Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಂಪಲ್ಲಾಗಿ ಸೆಟ್ಟೇರುತ್ತಿದೆ ಇನ್ನೊಂದು ಲವ್ ಸ್ಟೋರಿ
    ಕುಂದಾಪ್ರದ್ ಸುದ್ಧಿ

    ಸಿಂಪಲ್ಲಾಗಿ ಸೆಟ್ಟೇರುತ್ತಿದೆ ಇನ್ನೊಂದು ಲವ್ ಸ್ಟೋರಿ

    Updated:21/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ನಿರ್ದೇಶಕ ಸುನಿ ಅವರ ನಿರ್ದೇಶನದಲ್ಲಿ ಕುಂದಾಪುರ ತಾಲೂಕಿನ ವಿವಿಧೆಡೆ ಸಿನಿಮಾ ಚಿತ್ರೀಕರಣ. 

    Click Here

    Call us

    Click Here

    ಕುಂದಾಪುರ: ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ಚಿತ್ರದ ಯಶಸ್ವೀ ನಿರ್ದೇಶನದ ಮೂಲಕ ಯುವ ಮನಸ್ಸುಗಳನ್ನು ಗೆದ್ದಿದ್ದ ಸೈಲೆಂಟ್ ಸುನಿ ಅವರ ನಿರ್ದೇಶನದಲ್ಲಿ ಸದ್ದಿಲ್ಲದೇ ಮತ್ತೊಂದು ಚಿತ್ರ ಸೆಟ್ಟೇರಿದೆ. ಅದಾಗಲೇ ಚಿತ್ರದ ಒಂದು ಭಾಗ ಬೆಂಗಳೂರಿನಲ್ಲಿ ಚಿತ್ರೀಕರಣಗೊಂಡಿದ್ದು, ಕರಾವಳಿಯ ಸಂಬಂಧಿಸಿ ಚಿತ್ರಕಥೆಯ ಇನ್ನೊಂದು ಭಾಗ ಕುಂದಾಪುರ ತಾಲೂಕಿನ ಬೈಂದೂರು, ಕೋಡಿ ಹಾಗೂ ಮರ್ಡೇಶ್ವರ, ಅಪ್ಸರಕೊಂಡ, ಉಡುಪಿ ಮುಂತಾದೆಡೆ ಚಿತ್ರಿಕರಣಗೊಳ್ಳುತ್ತಿದೆ.

    ಸಿಂಪಲ್ಲಾಗಿ ಇನ್ನೊಂದ್ ಲವ್ ಸ್ಟೋರಿ! ವಿಭಿನ್ನವಾದ ಕಥಾ ಹಂದರವನ್ನು ಹೊಂದಿರುವ ಚಿತ್ರವನ್ನು ಜೀ ಕನ್ನಡದ ರಾಧಾ ಕಲ್ಯಾಣ ಧಾರಾವಾಹಿಯ ನಿರ್ಮಾಪಕ ಆಶುಬೆದ್ರ ಸುಮಾರು ಎರಡುವರೇ ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸುತ್ತಿದ್ದಾರೆ.

    ಪ್ರತಿಭಾವಂತ ನಟ ಜಾಲಿಡೇಸ್ ಖ್ಯಾತಿಯ ಪ್ರವೀಣ್ ಹಾಗೂ ಯಶಸ್ವಿ ನಟಿ ಮೇಘನಾ ಗಾವ್ಕರ್ ಅವರು ಚಿತ್ರದಲ್ಲಿ ಸಿಂಪಲ್ ಪ್ರೇಮಿಗಳಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪದ್ಮಜಾ ರಾವ್, ಸುರೇಶ್ ಮಂಗಳೂರು, ರವಿ ಭಟ್, ಪ್ರೇಮಲತಾ, ಅರ್ಚನಾ ಗಾಯಕವಾಡ್, ಶಿವಮಂಜು, ಆಶಾ ಜೈಸ್ ಮೊದಲಾದ ಹಿರಿ ಕಿರಿಯ ನಟರು ಅಭಿನಯಿಸುತ್ತಿದ್ದಾರೆ.

    ಸಿಂಪಲ್ಲಾಗಿ ಇನ್ನೊಂದು ಲವ್ ಸ್ಟೋರಿಯಲ್ಲಿ ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿಯ ಪ್ರಭಾವವಿದೆಯಾದರೂ ಚಿತ್ರಕಥೆ ಅದಕ್ಕಿಂತ ಭಿನ್ನವಾಗಿದೆ ಎನ್ನುತ್ತದೆ ಚಿತ್ರತಂಡ. ಚಿತ್ರದ ಬಗ್ಗೆ ಈಗಲೇ ಎಲ್ಲವನ್ನೂ ಹೇಳಲಾಗದು. ಸಿನೆಮಾದ ಟ್ರೇಲರ್ ಬಿಡುಗಡೆಗೊಳ್ಳುವ ತನಕ ಚಿತ್ರದ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಾರೆ ನಿರ್ದೇಶಕ ಸುನಿ.

    Click here

    Click here

    Click here

    Call us

    Call us

    ಎಲ್ಲಾ ಚಿತ್ರದಂತೆ ಇಬ್ಬರು ಪ್ರೇಮಿಗಳ ನಡುವೆ ಮೂಡುವ ಪ್ರೀತಿಯ ಹಂದರ, ಬೆಂಗಳೂರಿನಿಂದ ಕಾರವಾರದವರೆಗೆ ಪ್ರಯಾಣ ಸಾಗುತ್ತದೆ. ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಖುಷ್ ಹಾಗೂ ಖುಷಿ ಎಂಬ ಹೆಸರಿನಿಂದ ಕಾಣಿಸಿಕೊಂಡಿದ್ದಾರೆ. ಇಲ್ಲಿಯೂ ಮಾತು ಡೈಲಾಗ್ ಗಳಿಗೆ ಪ್ರಾಧಾನ್ಯ ನೀಡಲಾಗಿದೆ. ಕರಾವಳಿ ಪ್ರಮುಖ ಪ್ರದೇಶಗಳಲ್ಲಿ ಚಿತ್ರದ ಹಾಡು, ಪ್ರೇಮ ಸಲ್ಲಾಪ, ಎಂಜೆಜ್ಮೆಂಟ್ ಮುಂತಾದ ಸನ್ನಿವೇಶಗಳು ಚಿತ್ರೀಕರಣಗೊಳ್ಳುತ್ತಿದೆ. ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು ಅದರಲ್ಲಿ 2 ಹಾಡುಗಳ ಚಿತ್ರಿಕರಣ ಈಗಾಗಲೇ ಮುಗಿದಿದೆ. ಹಾಡುಗಳಿಗೆ ಭರತ್ ಹಾಗೂ ಸಾಯಿಕಿರಣ್ ಸಂಗೀತ ನೀಡಿ, ಸಾಹಿತ್ಯ ಬರೆದಿದ್ದಾರೆ.

    Simple agi innod love story2

    ಚಿತ್ರದ ನಾಯಕ ಪ್ರವೀಣ ಮೂಲತಃ ಹೊಸನಗರದವರು. ಇವರ ತಂದೆ ಹೊಸಂಗಡಿಯಲ್ಲಿ ಉದ್ಯೋದಲ್ಲಿದ್ದುದರಿಂದ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ತಾಲೂಕಿನ ಹೊಸಂಗಡಿಯಲ್ಲಿ ಕಳೆದಿದ್ದರು. ಹಾಗಾಗಿ ಅವರಿಗೆ ಕುಂದಾಪುರವೆಂಬುದು ಪರಿಚಿತ. ಇಲ್ಲಿನ ವಾತಾವರಣವೂ ಅಚ್ಚುಮೆಚ್ಚು ಎನ್ನುತ್ತಾರೆ. ಜಾಲಿಡೇಸ್, ಕೋಕೊ, ಆಂತರ್ಯ ಮೊದಲಾದ ಸಿನೆಮಾ, ಟಿ.ವಿ. ಕಾರ್ಯಕ್ರಮಗಳ ನಿರೂಪಣೆ, ರಾಧಾ ಕಲ್ಯಾಣ ಧಾರಾವಾಹಿಗಳಲ್ಲಿ ನಟಿಸಿದ್ದ ಪ್ರವೀಣ ಈ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚುತ್ತಿದ್ದಾರೆ.

    Simple agi innod love story4

    ಮೇಘನಾ ಗಾವ್ಕರ್ ಮೂಲತಃ ಗುಲ್ಬರ್ಗಾದವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ನರ ಪದವಿ, ಆದರ್ಶ ಫಿಲ್ಮ ಇಸ್ಟಿಟ್ಯೂಟ್ ನಲ್ಲಿ ಚಿತ್ರ ನಟನೆಯನ್ನು ಕಲಿತ ಬಳಿಕ ಚಿತ್ರರಂಗದತ್ತ ಮುಖಮಾಡಿವರು. ನಮ್ ಏರಿಯಾಲಿ ಒಂದಿನ, ವಿನಾಯಕ ಗೆಳೆಯರ ಬಳಗ, ತುಘಲಕ್, ಚಾರ್ಮಿನಾರ್ ಚಿತ್ರಗಳಲ್ಲಿ ನಟಿಸಿ ಮಿಂಚಿದ್ದರು. ನಟನೆಯಷ್ಟೇ ಅಲ್ಲದೇ ಸಾಹಿತ್ಯ ಹಾಗೂ ಬರವಣಿಗೆಯಲ್ಲಿ ಅಭಿರುಚಿಯುಳ್ಳ ಅವರು ನೃತ್ಯದಲ್ಲೂ ಎತ್ತಿದ್ದ ಕೈ.
    ಕುಂದಾಪುರದ ಪರಿಸರ ಬಗ್ಗೆ ಪ್ರತಿಕ್ರಿಯಿಸಿದ ಮೇಘನಾ ಕುಂದಾಪುರ ಸೆಕೆಯನ್ನು ತಡೆದುಕೊಳ್ಳಲಾಗುತ್ತಿಲ್ಲ. ಆದರೂ ಈ ಪರಿಸರ ನನಗೆ ಅಚ್ಚುಮೆಚ್ಚು. ಈ ಹಿಂದೆಯೂ ನಾನು 3 ಬಾರಿ ಚಿತ್ರಿಕರಣಕ್ಕಾಗಿ ಇಲ್ಲಿಗೆ ಬಂದಿದ್ದೆ. ಪ್ರತಿ ವರ್ಷ ಇಷ್ಟದೇವರಾದ ಕೊಲ್ಲೂರು ಮೂಕಾಂಬೆಯ ದರ್ಶನಕ್ಕೆ ಬರುತ್ತಿರುತ್ತೇನೆ ಎಂದಿದ್ದಾರೆ.

    Simple agi innod love story3

    ಕುಂದಾಪುರದ ಕೋಡಿಯ ಬೀಚ್ ಹಾಗೂ ಚಕ್ರಮ್ಮ ದೇವಸ್ಥಾನದ ಪರಿಸರದಲ್ಲಿ ಚಿತ್ರೀಕರಣ ನಡೆಯುತ್ತಿದೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.