Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇತರೆ ಭಾಷೆಗಳ ಕಲಿಕೆಗೆ ಮಾತೃಭಾಷೆಯೇ ತಳಹದಿ: ಕನರಾಡಿ ವಾದಿರಾಜ ಭಟ್
    ಊರ್ಮನೆ ಸಮಾಚಾರ

    ಇತರೆ ಭಾಷೆಗಳ ಕಲಿಕೆಗೆ ಮಾತೃಭಾಷೆಯೇ ತಳಹದಿ: ಕನರಾಡಿ ವಾದಿರಾಜ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶಾಲಾ ಹಂತದಲ್ಲಿ ಇಂಗ್ಲೀಷ್‌ನಂತಹ ಇತರೇ ಭಾಷೆಗಳಲ್ಲಿ ಮಗು ಪ್ರಭುತ್ವವನ್ನು ಸ್ಥಾಪಿಸಬೇಕಾದರೆ ಮಾತೃಭಾಷೆಯಲ್ಲಿ ಗಟ್ಟಿತನವಿರಬೇಕು. ಮಾತೃಭಾಷೆಯನ್ನೇ ಸರಿಯಾಗಿ ಕಲಿಯಲಾರದ ಮಗುವಿಗೆ ಎಂದು ಅಪರಿಚಿತವಾದ ಇನ್ನೊಂದು ಭಾಷೆ ಬೌದ್ಧಿಕ ಹೊರೆ. ಆದ್ದರಿಂದ ಪೋಷಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ,ಕನಿಷ್ಟ ಐದನೇ ತರಗತಿಯವರೆಗಾದರೂ ಮಕ್ಕಳಿಗೆ ತಮ್ಮ ಮಾತೃಭಾಷೆಯ ಮಾಧ್ಯಮದಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಪ್ರಖ್ಯಾತ ಚಿಂತನಕಾರರಾದ ಕನರಾಡಿ ವಾದಿರಾಜ ಭಟ್ ಅಭಿಪ್ರಾಯ ಪಟ್ಟರು.

    Click Here

    Call us

    Click Here

    ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨ನೇ ತರಗತಿಯ ಜೀವನ್ ಹುಟ್ಟು ಹಬ್ಬದ ಪ್ರಯುಕ್ತ ತಾಯಿ ತಂದೆ ಜ್ಯೋತಿ-ಚಂದ್ರ ಅವರು ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ ೬ನೇ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದರು.
    ಇದೇ ಸಂದರ್ಭದಲ್ಲಿ ೨೦೧೭-೧೮ನೇ ಸಾಲಿನ ತಿಂಗಳ ಕಲಿಕಾ ಪ್ರದರ್ಶನದ ಎರಡನೇ ಕಾರ್ಯಕ್ರಮ, ದಶಪ್ರಶ್ನೆ ಎಂಬ ವಿಶಿಷ್ಟ ಸ್ಪರ್ಧಾ ಕಾರ್ಯಕ್ರಮ ಹಾಗೂ ಸರ್ವಪೋಷಕರ ಸಭೆಯು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗರತ್ನ ಹೆಬ್ಬಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

    ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮನೋಜ್‌ಕುಮಾರ್ ಶೆಟ್ಟಿ, ಬಿದ್ಕಲ್‌ಕಟ್ಟೆ ಸಿ.ಆರ್.ಪಿ ಸುಧಾಕರ ಶೆಟ್ಟಿ, ಎಸ್.ಡಿ.ಎಂ,ಸಿ ಸದಸ್ಯರಾದ ಜ್ಯೋತಿ, ಪೋಷಕರಾದ ಗೋಪಾಲಕೃಷ್ಣ, ಮುಖ್ಯೋಪಾಧ್ಯಾಯರಾದ ನಾಗರತ್ನ ಹೆಬ್ಬಾರ್, ಸಹಶಿಕ್ಷಕರುಗಳಾದ ಸತೀಶ್ ಶೆಟ್ಟಿಗಾರ್, ರಮಣಿ, ಜ್ಯೋತಿಲಕ್ಷ್ಮಿ, ಚಿತ್ರಾ, ದೈಹಿಕ ಶಿಕ್ಷಣ ಶಿಕ್ಷಕಿ ಮಂಜುಳಾ, ಗೌರವ ಶಿಕ್ಷಕಿಯರಾದ ಮಹಾಲಕ್ಷ್ಮೀ, ಭಾರತಿ, ವೇದಾವತಿ, ವಿದ್ಯಾರ್ಥಿಗಳು ಹಾಗೂ ಸರ್ವ ಪೋಷಕರು ಉಪಸ್ಥಿತರಿದ್ದರು.
    ಪ್ರಾರಂಭದಲ್ಲಿ ಮುಖ್ಯೋಪಾಧ್ಯಾಯರಾದ ನಾಗರತ್ನ ಸ್ವಾಗತಿಸಿದರೆ, ಸಹಶಿಕ್ಷಕಿ ಚಿತ್ರಾ ಕುಮಾರಿ ವಂದಿಸಿದರು. ಚಾರಣದ ಸಂಪಾದಕರಾದ ಸಹಶಿಕ್ಷಕ ಸತೀಶ್ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    18 − 10 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.