Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಕ್ಕೆ ನಾಗರೀಕರ ವಿರೋಧ
    ವಿಶೇಷ ವರದಿ

    ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಕ್ಕೆ ನಾಗರೀಕರ ವಿರೋಧ

    Updated:27/09/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕಳೆದ 12ವರ್ಷಗಳಿಂದ ನಗರದ ಸ್ವಂತ ಜಾಗದಲ್ಲಿ ಕಾರ್ಯಾಚರಿಸುತ್ತಿರುವ ಕುಂದಾಪುರ ಉಪವಿಭಾಗದ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳ್ಳುವ ಭೀತಿ ತಾಲೂಕಿನ ನಾಗರೀಕರಲ್ಲಿ ಎದುರಾಗಿದೆ. ನಗರಸಭೆಯಾಗುವತ್ತ ದಾಪುಗಾಲಿಟ್ಟಿರುವ ಕುಂದಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯು ಅನಗತ್ಯವಾಗಿ ಕಂಡುಬಂದುದರ ಹಿಂದಿನ ಕಾರಣ ಮಾತ್ರ ನಿಗೂಡವಾಗಿದೆ.

    Click Here

    Call us

    Click Here

    2003ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ವಿನ್ನಿಫ್ರೆಡ್ ಅವರ ವಿಶೇಷ ಮುತುವರ್ಜಿಯಿಂದಾಗಿ ಅಂದಿನ ಮಂತ್ರಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರಿಂದ ಮಹಿಳಾ ಪೊಲೀಸ್ ಠಾಣೆ ಮಂಜೂರಾಗಿತ್ತು. ಎಲ್.ಐ.ಸಿ ರೋಡ್ ನ ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಈ ಠಾಣೆಯ ಮೂಲಕವೇ ಕುಂದಾಪುರ ಉಪವಿಭಾಗದ ಎಲ್ಲಾ ಮಹಿಳಾ ಸಂಬಂಧಿ ಪ್ರಕರಣಗಳು ವಿಲೇವಾರಿಯಾಗುತ್ತಿದೆ. ಇದರಿಂದ ಈ ಭಾಗದ ಮಹಿಳೆಯರಿಗೂ ಸಾಕಷ್ಟು ಅನುಕೂಲವಾಗುತ್ತಿದೆ. ಇದೀಗ ಠಾಣೆ ಸ್ಥಳಾಂತರಗೊಂಡರೆ ಸಣ್ಣ ಪ್ರಕರಣಗಳಿಗೂ ಗ್ರಾಮೀಣ ಭಾಗದವರು ಉಡುಪಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಲಿದೆ.

    ಉಡುಪಿ ಜಿಲ್ಲೆಯ ಬೇರೆ ನಗರಗಳಿಗೆ ಹೋಲಿಸಿದರೇ ಕುಂದಾಪುರ ವಿಭಾಗದಲ್ಲಿ ಅತಿಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು ಸದ್ಯ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರು, ಇಬ್ಬರು ಸಹಾಯಕ ಉಪನಿರೀಕ್ಷಕರು, ಎರಡು ಮಂದಿ ಮುಖ್ಯಪೇದೆ ಸೇರಿದಂತೆ ಇಪ್ಪತ್ತೊಂದು ಮಂದಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆ ಸ್ಥಳಾಂತರದ ಬದಲು ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲು ಮಹಿಳಾ ಪೊಲೀಸ್ ಠಾಣೆಗೆ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಕಾರ್ಯ ಮಾಡುವುದು ಒಳಿತು ಎಂದು ನಾಗರಿಕರು ಅಭಿಪ್ರಾಯ ಪಟ್ಟಿದ್ದಾರೆ.

    ಈ ಹಿಂದೆಯೂ ಠಾಣೆಯ ಸ್ಥಳಾಂತರ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಉಡುಪಿಯ ಆಗಿನ ಎಸ್.ಪಿ.ಯಾಗಿದ್ದ ಬೋರಲಿಂಗಯ್ಯ ಇದಕ್ಕೆ ಪುಷ್ಠಿ ನೀಡುವಂತೆ ಪೊಲೀಸ್ ಠಾಣೆ ಸ್ಥಳಾಂತರಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಪಶ್ಚಿಮ ವಲಯ ಐಜಿಪಿ ಅಮೃತಪಾಲ್ ಕಳೆದ ಭಾರಿ ಕುಂದಾಪುರಕ್ಕೆ ಭೇಟಿ ನೀಡಿದ್ದ ಸಂದರ್ಭ ಮಹಿಳಾ ಠಾಣೆಯನ್ನು ಉಡುಪಿಗೆ ವರ್ಗಾಯಿಸುವ ವಿಚಾರವನ್ನು ಪುನರ್ ಪರಿಶೀಲಿಸುದಾಗಿ ತಿಳಿಸಿದ್ದರು. ಕುಂದಾಪುರದ ನಾಗರಿಕರೂ ಕೂಡ ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೇ ಒಂದು ವೇಳೆ ಸ್ಥಳಾಂತರಿಸಿದಲ್ಲಿ ಸಂಘಟಿತ ಹೋರಾಟ ನಡೆಸುವುದಾಗಿಯೂ ಕುಂದಾಪ್ರ ಡಾಟ್ ಕಾಂ ಗೆ ತಿಳಿಸಿದ್ದಾರೆ.
    ವರದಿ: ಸುನಿಲ್ ಬೈಂದೂರು

    ► ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವುದು ಸರಿಯಲ್ಲ. ಕೆಲವು ವರ್ಷಗಳಿಂದ ಪೊಲೀಸ್ ಠಾಣೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇದರಿಂದ ಕುಂದಾಪುರ ಗ್ರಾಮೀಣ ಭಾಗದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಮಹಿಳೆಯರ ಖಾಸಗಿ ಸಮಸ್ಯೆಗಳನ್ನು ಸಾಮಾನ್ಯ ಠಾಣೆಯಲ್ಲಿ ಹೇಳಿಕೊಳ್ಳಲು ಸಾಧ್ಯವಾಗದಿರುವುದರಿಂದ ಮಹಿಳಾ ಠಾಣೆಯ ಅವಶ್ಯಕತೆ ಇದೆ. ಒಂದು ವೇಳೆ ಸ್ಥಳಾಂತರಕ್ಕೆ ಪ್ರಯತ್ನಿಸಿದಲ್ಲಿ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು. ಈ ಬಗ್ಗೆ ಕುಂದಾಪುರದ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ.
    -ಶ್ರೀಮತಿ ಗುಣರತ್ನ, ಕುಂದಾಪುರ ಪುರಸಭಾ ಸದಸ್ಯೆ

    Click here

    Click here

    Click here

    Call us

    Call us

    ► ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಿಸುವ ಬಗ್ಗೆ ನನ್ನ ವಿರೋಧವಿದೆ. ಠಾಣೆಯನ್ನು ಸ್ಥಳಾಂತರಿಸುವ ಬದಲು ಅಲ್ಲಿರುವ ಕೆಲವು ಭ್ರಷ್ಟ ಅಧಿಕಾರಿಗಳನ್ನು ವರ್ಗಾಯಿಸಿ ಉತ್ತಮವಾಗಿ ಕಾರ್ಯನಿರ್ವಹಿಸಲು ಅನುವುಮಾಡಿಕೊಡುವುದು ಒಳ್ಳೆಯದು.
    -ಶ್ರೀಮತಿ ರಾಧಾದಾಸ್, ಅಧ್ಯಕ್ಷರು ಶ್ರೀ ಮೂಕಾಂಬಿಕಾ ಮಹಿಳಾ ಮಂಡಲಗಳ ತಾಲೂಕು ಒಕ್ಕೂಟ(ರಿ)

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d