Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಅಂಗವಿಕಲರ ಯೋಜನೆಗಳು ಬಿಕ್ಷೆಯಲ್ಲ, ಹಕ್ಕು
    ಕುಂದಾಪ್ರದ್ ಸುದ್ಧಿ

    ಕುಂದಾಪುರ: ಅಂಗವಿಕಲರ ಯೋಜನೆಗಳು ಬಿಕ್ಷೆಯಲ್ಲ, ಹಕ್ಕು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಘನತೆಯ ಬದುಕಿಗೆ ಎಲ್ಲಾ ಅಂಗವಿಕಲರಿಗೂ ಶಿಕ್ಷಣ, ಉದ್ಯೋಗ, ಸಿಗಬೇಕು. ಖಾಸಗಿ ಸಂಸ್ಥೆಗಳಲ್ಲೂ ಅಂಗವಿಕಲರಿಗೆ ಶೇಕಡಾ ೫% ಮೀಸಲಾತಿ ನೀಡಬೇಕು. ಅಂಗವಿಕಲರ ಪಾಲಕರ ದೊಂದೆಕುಲ ನಮ್ಮಲ್ಲದೆ ಒಗ್ಗಟ್ಟಿನ ಬಲ ಅಥವಾ ನಮ್ಮಲ್ಲಿರಲಿ ಒಗ್ಗಟ್ಟಿನ ಬಲ, ಸರಕಾರ ಎಲ್ಲಾ ಅಂಗವಿಕಲರಿಗೂ ಉಚಿತ ಮನೆ, ನಿವೇಶನ ಹಾಗೂ ವಿಶೇಷ ಶೌಚಾಲಯ ನೀಡಲಿ, ಅಂಗವಿಕಲರು ಸಮಾಜದ ಅವಿಭಾಜ್ಯ ಅಂಗ, ಬದುಕಲು ಬಿಡಿ. ಅಂಗವಿಕಲರ ಯೋಜನೆಗಳು ಸಮರ್ಪಕವಾಗಿ ಜ್ಯಾರಿಯಾಗಲಿ, ಇದು ಬಿಕ್ಷೆಯಲ್ಲ ಅದು ನಮ್ಮ ಹಕ್ಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ರಾಜ್ಯ ಅಧ್ಯಕ್ಷ ಜಿ.ಎನ್. ನಾಗರಾಜ ಹೇಳಿದರು.

    Click Here

    Call us

    Click Here

    ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ ನವದೆಹಲಿಗೆ ಸಂಯೋಜಿಸಲ್ಪಟ್ಟ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮ್ಮೇಳನವು ಕುಂದಾಪುರ ಕಾರ್ಮಿಕ ಭವನದಲ್ಲಿ ಜರಗಿದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷದಿಂದ ಇಲ್ಲಿಯವರೆಗೆ ರಾಜ್ಯ-ಕೇಂದ್ರ ಸರಕಾರಗಳು ಅಂಗವಿಕಲರಿಗಾಗಿ ಯಾವುದೇ ಯೋಜನೆಗಳನ್ನು ರೂಪಿಸದೇ ಇದ್ದುದರಿಂದಾಗಿ ರಾಜ್ಯದ ಅಂಗವಿಕಲರ ಜೀವನದ ಸ್ಥಿತಿಗತಿಗಳಲ್ಲಿ ಯಾವುದೇ ಸುಧಾರಣೆಗಳಾಗದೇ ಹಾಗೆಯೇ ಮುಂದುವರಿದುಕೊಂಡು ಹೋಗಿರುವುದನ್ನು ಕಾಣುತ್ತಿದ್ದೇವೆ. ಸರಕಾರಗಳು ಅಂಗವಿಕಲರಿಗೆ ಸಮಾನ ಅವಕಾಶ, ಪೂರ್ಣ ಭಾಗವಹಿಸುವಿಕೆ, ಹಕ್ಕುಗಳ ಸಂರಕ್ಷಣೆ ಕುರಿತಂತೆ ಮಾತುಗಳಾಯಿತೇ ವಿನಹ ಕೃತಿಯಲ್ಲಂತೂ ಸಾಧ್ಯವಾಗಲೇ ಇಲ್ಲ. ಹೀಗಾಗಿ ರಾಜ್ಯದ ಅಂಗವಿಕಲನ ಬದುಕು ಉತ್ತಮಗೊಳ್ಳುವುದಿರಲಿ ಸುಧಾರಣೆಯಾಗದೇ ಮತ್ತಷ್ಟು ಕಷ್ಟಗಳಿಗೆ ಸಿಲುಕಿದ್ದಾರೆ ಎಂದು ಜಿ.ಎನ್. ನಾಗರಾಜ ಆತಂಕ ವ್ಯಕ್ತ ಪಡಿಸಿದರು.

    ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಗೌರವ ಅಧ್ಯಕ್ಷ ವೆಂಕಟೇಶ ಕೋಣಿ ಪ್ರಸ್ತಾವಿಕ ಭಾಷಣ ಮಾಡುತ್ತಾ, ಕೆಲವು ತಂದೆ ತಾಯಿಗಳಿಗೆ ಎಲ್ಲಾ ಮಕ್ಕಳು ತೀವ್ರ ಸ್ವರೂಪದ ಅಂಗವಿಕಲತೆ, ಇಲ್ಲದೆ ಬುದ್ಧಿಮಾಂದ್ಯ, ಆಟಿಸಮ್ ಹೊಂದಿದ ಮಕ್ಕಳು ಇದ್ದಾರೆ. ತಂದೆ ತಾಯಿ ತೀರಿದ ಮೇಲೆ ಅಂಗವಿಕಲ ಮಕ್ಕಳು ಅನಾಥರಾಗುತ್ತಾರೆ. ಇಂತಹ ಸಮಸ್ಯೆ ಇಡೀ ರಾಜ್ಯದಲ್ಲಿ ದೊಡ್ಡದಾಗಿದ್ದು, ಸರಕಾರ ಇದರ ಬಗ್ಗೆ ಪರಿಶೀಲಿಸಬೇಕಾಗಿದೆ. ಕನಿಷ್ಠ ಜಿಲ್ಲೆಗೊಂದರಂತೆ ಬುದ್ಧಿಮಾಂದ್ಯ, ಸ್ವಲೀನ (ಆಟಿಸಂ) ಮತ್ತು ತೀವ್ರ ಅಂಗವಿಕಲತೆ ಇರುವವರಿಗೆ ಸರಕಾರ ಪುನರ್ವಸತಿ ಕೇಂದ್ರ ತೆರೆಯಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

    ವಾಗಜ್ಯೋತಿ ಕಿವುಡ, ಮತ್ತು ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ಮೂಡಬಗೆ, ಅಂಪಾರು, ಮುಖ್ಯೋಪಾಧ್ಯಾಯ ರವೀಂದ್ರರವರು ಮುಖ್ಯ ಅತಿಥಿಗಳಾಗಿ ಸಮ್ಮೇಳನದಲ್ಲಿ ಮಾತನಾಡಿದರು. ಪ್ರತೀ ಗ್ರಾಮ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ನಗರ ಪಟ್ಟಣಗಳಲ್ಲಿ ವಾರ್ಡು ಮಟ್ಟದಲ್ಲಿ ಅಂಗವಿಕಲರ ಹಾಗೂ ಪಾಲಕರ ಸಮಿತಿಗಳನ್ನು ರೂಪಿಸಿ, ಎಲ್ಲಾ ಅಂಗವಿಕಲರ ಘನತೆಯ ಜೀವನಕ್ಕಾಗಿ ಬೃಹತ್ ಅಂಗವಿಕಲರ ಸಂಘಟನೆ ಕಟ್ಟೋಣ ಎಂದು ಹೇಳಿದರು.

    ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಕೃಷ್ಣ ಪೂಜಾರಿ ಕೋಟೇಶ್ವರ – ಚಟುವಟಿಕೆಯ ವರದಿ ಮಂಡಿಸಿದರು. ಮುಖಂಡರಾದ ಜಿ.ಎನ್. ಯಶಸ್ವಿ, ಮುಕಾಂಬು ಯಡ್ತರೆ, ವನಿತಾ ಹೊಂಬಾಡಿ ಮಂಡಾಡಿ, ರಾಜು ಪೂಜಾರಿ ಮುದೂರು, ವಿಲ್ಸನ್ ಹಂಗಳೂರು, ವಿಜಯ ಕಿರಿಮಂಜೇಶ್ವರ, ರಾಧಕೃಷ್ಣ ಬೈಂದೂರು, ಅನಿತಾ ಪಡುವರಿ, ಬಾಬು ಕೆ. ದೇವಾಡಿಗ ಉಪ್ಪುಂದ, ನಾಗರಾಜ ತಲ್ಲೂರು, ವಿಜಯಶ್ರೀ ಕಂಬದಕೋಣೆ, ಕೃಷ್ಣ ನಾಯ್ಕ, ಬ್ರಹ್ಮಾವರ ಅಣ್ಣಯ್ಯ ಕೋಡಿ, ದಿನೇಶ ಶೇರುಗಾರ ಕಂಡ್ಲೂರು ಉಪಸ್ಥಿತರಿದ್ದರು. ಮಂಜುನಾಥ ಹೆಬ್ಬಾರ್ ಕಾಲ್ತೋಡು ಸಮ್ಮೇಳನದ ಅಧ್ಯಕ್ಷತೆ ವಹಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d