹಿಳಾ ಹಕ್ಕು ಹಾಗೂ ರಕ್ಷಣೆ ಕುರಿತು ಸಂವಾದದಲ್ಲಿ ಪವನ್ ಕುಮಾರ್

    Updated:28/07/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಕ್ಕಳ ಮೇಲಿನ ದೌರ್ಜನ್ಯಕ್ಕೆ ನಿಮ್ಮ ಮುಂದೆ ನಿಂತ ನಾನೇ ಸಾಕ್ಷಿ! ಭೂಮಿ ಒಡಲು ಬಗೆದು ಕಲ್ಲು ತೆಗೆದು ಹಣಮಾಡಿಕೊಂಡು, ಹೊಂಡ ಮಾತ್ರಾ ಹಾಗೆ ಬಿಟ್ಟು ಮಕ್ಕಳ ಪ್ರಾಣಕ್ಕೆ ಕುತ್ತು ಬರುತ್ತಿದೆ. ರಾಷ್ಟ್ರೀಯ ಹೆದ್ದಾರಿ ಆಜುಬಾಜು ಬರುವ ಶಾಲಾ ಮಕ್ಕಳು ರಸ್ತೆ ದಾಟುವುದು ಒಂದು ಸಾಹಸ. ಭೂಮಿ ಬಗೆದು ಗಣಿಗಾರಿಕೆ ನಡೆಸಿರೋದು ಯಾರೋ, ಅಪಾಯಕಾರಿ ಹೊಂಡ ಮುಚ್ಚಲು ಸರಕಾರಿ ದುಡ್ಡು!

    Click Here

    Call us

    Click Here

    ಇದು ಜಿಲ್ಲಾಡಳಿತ, ತಾಲೂಕ್ ಪಂಚಾಯತ್, ಸಿಡಬ್ಲ್ಯೂಸಿ ಸಂಸ್ಥೆ, ಮಕ್ಕಳ ಸಂಘ, ಮಕ್ಕಳ ಹಾಗೂ ಮಹಿಳಾ ಮಿತ್ರರು ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಕ್ಕಳು ಮತ್ತು ಮಹಿಳಾ ಹಕ್ಕು ಹಾಗೂ ರಕ್ಷಣೆ ಕುರಿತು ನಡೆದ ಸಂವಹನದಲ್ಲಿ ಮಕ್ಕಳು ಸಮಸ್ಯೆಗಳ ಅನಾವರಣ ಮಾಡಿದ ಪರಿ.

    ಮಕ್ಕಳ ಮಿತ್ರ ಪ್ರತಿನಿಧಿ ಪವನ್‌ಕುಮಾರ್ ಮಾತನಾಡಿ, ತಾಲೂಕಿನಾದ್ಯಂತ ಇರುವ ಅಪಾಯಕಾರಿ ಕಲ್ಲುಕ್ವಾರೆ ಹೊಂಡಗಳು ಮಕ್ಕಳ ಪಾಲಿನ ಯಮಧೂತನಂತಿವೆ. ಕಲ್ಲು ಕಡಿದು ಹಣ ಮಾಡಿಕೊಳ್ಳುವುದು ಯಾರೋ. ಬಲಿಯಾಗುವುದು ಮಕ್ಕಳು. ಅಪಾಯಕಾರಿ ಕಲ್ಲುಕೋರೆ ಹೊಂಡ ಮುಚ್ಚುವಂತೆ ಒತ್ತಾಯಿಸಿದರು.

    ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪ ನಾಗ್ ಸಿ.ಟಿ., ಪ್ರತಿಕ್ರಿಯೆ ನೀಡಿ, ತಾಲೂಕಿನಲ್ಲಿರುವ ಕೆಲವೊಂದು ಅಪಾಯಕಾರಿ ಕಲ್ಲುಕ್ವಾರಿ ಹೊಂಡಗಳ ಮುಚ್ಚಲಾಗಿದೆ. ಹಾಗೆ ಉಳಿದ ಹೊಂಡಗಳ ಮುಚ್ಚುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೂ ಬಗ್ಗದೆ ಹೊಂಡ ಸುತ್ತಾ ಸುರಕ್ಷತೆ ಕ್ರಮ ಕೈಗೊಳ್ಳದಿದ್ದವರ ಪರವಾನಿಗೆ ರದ್ದು ಮಾಡಲಾಗುತ್ತದೆ. ಬೇನಾಮಿ ಕಲ್ಲುಕೋರೆ ಹೊಂಡಗಳ ಮುಚ್ಚಲು ಜಿಲ್ಲಾಡಳಿತವೇ ಕ್ರಮ ಕೂಗೊಳ್ಳಲಿದೆ ಎಂದು ಹೇಳಿದರು.

    ಮಕ್ಕಳ ಪ್ರತಿನಿಧಿ ಮೊಹಮ್ಮದ್ ಇಶ್ರಾಫ್ ಮಾತನಾಡಿ ಮಕ್ಕಳ ಮೇಲಿ ಇನ್ನೂ ದೌರ್ಜನ್ಯನಡೆಯುತ್ತಿದೆ ಎನ್ನೋದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ.ನನಗೆ ರಕ್ಷಣೆ ಕೊಡದಿದ್ದರೆ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರ ಬರೆದ ನಂತರ ನನಗೆ ನ್ಯಾಯ ಸಿಕ್ಕಿತು. ಅನ್ಯಾಯದ ವಿರುದ್ಧದ್ವನಿ ಎತ್ತುವ ಕೆಲಸ ಆಗಬೇಕು ಎಂದು ಹೇಳಿದರು.

    Click here

    Click here

    Click here

    Call us

    Call us

    ಮಕ್ಕಳ ಮಿತ್ರರಾದ ಶರತ್ ಮೋವಾಡಿ, ಜ್ಯೋತಿ, ಸಂಗೀತಾ ಶಂಖ ಇಂಗಡಿ, ಸತೀಶ್ ಪೂಜಾರಿ ಮಕ್ಕಳ ಮತ್ತು ಮಹಿಳೆಯರ ಸಮಸ್ಯೆಗಳ ಗಮನಕ್ಕೆ ತಂದರೆ. ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ರವೀಂದ್ರ ದೊಡ್ಮನೆ, ಕೊರ್ಗಿ ಗ್ರಾಪಂ ಉಪಾಧ್ಯಕ್ಷಗೌರೀಶ್ ಹೆಗ್ಡೆ, ಗೋಪಾಡಿ ಗ್ರಾಪಂ ಸದಸ್ಯ ಸುರೇಶ್ ಶೆಟ್ಟಿ, ಅಂಪಾರು ಗ್ರಾಪಂ ಉಪಾದ್ಯಕ್ಷ ಕಿರಣ್ ಹೆಗ್ಡೆ, ಬೈಂದೂರು ರೋಟರಿ ಮಾಜಿ ಅಧ್ಯಕ್ಷ ಎಂ. ಗೋವಿಂದ್ ಗಮನ ಸೆಳೆದರು. ನಮ್ಮ ಭೂಮಿ ಪ್ರತಿನಿಧಿ ಕೃಪಾ ಎಂ.ಎಂ. ತಾಲೂಕಿನಲ್ಲಿರುವ ಸಮಸ್ಯೆಗಳ ಅಂಕೆ, ಅಂಶ ನೀಡಿದರು.

    ಕುಂದಾಪುರ ತಾಲೂಕ್ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗವೀರ, ತಾಪಂ ಇಒ ಚೆನ್ನಪ್ಪ ಮೋಯಿಲಿ, ಅಕ್ರಮ ಮಧ್ಯ ಮಾರಾಟ ವಿರುದ್ಧದ ಹೋರಾಟಗಾರ‍್ತಿ ದೇವಿಯಕ್ಕಾ ಇದ್ದರು. ಅಪಾಯಕಾರಿ ನೀರಿನತೊಟ್ಟಿ ಏಣಿಗಳು, ಕಾಲುಸಂಕ, ವಿದ್ಯುತ್ ಕಂಬ ಹಾಗೂ ಲೈನ್, ಓವರ್ ಲೋಡ್ ಶಾಲಾ ವಾಹಣಗಳ ಸಂಚಾರ, ತ್ಯಾಜ್ಯ ವಿಲೇವಾರಿ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಕನ್ಯಾನ ನಮ್ಮ ಭೂಮಿ ವ್ಯವಸ್ಥಾಪಕ ದಾಮೋಧರ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ಮಕ್ಕಳ ಮಿತ್ರ ಶ್ರೀನಿವಾಸ ಗಾಣಿಗ, ನಿರೂಪಿಸಿ, ಸ್ವಾಗತಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    17 + 8 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.