Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂಜಾವೇ ಪ್ರತಿಭಟನೆಗೆ ತಡೆ. ಪೊಲೀಸ್ ಪೋರ್ಸ್‌ನಿಂದ ಹಿಂದೂ ಕಾರ್ಯಕರ್ತರ ಕಟ್ಟಿಹಾಕಲು ಸಾಧ್ಯವಿಲ್ಲ
    Recent post

    ಹಿಂಜಾವೇ ಪ್ರತಿಭಟನೆಗೆ ತಡೆ. ಪೊಲೀಸ್ ಪೋರ್ಸ್‌ನಿಂದ ಹಿಂದೂ ಕಾರ್ಯಕರ್ತರ ಕಟ್ಟಿಹಾಕಲು ಸಾಧ್ಯವಿಲ್ಲ

    Updated:15/09/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಪರಿವಾರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ್ದು, ಪೂರ್ವನುಮತಿಯಿಲ್ಲದೇ ಪ್ರತಿಭಟನೆಗೆ ಮಾಡುತ್ತಿದ್ದಾರೆಂಬ ಕಾರಣವೊಡ್ಡಿ ಪ್ರತಿಭಟನೆಗೆ ಮುಂದಾದ ಮುಖಂಡರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದ ಘಟನೆ ನಡೆಯಿತು.

    Click Here

    Call us

    Click Here

    [quote bgcolor=”#ffffff” arrow=”yes” align=”right”]ಪ್ರಕರಣದ ಹಿನ್ನೆಲೆ ಏನು?
    ಉಡುಪಿಯ ಕಾಲೇಜೊಂದರಲ್ಲಿ ಓದುತ್ತಿರುವ ಕಾಪು ಮೂಲದ ಅನ್ಯಕೋಮಿನ ಮೂವರು ಯುವತಿಯರು ಹಾಗೂ ಇಬ್ಬರು ಯುವಕರು ಕಾರಿನಲ್ಲಿ ಬೈಂದೂರಿಗೆ ತೆರಳಿ ಅಲ್ಲಿಂದ ಮರವಂತೆಗೆ ಬಂದಿದ್ದರು. ಮರವಂತೆ ಬೀಚ್ ಬಳಿ ವಿದ್ಯಾರ್ಥಿಗಳ ವರ್ತನೆಯನ್ನು ಗಮನಿಸುತ್ತಿದ್ದ ಸಂಘಟನೆ ಕಾರ‍್ಯಕರ್ತರು, ಅವರು ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಹಿಂಬಾಲಿಸಿ ಕೋಟೇಶ್ವರ ಸಂಘಟನೆಗೆ ಮಾಹಿತಿ ನೀಡಿದ್ದರು. ಕೋಟೇಶ್ವರದಲ್ಲಿ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ವಿಚಾರಣೆ ಬಳಿಕ ವಿದ್ಯಾರ್ಥಿಗಳ ತಪ್ಪಿಲ್ಲ ಎಂದು ಪೊಲೀಸರು ತಿಳಿಸಿದಾಗ, ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ ಠಾಣಾಧಿಕಾರಿ ಅವ್ಯಾಚವಾಗಿ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ ಬಗ್ಗೆ ಆರೋಪಿಸಿದ್ದ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಲಾಗುತ್ತು. ಈ ನಡುವೆ ಹದಿನೈದು ಮಂದಿ ಕಾರ್ಯಕರ್ತರ ಮೆಲೆಯೂ ಮುಂಜಾಗೃತಾ ಕ್ರಮವಾಗಿ 107 ಕೇಸು ದಾಖಲಿಸಲಾಗಿತ್ತು.[/quote]

    ಅನುಮತಿ ಇಲ್ಲದೆ ಪ್ರತಿಭಟನೆಗೆ ಮುಂದಾಗುವ ಬಗ್ಗೆ ಪೊಲೀಸ್ ಬಿಗು ಬಂದೋಸಬಸ್ತ್ ಏರ್ಪಡಿಸಿದ್ದರು. ಎಸ್ಪಿ ಡಾ. ಸಂಜೀವ ಪಾಟೀಲ್ ಕೂಡಾ ಕುಂದಾಪುರಕ್ಕೆ ಆಗಮಿಸಿದ್ದರು. ಸಿಪಿಐ ಮಂಜಪ್ಪ, ಠಾಣಾಧಿಕಾರಿ ನಾಸೀರ್ ಹುಸೇನ್ ನೇತೃತ್ವದಲ್ಲಿ ಕೆಎಸ್‌ಆರ್‌ಪಿ, ಡಿಎಆರ್ ತುಕಡಿ ಹಾಗೂ ನೂರಾರು ಸಿಬ್ಬಂದಿ ನೇಮಕ ಮಾಡಲಾಗಿತ್ತು. ಶಾಸ್ತ್ರಿ ವೃತ್ತದ ಆಸುಪಾಸು ನಿಂತಿದ್ದವರನ್ನೂ, ಹಾಗೂ ಕಾಲೇಜ್ ವಿದ್ಯಾರ್ಥಿಗಳನ್ನು ಕೂಡಾ ಬಿಡದೆ ಪೊಲೀಸರು ಚದುರಿಸಿದರು. ಈ ಸಂದರ್ಭ ಬಿಜೆಪಿ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ವಶಕ್ಕೆ ಪಡೆದವರನ್ನು ಬಿಡಗಡೆ ಮಾಡುವ ಆಶ್ವಾಸನೆ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಶಾಂತವಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಪೊಲೀಸರ ಕೇಸುಗಳಿಗೆ ಹಿಂದೂ ಸಂಘಟನೆ ಜಗ್ಗುವುದಿಲ್ಲ:
    ಪೊಲೀಸ್ ಇಲಾಖೆ ಕಾಂಗ್ರೆಸ್ ಪಕ್ಷದ ಕಪಿಮುಷ್ಟಿಯಲ್ಲಿದ್ದು, ಹಿಂದೂ ವಿರೋಧಿಯಂತೆ ವರ್ತಿಸುತ್ತಿದೆ. ಹಿಂದೂ ಸಂಘಟನೆ ವಿರುದ್ಧ ಎಷ್ಟೇ ಕೇಸ್ ದಾಖಲಿಸಿದರೂ ನಾವು ಜಗ್ಗುವುದಿಲ್ಲ ಎಂದು ದ.ಕ ಜಿಲ್ಲೆ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ಮಾಜಿ ಉಪಾಧ್ಯಕ್ಷ ಫ್ರಾಂಕ್ಲಿನ್ ಹೇಳಿದರು. ಬಂಟ್ವಾಳ ಶರತ್ ಮಡಿವಾಳ ಶವ ಯಾತ್ರೆ ಸಂದರ್ಭದಲ್ಲೂ ಕಿಡಿಗೇಡಿಗಳು ದಾಂದಲೆ ನಡೆಸಿ, ಹಿಂದೂ ಸಂಘಟನೆ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದರು. ಕುಂದಾಪುರದಲ್ಲಿ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಪೊಲೀಸರಿಗೆ ಒಪ್ಪಿಸದರೂ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ನಮಗೆ ಜೈಲು, ಕೇಸ್ ಹೊಸದಲ್ಲ. ಪೊಲೀಸ್ ಪೋರ್ಸ್ ಮೂಲಕ ನಮ್ಮ ಕಾರ‍್ಯಕರ್ತರ ಕಟ್ಟಿಹಾಕಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

    ಕೋಟೇಶ್ವರಕ್ಕೆ ಖಂಡನಾ ಸಭೆ:
    ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ ಪೊಲೀಸರು ತಡೆಯೊಡ್ಡಿದ ಬಳಿಕ ಕೋಟೇಶ್ವರದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಖಂಡನಾ ಸಭೆ ಜರುಗಿತು. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಒಂದು ವಾರದಲ್ಲಿ ತನಿಖೆ ನಡೆಸುವ ಭರವಸೆ ನೀಡಿದ್ದು, ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ. ನ್ಯಾಯ ಸಿಗದಿದ್ದರೆ ಮತ್ತೆ ಹೋರಾಟ ನಿಶ್ಚಿತ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. 500ಕ್ಕೂ ಹೆಚ್ಚಿನ ಕಾರ‍್ಯಕರ್ತರು ಖಂಡನಾ ಸಭೆಯಲ್ಲಿ ಭಾಗವಹಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    ಘಟನೆಯ ಬಗ್ಗೆ ಎಸ್ಪಿ ಡಾ. ಸಂಜೀವ ಎಂ.ಪಾಟೀಲ್ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಕೊನೆ ಕ್ಷಣದಲ್ಲಿ ಪ್ರತಿಭಟನೆಗೆ ಅನುಮತಿ ಕೇಳಿದ್ದು, ಇಲಾಖೆಯ ಆಂತರಿಕ ಕಾರಣ, ಬಂದೋವಸ್ತ್ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಪ್ರತಿಭಟನೆ ಹತ್ತಿಕ್ಕುವ ಉದ್ದೇಶ ಪೊಲೀಸ್ ಇಲಾಖೆಗೆ ಇಲ್ಲ. ಸಂಘಟನೆಗಳು ಮಾಡಿದ ಆರೋಪದ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂದರು.

    Like this:

    Like Loading...

    Related

    Kundapura police Protest Vishwa Hindu Parishatah
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d