Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡೇರಿ ರಸ್ತೆಯಲ್ಲಿ ಬಾರ್: ಮುಂದುವರಿಗೆ ಗ್ರಾಮಸ್ಥರ ವಿರೋಧ. ಎಸಿ ಭೇಟಿ
    ಊರ್ಮನೆ ಸಮಾಚಾರ

    ಕೊಡೇರಿ ರಸ್ತೆಯಲ್ಲಿ ಬಾರ್: ಮುಂದುವರಿಗೆ ಗ್ರಾಮಸ್ಥರ ವಿರೋಧ. ಎಸಿ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ನಾಗೂರು-ಕೊಡೇರಿ ರಸ್ತೆಯ ಅಂಚಿನಲ್ಲಿರುವ ಕಟ್ಟಡಕ್ಕೆ ಹೆದ್ದಾರಿ ಬದಿಯಲ್ಲಿದ್ದ ಬಾರ್ ಸ್ಥಳಾಂತರಗೊಂಡಿರುವುದನ್ನು ವಿರೋಧಿಸಿ ನಡೆಯುತ್ತಿರುವ ಸಾರ್ವಜನಿಕರ ಪ್ರತಿಭಟನೆ ಮುಂದುವರಿಯಿತು. ನೂರಾರು ಪುರುಷರು ಹಾಗೂ ಮಹಿಳೆಯರು ಸೇರಿ ಕಟ್ಟಡದ ಎದುರು ಬಾರ್‌ಗೆ ಹಾಗೂ ಅಬಕಾರಿ ಅಧಿಕಾರಿಗಳಿಗೆ ಧಿಕ್ಕಾರ್ ಕೂಗುತ್ತಾ ಪ್ರತಿಭಟನೆ ಮಾಡಿದರು.

    Click Here

    Call us

    Click Here

    ಬುಧವಾರ ಸ್ಥಳೀಯ ಗ್ರಾಪಂ ಅನುಮತಿ ನೀಡಿಲ್ಲ ಎಂಬ ಪತ್ರದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ್ದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಬಾರ್‌ಗೆ ತಮ್ಮ ವಿರೋಧದ ಬಗ್ಗೆ ಸಕಾರಣವನ್ನು ವಿವರಿಸಿದ್ದರು. ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಅಬಕಾರಿ ಅಧಿಕಾರಿಗಳನ್ನು ಹಾಗೂ ಪೋಲಿಸರನ್ನು ಸಂಪರ್ಕಿಸಿ ಜನರ ವಿರೋಧದ ಕಾರಣಗಳ ಸತ್ಯಾಸತ್ಯತೆ ಪರಿಶೀಲಿಸುವ ತನಕ ಬಾರ್ ಮುಚ್ಚಬೇಕೆಂದು ನಿರ್ದೇಶಿಸಿದ್ದು, ಅದರಂತೆ ಬಾರ್ ಕಟ್ಟಡಕ್ಕೆ ಬೀಗ ಜಡಿಯಲಾಯಿತು.

    ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆದುಕೊಂಡ ಜನರು ಗುರುವಾರ ಬೆಳಿಗ್ಗೆ ಬಾರ್ ಮುಂದೆ ಮತ್ತೆ ಜಮಾಯಿಸಿದರು. ನಾಗೂರು ಪೇಟೆಯಲ್ಲಿಯೂ ಕೂಡಾ ವ್ಯಾಪರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಜಿಲ್ಲಾಧಿಕಾರಿ ನೀಡಿದ್ದ ಭರವಸೆಗೆ ಪೂರಕವಾಗಿ ಕುಂದಾಪುರ ಉಪವಿಭಾಧಿಕಾರಿ ಶಿಲ್ಪಾನಾಗ್, ಅಬಕಾರಿ ಡಿವೈಎಸ್‌ಪಿ ವಿನೋದ್ ಕುಮಾರ್, ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಬೈಂದೂರು ವಿಶೇಷ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

    ಜನರ ಪರವಾಗಿ ಗ್ರಾಪಂ ಸದಸ್ಯ ಈಶ್ವರ್ ದೇವಾಡಿಗ, ಅಧಿಕಾರಿಗಳಿಗೆ ವಿರೋಧಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದರು. ಮುಖ್ಯವಾಗಿ ಬಾರ್ ಎದುರಿಗೆ ಕೇರಿಸ್ಥಳ ದೈವಸ್ಥಾನವಿದೆ. ಹತ್ತಿರದಲ್ಲಿ ಮಸೀದಿ ಇದೆ. ಸುತ್ತಲೂ ಜನನಿವಾಸವಿದೆ. ಈ ಮಾರ್ಗದಲ್ಲಿ ಅಂಗನವಾಡಿ ಮಕ್ಕಳು, ಮಹಿಳೆಯರು ಸಂಚರಿಸುತ್ತಾರೆ. ಬಾರ್‌ಗೆ ಬರುವ ವಾಹನಗಳು ರಸ್ತೆಯಲ್ಲಿ ನಿಂತು ಸಂಚಾರಿಗಳಿಗೆ ತೊಂದರೆಯಾಗುವುದಲ್ಲದೇ ಘರ್ಷಣೆಗೂ ಕಾರಣವಾಗಬಹುದು. ಈ ನಿಟ್ಟಿನಲ್ಲಿ ಗ್ರಾಪಂನಿಂದ ಉದ್ದಿಮೆ ಪರವಾನಿಗೆ ನೀಡಿಲ್ಲ ಎಂದರು.

    ಬಾರ್ ಮಾಲೀಕರು ತಾವು ಯಾವುದೇ ನಿಯಮವನ್ನು ಉಲ್ಲಂಘಿಸಿಲ್ಲ. ಅಲ್ಲದೇ ಇಲ್ಲಿ ಬಾರ್ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿ ಕಿರಿಕಿರಿಯಾಗಲಿ ಆಗುವುದಿಲ್ಲ ಎಂದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳಿಗೆ ಇಲ್ಲಿನ ವಾಸ್ತವಾಂಶವನ್ನು ತಿಳಿಸಲಾಗುವುದು. ಅವರೇ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಅವರು ತೀರ್ಮಾನ ಪ್ರಕಟಿಸುವ ತನಕ ಬಾರ್ ವ್ಯವಹಾರವನ್ನು ನಿರ್ಭಂದಿಸಲಾಗುವುದು ಎಂದರು. ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಬೈಂದೂರು ಪ್ರಭಾರ ಠಾಣಾಧಿಕಾರಿ ದೇವರಾಜ್ ಎಂ. ಮತ್ತು ಸಿಬ್ಬಂದಿಗಳು

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.