Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಕೋತಿರಾಮನ ಝಲಕ್; 15 ನಿಮಿಷಗಳಲ್ಲಿ 6 ಮಹಡಿಯ ಕಟ್ಟಡ ಏರಿ ಸಾಹಸ
    ವಿಶೇಷ ವರದಿ

    ಕುಂದಾಪುರದಲ್ಲಿ ಕೋತಿರಾಮನ ಝಲಕ್; 15 ನಿಮಿಷಗಳಲ್ಲಿ 6 ಮಹಡಿಯ ಕಟ್ಟಡ ಏರಿ ಸಾಹಸ

    Updated:22/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

     Kotirama Climb Kundapura5ಕುಂದಾಪುರ: ಪ್ರಸಿದ್ದ ಸಾಹಸಿಗ ವಾಲ್ ಕ್ಲೈಂಬಿಂಗ್ ಚತುರ ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಮ ನಗರದ ಶಾಸ್ತ್ರಿ ವೃತ್ತದ ಸಮೀಪದಲ್ಲಿರುವ 6 ಮಹಡಿಯ ಕಟ್ಟಡ ಜೆ.ಕೆ. ಟವರ್ಸ್‌ನ್ನು ಕೇವಲ 15 ನಿಮಿಷಗಳಲ್ಲೇ ಏರಿ ನೆರೆದಿದ್ದ ಸಹಸ್ರ ಸಂಖ್ಯೆಯ ನಾಗರಿಕರಲ್ಲಿ ಬೆರಗು ಮೂಡಿಸಿದರು.

    Click Here

    Call us

    Click Here

    ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಶಿಯೇಶನ್ ನ ಪದಗ್ರಹಣ ಸಮಾರಂಭಕ್ಕೆ ಕುಂದಾಪುರಕ್ಕೆ ಆಗಮಿಸಿದ ಅವರು ಸಂಘದ ಆಶ್ರಯದಲ್ಲಿ ಸಾಹಸ ಕಾರ್ಯ ನೆಡೆಸಿದರು. ಸಂಜೆ 4.15ರ ವೇಳೆಗೆ ಕೈಗೆ ಒಂದಿಷ್ಟು ಸುಣ್ಣ ಹಚ್ಚಿಕೊಂಡು ನೆಲ ಅಂತಸ್ತಿನಿಂದ ಏರಿದ ಜ್ಯೋತಿರಾಜ್ ನೋಡ ನೋಡುತ್ತಿದ್ದಂತೆ 6 ಮಹಡಿಗಳ ಜೆ.ಕೆ. ಟವರ್ಸ್‌ ಏರಿ 4.30ಕ್ಕೆ ಕೆಳಕ್ಕಿಳಿದರು.

    ಮಂಗ ಮರ ಏರಿದಷ್ಟೇ ಸಲೀಸಾಗಿ ಕಟ್ಟಡ ಏರಿದ ಕೋತಿರಾಮ ಅವರು ಅದೇ ವೇಗದಲ್ಲಿ ಕೆಳಗಿಳಿದು ಅಚ್ಚರಿ ಮೂಡಿಸಿದರು. ಅವರ ಈ ಸಾಹಸ ಕಾರ್ಯ ನೋಡಲೆಂದು ಶಾಸ್ತ್ರೀ ವೃತ್ತದ ಸುತ್ತಮುತ್ತ ಅಪಾರ ಜನಸಂದಣಿ ನೆರೆದಿತ್ತು. ಕಟ್ಟಡದಿಂದ ಕೆಳಗಿಳಿಯುತ್ತಿದ್ದಂತೆ ಜನರು ಅಭಿನಂದನೆಯ ಮಹಾಪೂರವನ್ನೇ ಹರಿಸಿದರು.

    ಜ್ಯೋತಿರಾಜ್ ಅವರ ಸಾಹಸ ಕಾರ್ಯ ವೀಕ್ಷಿಸಲೆಂದು ಬಂದ ಜನಸಂದಣಿಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು. ಪೊಲೀಸರು ಸುಗಮ ಸಂಚಾರಕ್ಕೆ ಬಳಿಕ ಅನುವು ಮಾಡಿಕೊಟ್ಟರು. ಇದೇ ಸಂದರ್ಭ ಜೆ.ಕೆ. ಟವರ್ಸ್‌ನ ಮಾಲೀಕ ಸತೀಶ್ ಶೆಟ್ಟಿ ಸಾಹಸ ಮಾಡಿದ ಜ್ಯೋತಿರಾಜ್ ಅವರನ್ನು ಸಹಸ್ರಾರು ನಾಗರಿಕರ ಸಮ್ಮುಖ ಸನ್ಮಾನಿಸಿದರು.
    ಕಟ್ಟಡ ಏರುವ ಮೊದಲು ಜ್ಯೋತಿರಾಜ್ ಅವರನ್ನು ಛಾಯಾಗ್ರಾಹಕರ ಸಂಘದವರು ಬೃಹತ್ ಬೈಕ್ ರ್ಯಾಲಿ ಮೂಲಕ ಬಹುಮಹಡಿ ಕಟ್ಟಡದತ್ತ ಕರೆತಂದರು.

    ಜೋತಿರಾಜ್ ಯಾನೆ ಕೋತಿರಾಜನ ಕಥೆ:
    ತಮಿಳುನಾಡಿನ ತೇನಿ ಜಿಲ್ಲೆಯ ಕಾಮರಾಜ ನಗರದಲ್ಲಿ ಜನಿಸಿದ 25ರ ಹರೆಯದ ಜ್ಯೋತಿರಾಜ್ ಯಾನೆ ಕೋತಿರಾಜ್ ಚಿಕ್ಕ ವಯಸ್ಸಿನಲ್ಲಿಯೇ ಬಾಗಲಕೋಟೆಯಲ್ಲಿ ಬಂದು ನೆಲೆಸಿದ್ದರು. ಕೆಲವು ವರ್ಷಗಳ ಕಾಲ ಇಲ್ಲಿಯೇ ಕೆಲಸ ಮಾಡಿಕೊಂಡಿದ್ದ ಜ್ಯೋತಿರಾಜ್ ಬಳಿಕ ಚಿತ್ರದುರ್ಗದತ್ತ ಮುಖಮಾಡಿದರು. ತನ್ನ 18ನೇ ವಯಸ್ಸಿನಲ್ಲಿ ಬದುಕಿನಲ್ಲಿ ಬೇಸರಗೊಂಡು ಸಾಯಲು ಪ್ರಯತ್ನಿಸಿದರೂ ಅದೃಷ್ಟವಶಾತ್ ಬದುಕಿಬಂದರು. ಸಾಯ ಹೋರಟ ಅವರ ಕೊನೆಯ ಪ್ರಯತ್ನವೇ ಅವರ ಬದುಕನ್ನು ಬದಲಿಸಿತು. ಕೋತಿಗಳು ಸಲೀಸಾಗಿ ಬಂಡೆಗಳನ್ನು ಏರುವುದನ್ನು ಕಂಡು ಪ್ರೇರಿತರಾಗಿ ಅದರಂತೆಯೇ ಬಂಡೆಗಳನ್ನು ಏರುವುದನ್ನು ಕಲಿತು ಯಶಸ್ವಿಯಾದರು. ಚಿತ್ರದುರ್ಗಕ್ಕೆ ಬರುವ ಪ್ರವಾಸಿಗರ ಎದುರು ಕೋಟೆಗಳನ್ನು ಏರಿ ತನ್ನ ಪ್ರತಿಭೆಯನ್ನು ತೋರ್ಪಡಿಸಿಕೊಂಡು ಕೋತಿರಾಜ್ ಎಂದೇ ಪ್ರಸಿದ್ದರಾದರು.

    Click here

    Click here

    Click here

    Call us

    Call us

    Kotirama Clime Kundapura1

    ಮಾಧ್ಯಮಗಳೊಂದಿಗೆ ಮಾತನಾಡಿದ ಜ್ಯೋತಿರಾಜ್ ನನ್ನ ಸಾಹಸ ಕ್ರೀಡೆಯನ್ನು ಪ್ರಪಂಚಕ್ಕೆ ತೋರಿಸಬೇಕೆಂಬ ಮಹದಾಸೆ ಇದ್ದು ಪ್ರಪಂಚ ದಲ್ಲಿರುವ ಎಲ್ಲ ಬಂಡೆಗಳನ್ನು ಏರಬೇಕೆಂಬ ತವಕವಿದೆ. ಇದುವರೆಗಿನ ನನ್ನ ಸಾಹಸ ಯಾತ್ರೆಯಲ್ಲಿ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಎದುರಾಗಿದ್ದು ಜೋಗ್‌ಫಾಲ್ಸ್‌ನಲ್ಲಿ. ನೀರನ್ನು ಭೇದಿಸಿ ಮೇಲೇರುವ ಸಾಹಸ ಸಾಕಷ್ಟು ರಿಸ್ಕ್ ಆಗಿತ್ತು. ದೇವರು ಈ ಸಾಹಸ ಕಾರ್ಯದಲ್ಲಿ ಕೈ ಹಿಡಿದಿದ್ದರಿಂದ ಎಲ್ಲವೂ ಸುಖಮಯವಾಯಿತು ಎಂದರು. ಸತತ 10 ಬಾರಿ ಫಾಲ್ಸ್ ಕ್ಲೈಂಬಿಂಗ್ ಮಾಡಿದ್ದೇನೆ. ಮೈಸೂರಿನಲ್ಲಿರುವ 14 ಮಹಡಿ ಕಟ್ಟಡ ಏರಿದ್ದು ಇದುವರೆಗಿನ ಹೈಯೆಸ್ಟ್ ಕ್ಲೈಂಬಿಂಗ್ ಎಂದು ವಿವರಿಸಿದರು. ತಾನು ಈ ಮಟ್ಟಕ್ಕೆ ಬೆಳೆದು ಬಂದಿದ್ದು ಸಾರ್ವಜನಿಕರ ಪ್ರೇರಣೆ, ಪ್ರೋತ್ಸಾಹದಿಂದ. ಕರ್ನಾಟಕ ನನ್ನನ್ನು ಪೋಷಿಸಿದೆ. ಕನ್ನಡಿಗನಾಗಿ ನನ್ನ ಪ್ರತಿಭೆಯನ್ನು ಜಗತ್ತಿಗೆ ತೋರಿಸಬೇಕೆಂಬ ಇಚ್ಛೆ ಇದೆ. ಕುಂದಾಪುರಕ್ಕೆ ಇದು ನನ್ನ ಮೊದಲ ಭೇಟಿಯಾಗಿದ್ದು ಇಲ್ಲಿನ ಜನರ ಪ್ರೋತ್ಸಾಹ ತನಗೆ ಖುಷಿ ತಂದಿದೆ ಎಂದರು.

    ಸರಕಾರ ಪ್ರತಿಭೆಯನ್ನು ಗುರುತಿಸಬೇಕಿದೆ: ವಿದೇಶಗಳಲ್ಲಿ ವಾಲ್ ಕ್ಲೈಂಬಿಂಗ್‌ಗೆ ನೀಡುತ್ತಿರುವ ಪ್ರೋತ್ಸಾಹ ನಮ್ಮಲ್ಲಿ ನೀಡುತ್ತಿಲ್ಲ. ಕಳೆದ 4 ವರ್ಷಗಳಿಂದ ವಾಲ್ ಕ್ಲೈಂಬಿಂಗ್ ನಿರ್ಮಿಸಿಕೊಡಿ ಎಂಬ ಕನಿಷ್ಠ ಬೇಡಿಕೆಗೂ ಸರಕಾರ ಸ್ಪಂದಿಸದಿರುವುದು ನೋವುಂಟುಮಾಡಿದೆ. ನಾನು ಅನಕ್ಷರಸ್ಥ. ಆದರೆ ದೇವರ ದಯೆಯಿಂದ ಈ ಕಲೆ ನನ್ನಲ್ಲಿ ಅಂತರ್ಗತವಾಗಿದೆ. ಸಾಹಸ ಪ್ರವೃತ್ತಿಯ 20 ಹುಡುಗರಿಗೆ ಈಗಾಗಲೇ ಈ ಕಲೆಯ ಪರಿಚಯ ಮಾಡಿಸಿದ್ದೇನೆ. 2020ರ ಒಲಿಂಪಿಕ್ಸ್‌ಗೆ ವಾಲ್ ಕ್ಲೈಂಬಿಂಗ್‌ಗೆ ಅವಕಾಶ ದೊರಕಿದ್ದು ಅದಕ್ಕಾಗಿ ಮಹಮದ್ ರಫಿ, ಅರ್ಜುನ್, ಸಿದ್ಧೇಶ್, ಮಂಜು ರೆಡಿಯಾಗಿದ್ದಾರೆ. ತಾನು ಭಾರತದಲ್ಲಿ ವಾಲ್ ಕ್ಲೈಂಬಿಂಗ್ ತರಬೇತಿ ಆರಂಭಿಸಬೇಕು. ಸಾಹಸ ಪ್ರವೃತ್ತಿಯ ಯುವಕರಿಗೆ ಪ್ರೇರಣೆ ನೀಡಬೇಕೆಂಬುದು ನನ್ನ ಅಭಿಲಾಷೆ ಎಂದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d