Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ ಗುರುಕುಲದಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ
    ಕ್ಯಾಂಪಸ್ ಕಾರ್ನರ್

    ವಕ್ವಾಡಿ ಗುರುಕುಲದಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಕಾರ್ಯಕ್ರಮದ ಜರುಗಿತು.

    Click Here

    Call us

    Click Here

    ಉಪನ್ಯಾಸರ ಶ್ರೀನಾಥ್ ರಾವ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೆಳಕೆಂಬ ಜ್ಞಾನದಿಂದ ಕತ್ತಲೆಂಬ ಅಜ್ಞಾನವನ್ನು ತೊಲಗಿಸಿ ಮುಂದುವರಿಯಬೇಕು. ಈ ವಿದ್ಯಾರ್ಥಿಯ ಜೀವನ ಒತ್ತಡದಿಂದ ಕೂಡಿಲ್ಲ. ಈ ಸಮಯವೇ ಜ್ಞಾನವನ್ನು ಪಡೆಯಲಿಕ್ಕೆ ಸೂಕ್ತವಾಗಿದೆ. ಗುರುಕುಲದಲ್ಲಿ 166 ವಿಜ್ಞಾನ ಮಾದರಿ ಅಚ್ಚುಕಟ್ಟಾಗಿದ್ದು, ಮಕ್ಕಳು ವಿವರಿಸಿದ ರೀತಿ ತುಂಬಾ ಚೆನ್ನಾಗಿತ್ತು. ನನಗೆ ತುಂಬಾ ಸಂತೋಷವಾಯಿತು ಎಂದು ತಿಳಿಸಿದರು.

    ಜ್ಞಾನ, ಕೌಶಲ್ಯ ಎರಡರಿಂದ ಹೊಸತನ ಬರುತ್ತದೆ. ಈ ಹೊಸತನದ ಸಂಕೇತವೇ ಪ್ರಗತಿ. ಅಲ್ಲದೇ ಗುಣಮಟ್ಟದ ಶಿಕ್ಷಣ ದೇಶವನ್ನು ಬದಲಾಯಿಸಬಲ್ಲದು ಇಂತಹ ಸಂದರ್ಭದಲ್ಲಿ ಈ ಮಕ್ಕಳಿಗೆ ಸಂಶೋಧನೆಯ ವೇದಿಕೆ ಅತ್ಯವಶ್ಯಕ. ಇದರಿಂದ ಮಕ್ಕಳು ಸಂಕುಚಿತ ಮನೋಭಾವನೆಯನ್ನು ಬಿಟ್ಟು ಹೊರಬರಲು ಸಾಧ್ಯ. ಇಂತಹ ಕೆಲಸವನ್ನು ಗುರುಕುಲ ಪಬ್ಲಿಕ್ ಶಾಲೆ ನಿರ್ವಹಿಸಿದೆ. ಹಾಗೆಯೇ ಗುರುವಿಲ್ಲದೇ ಯಾವ ಕೆಲಸವು ಸಾಧ್ಯವಿಲ್ಲ ಈ ಗುರುಕುಲದಲ್ಲಿ ಗುರುವಿನ ಸಹಾಯದಿಂದ ವಿಜ್ಞಾನದ ಪ್ರದರ್ಶನವಾಗುತ್ತಿದೆ. ಎಂಬುವುದು ತುಂಬಾ ಸಂತೋಷವಾಗಿದೆ ಎಂದು ನುಡಿದರು.

    ಗುರುಕುಲ ಪಬ್ಲಿಕ್ ಶಾಲಾ ಪ್ರಾಂಶುಪಾಲರಾದ ಸಾಯಿಜು. ಕೆ. ಆರ್ ನಾಯರ್ ಮಾತನಾಡಿ ವಿದ್ಯಾರ್ಥಿಗಳ ಶ್ರಮಕ್ಕೆ ತುಂಬಾ ಸಂತೋಷವಾಗುತ್ತಿದೆ, ಎಂದು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿದರು.

    ಅಧ್ಯಕ್ಷತೆಯನ್ನು ವಹಿಸಿದ ಜಂಟಿ ಕಾರ್ಯನಿರ್ವಹಕರಾದ ಸುಭಾಶ್ಚಂದ್ರ ಶೆಟ್ಟಿ.ಕೆ ರವರು ಮಾತನಾಡಿ, ಮಕ್ಕಳ ಶ್ರಮ ಶ್ಲಾಘನೀಯವಾದದ್ದು. ಇದರಿಂದ ನಾವು ಮಕ್ಕಳ ಜೊತೆಗೆ ಪ್ರೇರಿಪಿತರಾಗಿದ್ದೇವೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗುವುದು ಎಂದು ನುಡಿದರು. ನಂತರ ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮತ್ತೋರ್ವ ಜಂಟಿ ಕಾರ್ಯನಿರ್ವಹಕರಾದ ಅನುಪಮ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ನಾಗರತ್ನರವರು ಸ್ವಾಗತಿಸಿದರು. ಬಬಿತಾರವರು ವಂದಿಸಿದರು.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ರಸಾಯನ ಶಾಸ್ತ್ರ, ಜೀವಶಾಸ್ತ್ರ, ಭೌತಶಾಸ್ತ್ರ ಈ ಮೂರು ರೀತಿಯ ವಿಜ್ಞಾನ ಮಾದರಿಗಳ ಅತ್ಯುತ್ತಮ ಗುಂಪುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿ, ಶಾಲಾ ಪ್ರಾಂಶುಪಾಲರು ಶುಭಾಶಯವನ್ನು ಕೋರಿದರು. ಈ ಕಾರ್ಯಕ್ರಮ ವಿಕ್ಷೀಸಲು ಶಾಲೆಯ ಪಾಲಕರಲ್ಲದೇ, ಸುತ್ತ-ಮುತ್ತಲಿನ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸಿ ವಿಜ್ಞಾನ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇವಲ್ಲದೇ ವಿದ್ಯಾರ್ಥಿಗಳು ಸ್ವತ: ತಯಾರಿಸಿದ ಕರಕುಶಲ ಪ್ರದರ್ಶನ ಮತ್ತು ಸಂಗ್ರಹಿಸಿದ ಅತೀ ವಿಶಿಷ್ಠ ಮತ್ತು ವಿರಳವಾದ ನಾಣ್ಯ ಮತ್ತು ನೋಟುಗಳ ಪ್ರದರ್ಶನ ಎಲ್ಲರ ಗಮನವನ್ನು ಸೆಳೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.