Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಣಿ : ಮಾತಾ ಮಾಂಟೆಸ್ಸೋರಿಗೆ ಶಿಕ್ಷಣ ತಜ್ಞರ ಭೇಟಿ
    ಊರ್ಮನೆ ಸಮಾಚಾರ

    ಕೋಣಿ : ಮಾತಾ ಮಾಂಟೆಸ್ಸೋರಿಗೆ ಶಿಕ್ಷಣ ತಜ್ಞರ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶಿಕ್ಷಣ ಕ್ಷೇತ್ರದಲ್ಲಿ ತನ್ನ ವೈಶಿಷ್ಟ್ಯತೆಯೊಂದಿಗೆ ಜಾಗತಿಕ ಮನ್ನಣೆಗೆ ಪಾತ್ರವಾದ ಮೊಂಟೆಸ್ಸೋರಿ ಶಿಕ್ಷಣದ ತಜ್ಞೆ ಮೊಂಟೆಸ್ಸೋರಿ ಯುನೈಟೆಡ್ ಎನ್ನುವ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ಮೊಂಟೆಸ್ಸೋರಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಸಾಧಕಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದ ಶಿಕ್ಷಕಿ, ಬೆಂಗಳೂರಿನ ಮುನಿರಾ ಅಕ್ತರ್ ಅವರನ್ನು ಕೋಣಿಯ ಮಾತಾ ಮೊಂಟೆಸ್ಸೋರಿಯ ಆವರಣದಲ್ಲಿ ಪುಟಾಣಿಗಳು ಪುಷ್ಪ ಪಥದೊಂದಿಗೆ ಸ್ವಾಗತಿಸಿದರು. ಮಾತಾ ಮೊಂಟೆಸ್ಸೋರಿ ನಡೆಸುತ್ತಿರುವ ಮೊಂಟೆಸ್ಸೋರಿ ಸರ್ಟಿಫೀಕೆಟ್ ಕೋರ್ಸ್‌ನ ಪ್ರಯೋಗ ಪರೀಕ್ಷೆಯ ಪರಿವೀಕ್ಷಕರಾಗಿ ಆಗಮಿಸಿರುವ ಮುನಿರಾ ಅಕ್ತರ್‌ರವರ ಸಾಧನೆಯನ್ನು ಮನಗಂಡು ಶಾಲೆಯವತಿಯಿಂದ ಗೌರವ ಸನ್ಮಾನ ನೀಡಲಾಯಿತು.

    Click Here

    Call us

    Click Here

    ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಅತ್ಯಂತ ಪ್ರಭಾವಿ ಶಿಕ್ಷಣ ಶೈಲಿ ಎಂದೇ ಖ್ಯಾತವಾಗಿರುವ ಡಾ| ಮರೀಯಾ ಮಾಂಟೆಸ್ಸೋರಿಯವರ ಆವಿಷ್ಕಾರದ ಮೊಂಟೆಸ್ಸೋರಿ ಶಿಕ್ಷಣ ಪದ್ಧತಿ ಇತ್ತೀಚಿನ ದಿನಗಳಲ್ಲಿ ಭಾರತದ ನಗರಗಳಲ್ಲಿ ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ಆದರೆ ಕೋಣಿಯಂತಹ ಗ್ರಾಮೀಣ ಭಾಗದಲ್ಲೂ ಸಂಸ್ಥೆಯನ್ನು ಹುಟ್ಟುಹಾಕಿ ಈ ಪರಿಸರದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಮಾತಾ ಮೊಂಟೆಸ್ಸೋರಿಯ ರೂವಾರಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಅವರ ಪತ್ನಿ ಭಾರತಿ ನಿಜಕ್ಕೂ ಅಭಿನಂದನಾರ್ಹರು. ಸದ್ದಿಲ್ಲದೆ ನಡೆಯುತ್ತಿರುವ ಶಿಕ್ಷಣ ಸೇವೆಯೊಂದಿಗೆ ತನ್ನ ಉತ್ಕೃಷ್ಟ ತರಭೇತಿಯೊಂದಿಗೆ ಅನೇಕ ಮಾಂಟೆಸ್ಸೋರಿ ಶಿಕ್ಷಕಿಯರನ್ನು ಸಮಾಜಕ್ಕೆ ನೀಡುತ್ತಿರುವ ಈ ಸಂಸ್ಥೆ ನಿಜಕ್ಕೂ ಶ್ಲಾಘನೀಯ. ಪೋಷಕರು ಹಾಗೂ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ ಪಡೆದು ಮಗುವಿನ ಕಲಿಕೆ ಅಥವಾ ಮಕ್ಕಳ ಪೋಷಣೆಯಲ್ಲಿ ಇದನ್ನು ಅಳವಡಿಸಿಕೊಳ್ಳಬಹುದು ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಪ್ರಾಂಶುಪಾಲೆ ಭಾರತಿ ಪ್ರಕಾಶ್ ಶೆಟ್ಟಿ, ಶಿಕ್ಷಕಿಯರು, ತರಬೇತಿ ಪಡೆಯುತ್ತಿರುವ ಶಿಕ್ಷಣಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    19 + two =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.