Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೆ.01-15ರಿಂದ ಶಾಲೆಯೆಡೆಗೆ ಗೊಂಬೆ ನಡಿಗೆ: ಉಪ್ಪಿನಕುದ್ರು ಗೊಂಬೆಯಾಟ ತಂಡದ ಹೊಸ ಪ್ರಯತ್ನ
    ಊರ್ಮನೆ ಸಮಾಚಾರ

    ಸೆ.01-15ರಿಂದ ಶಾಲೆಯೆಡೆಗೆ ಗೊಂಬೆ ನಡಿಗೆ: ಉಪ್ಪಿನಕುದ್ರು ಗೊಂಬೆಯಾಟ ತಂಡದ ಹೊಸ ಪ್ರಯತ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ), ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಹಾಗೂ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯು ನಾಗರಾಜ್ ಭಟ್, ಮಲ್ಪೆ ಇವರ ಪ್ರಾಯೋಜಕತ್ವದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಗಡಿನಾಡ ತಿರುಗಾಟ ಶಾಲೆಯೆಡೆಗೆ ಗೊಂಬೆ ನಡಿಗೆ ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದೆ.

    Click Here

    Call us

    Click Here

    ಗೊಂಬೆಯಾಟ ಟ್ರಸ್ಟ್ ಅಸ್ತಿತ್ವ ಕಂಡು 22 ವರ್ಷಗಳ ಸವಿನೆನಪಲ್ಲಿ ಸೆಪ್ಟೆಂಬರ್ 1ರಿಂದ 15ರವರೆಗೆ ಕುಮಟಾ, ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮಂಗಳೂರು, ಕಾಸರಗೋಡು ತಾಲೂಕಿನ ಒಟ್ಟು 22 ಶಾಲೆಗಳಲ್ಲಿ ಗೊಂಬೆಯಾಟ ಪ್ರಾತ್ಯಕ್ಷಿಕೆ ನಡೆಯಲಿದೆ.

    ಕರಾವಳಿ ತೀರದ 350 ವರ್ಷಗಳ 6 ನೇ ತಲಾಂತರದ ವಿಶಿಷ್ಟ, ವಿಶೇಷ ಕಲಾ ಪರಂಪರೆಯ ಉಳಿವಿಗಾಗಿ ಹಗಲಿರುಳೆನ್ನದೆ ಹೋರಾಟ ಮಾಡುತ್ತಾ ಬಂದಿರುವ ಸಂಸ್ಥೆಯು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡದಲ್ಲಿ ಕಳೆದ ೩ ವರ್ಷಗಳಿಂದ ನಿರಂತರ ತಿಂಗಳ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನಡೆಸಿಕೊಂಡು ಬರುತ್ತಿದೆ. ಸರಕಾರದ ಯಾವುದೇ ಧನ ಸಹಾಯ ಪಡೆಯದೆ ಹೋರಾಡುತ್ತಿರುವುದು ಈ ತಂಡದ ವಿಶೇಷವೆನ್ನಬಹುದು. ಸಾರ್ವಜನಿಕರ, ಪ್ರೋತ್ಸಾಹಕರ ನೆರವಿನೊಂದಿಗೆ ಅನೇಕ ದಿಟ್ಟ ಹೆಜ್ಜೆ ಇರಿಸಿ ಮಾಡಿ ತೋರಿಸಿದೆ.

    ಸೆ. 01ರಂದು ಶ್ರೀ ಮೂಕಾಂಬಿಕಾ ಪ್ರೌಢ ಶಾಲೆ, ಮಾವಿನಕಟ್ಟೆ ಯಲ್ಲಿ ಶಾಲೆಯೆಡೆಗೆ ಗೊಂಬೆ ನಡಿಗೆ ಉದ್ಘಾಟನೆಗೊಳ್ಳಲಿದೆ. ಅನಂತರ ಸೆ.04ರಿಂದ 15ರೊಳಗೆ ಸರಸ್ವತಿ ಪದವಿ ಪೂರ್ವ ಕಾಲೇಜು ಕುಮಟಾ, ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್, ಗೇರುಸೊಪ್ಪೆ, ಎಸ್.ಡಿ.ಎಂ. ಕಾಲೇಜು, ಹೊನ್ನಾವರ, ದ ನ್ಯೂ ಇಂಗ್ಲಿಷ್ ಪದವಿಪೂರ್ವ ಕಾಲೇಜು, ಅಯೋಧ್ಯಾನಗರ, ಭಟ್ಕಳ, ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಬ್ರಹ್ಮಾವರ, ಮಿಲಾಗ್ರೆಸ್ ಆಂಗ್ಲ ಮಾಧ್ಯಮ ಶಾಲೆ, ಕಲ್ಯಾಣಪುರ, ಮುಕುಂದ ಕೃಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಡುಪಿ, ಮಾಧವ ಕೃಪ ಇಂಗ್ಲಿಷ್ ನರ್ಸರಿ ಮತ್ತು ಹೈಯರ್ ಪ್ರೈಮರಿ ಸ್ಕೂಲ್, ಮಣಿಪಾಲ, ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ, ಸರಕಾರಿ ಪದವಿಪೂರ್ವ ಕಾಲೇಜು, (ಪ್ರೌಢ ಶಾಲಾ ವಿಭಾಗ) ಕುಂದಾಪುರ, ಶಾರದಾ ಕಾಲೇಜ್ ಬಸ್ರೂರು, ಶ್ರೀ ಸಿದ್ಧಿ ವಿನಾಯಕ ರೆಸಿಡೆನ್ಶಿಯಲ್ ಸ್ಕೂಲ್, ಹಟ್ಟಿಯಂಗಡಿ, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ ವಂಡ್ಸೆ, ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜು ಕೊಲ್ಲೂರು, ಗ್ರೆಗರಿ ಪ್ರೌಢ ಶಾಲೆ ನಾಡ- ಪಡುಕೋಣೆ, ಸರಕಾರಿ ಪ್ರೌಢ ಶಾಲೆ ಹಕ್ಲಾಡಿ, ಶ್ರೀ ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಕಂಬದಕೋಣೆ, ಗೋವಿಂದದಾಸ್ ಕಾಲೇಜು ಸುರತ್ಕಲ್, ಕೆನರಾ ಹೈಸ್ಕೂಲ್ ಮಂಗಳೂರು, ಹೆಚ್. ಹೆಚ್. ಎಸ್. ಐ. ಬಿ. ಸ್ವಾಮೀಜಿಸ್ ಹೈಯರ್ ಸೆಕೆಂಡರಿ ಸ್ಕೂಲ್ ಎಡನೀರು ಕಾಸರಗೋಡಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026
    Leave A Reply Cancel Reply

    5 × four =

    Call us

    Click Here

    Call us

    Call us

    Call us
    Highest Viewed Recently
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.