Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಸ್ತುಬದ್ಧರಾಗಿಯೂ ಜನಪ್ರೀತಿ ಗಳಿಸಿದ ಸಾಧಕ: ವಿವೇಕ ರೈ
    ಕುಂದಾಪುರ

    ಶಿಸ್ತುಬದ್ಧರಾಗಿಯೂ ಜನಪ್ರೀತಿ ಗಳಿಸಿದ ಸಾಧಕ: ವಿವೇಕ ರೈ

    Updated:14/08/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಾಮಾನ್ಯವಾಗಿ ಬಹಳ ಶಿಸ್ತುಬದ್ಧರಾಗಿ ಜೀವನ ನಡೆಸುವವರು ಜನರಿಂದ ದೂರವಿರುತ್ತಾರೆ. ಪರಂಪರೆಯಲ್ಲಿ ಅಭಿಮಾನವುಳ್ಳವರು ಆಧುನಿಕತೆ ಯನ್ನು ನಿರಾಕರಿಸು ತ್ತಾರೆ ಹಾಗೂ ಸಮುದಾಯದಿಂದ ದೂರವಿರುತ್ತಾರೆ ಎನ್ನುವುದು ಪ್ರತೀತಿ. ಆದರೆ ಇದಕ್ಕೆ ಭಿನ್ನವಾಗಿರುವ ಡಾ| ಶಾಂತಾರಾಮ್‌ ಅವರು ಇವುಗಳನ್ನೆಲ್ಲ ಮೀರಿ ಜನರ ನಡುವೆಯೇ ಸಾಧನೆ ಮಾಡಿ ತೋರಿದವರು ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ಅವರು ಹೇಳಿದರು.

    Click Here

    Call us

    Click Here

    ಅವರು ಕುಂದಾಪುರದ ಭಂಡಾರ್‌ಕಾರ್ ಕಾಲೇಜಿನಲ್ಲಿ ಮಣಿಪಾಲ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌ನ ಆಡಳಿತಾಧಿಕಾರಿ ಸ್ವಪ್ನಶಿಲ್ಪಿ ಡಾ| ಎಚ್‌. ಶಾಂತಾರಾಮ್‌ ಅವರ ತೊಂಬತ್ತನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಡೆಯುವ 3 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜ್ಞಾನ ಎನ್ನುವುದು ಪುಸ್ತಕದ ಮೂಲಕ, ರಂಗದ ಮೂಲಕ ಹಾಗೂ ರಂಗದ ಹೊರಗಡೆ ಹೀಗೆ ಮೂರು ನೆಲೆಗಳಲ್ಲಿ ದೊರೆಯುವಂತಹದು. ಈ ಮೂರು ನೆಲೆಗಳಲ್ಲಿ ಜ್ಞಾನ ಸಂಪಾ ದನೆ ಮಾಡದೇ ಹೋದಲ್ಲಿ ನಮ್ಮ ಶಿಕ್ಷಣ ಎನ್ನುವುದು ಪದವಿಗಳನ್ನು ಗಳಿಸುವುದಕ್ಕೆ ಮಾತ್ರ ಸೀಮಿತ ವಾಗುತ್ತದೆ ಎನ್ನುವುದನ್ನು ನಂಬಿಕೊಂಡು ಬಂದವರು ಡಾ| ಶಾಂತಾರಾಮ್‌ ಅವರು ಎಂದು ವಿವೇಕ ರೈ ತಿಳಿಸಿದರು.

    ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಡಾ| ಶಾಂತಾರಾಮರ ನೇರನುಡಿ, ಸಹನೆ, ಉನ್ನತ ವ್ಯಕ್ತಿತ್ವ ಯಾವುದೇ ಸಮಸ್ಯೆಯನ್ನು ಸಲೀಸಾಗಿ ಪರಿಹರಿಸು ವಲ್ಲಿ ಸಹಕಾರಿಯಾಗಿದೆ. ಇಂತಹ ಗುಣ ವಿಶೇಷಗಳು ಇರುವು ದರಿಂದಲೇ ಅವರು ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

    ರೋಟರಿ ಡಿಜಿಪಿಎಚ್‌ಎಫ್‌ ಜಿ.ಎನ್‌. ಪ್ರಕಾಶ್‌, ಯಕ್ಷಗಾನ ಕಲಾವಿದ ಶ್ರೀಧರ ಹಂದೆ, ಗಮಕ ಕಲಾವಿದ ಡಾ| ಎ.ವಿ. ಪ್ರಸನ್ನ, ಲೇಖಕ ಶಿವಾನಂದ ಕಾರಂತ ಅವರು ಡಾ| ಶಾಂತಾರಾಮರ ಕುರಿತು ನೆನಪಿನ ಮಾತುಗಳನ್ನಾಡಿದರು. ಸಾಂಕ ಯತ್ನ ಹುಟ್ಟುಹಬ್ಬದ ಅಭಿನಂದನೆ ಸ್ವೀಕರಿ ಸಿದ ಡಾ| ಶಾಂತಾರಾಮ್‌ ಅವರು ಸಂಸ್ಥೆ ಬೆಳೆದು ಬಂದ ರೀತಿಯನ್ನು ವಿವರಿಸುತ್ತ, ಯಾವುದೇ ಓರ್ವ ವ್ಯಕ್ತಿಯಿಂದ ಸಂಸ್ಥೆ ಬೆಳೆಯಲು ಸಾಧ್ಯವಿಲ್ಲ. ಎಲ್ಲರ ಸಾಂಘಿಕ ಕೊಡುಗೆಯಿಂದ ಈ ಸಂಸ್ಥೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.

    ವಿದ್ಯಾರ್ಥಿವೇತನ ವಿತರಿಸಲಾ ಯಿತು. ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ಸ್ವಾಗತಿಸಿದರು. ಕನ್ನಡ ವಿಭಾಗ ಮುಖ್ಯಸ್ಥೆ ಡಾ| ರೇಖಾ ವಿ. ಬನ್ನಾಡಿ ಕಾರ್ಯಕ್ರಮ ನಿರೂಪಿಸಿದರು. ಪ.ಪೂ. ಕಾಲೇಜಿನ ಪ್ರಾಂಶು ಪಾಲ ಜಿ.ಎಂ. ಗೊಂಡ ವಂದಿಸಿದರು. ಮಧ್ಯಾಹ್ನ ಗಮಕ ಕಲಾವಿದ ಡಾ| ಎ.ವಿ. ಪ್ರಸನ್ನ ಮತ್ತು ನಿರ್ಮಲಾ ಪ್ರಸನ್ನ ಅವರಿಂದ ಗಮಕ ವಾಚನ ಮತ್ತು ವ್ಯಾಖ್ಯಾನ ನಡೆಯಿತು.

    Click here

    Click here

    Click here

    Call us

    Call us

    Like this:

    Like Loading...

    Related

    BCK
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d