Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಡಿಗರು ಕಾವ್ಯದ ಮೂಲಕ ಕಾಲದ ವಾಸ್ತವವನ್ನು ವಿಮರ್ಷಿಸಿದ್ದರು: ಮುರಳೀಧರ ಉಪಾಧ್ಯ
    ಊರ್ಮನೆ ಸಮಾಚಾರ

    ಅಡಿಗರು ಕಾವ್ಯದ ಮೂಲಕ ಕಾಲದ ವಾಸ್ತವವನ್ನು ವಿಮರ್ಷಿಸಿದ್ದರು: ಮುರಳೀಧರ ಉಪಾಧ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪರಂಪರೆಯಿಂದ ಬಂದದ್ದೆಲ್ಲ ಶ್ರೇಷ್ಠ ಎನ್ನುವುದನ್ನು ಒಪ್ಪದೇ, ಒಳಿತು ಕೆಡುಕುಗಳನ್ನು ವಿಮರ್ಷಿಸಿ ಕಾಲಕ್ಕೆ ತಕ್ಕಂತೆ ಮಾರ್ಪಾಡುಗೊಳಿಸಿದ ಬಳಿಕವಷ್ಟೇ ಒಪ್ಪುತ್ತಿದ್ದ ವ್ಯಕ್ತಿತ್ವ ಕವಿ ಗೋಪಾಲಕೃಷ್ಣ ಅಡಿಗರದ್ದಾಗಿತ್ತು. ಕಾಲದ ವಾಸ್ತವಗಳನ್ನು ಅವರ ಕಾವ್ಯದ ಮೂಲಕವೂ ಕಟುಮಾತಿನಲ್ಲಿ ವಿಮರ್ಶಿಸಿದ್ದರು. ಹೇಳಬೇಕಿರುವುದನ್ನು ತೀಕ್ಷವಾಗಿ ಹೇಳುವ ಧೈರ್ಯ ಅವರಲ್ಲಿತ್ತು ಎಂದು ವಿಶ್ರಾಂತ ಪ್ರಾಂಶುಪಾಲ ವಿಮರ್ಶಕ, ಮುರಳೀಧರ ಉಪಾಧ್ಯ ಹಿರಿಯಡಕ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದದ ಸುವಿಚಾರ ಬಳಗ ಮತ್ತು ಕುಂದ ಅಧ್ಯಯನ ಕೇಂದ್ರ ಸಿರಿಮೊಗೇರಿ ಸಮಷ್ಟಿ ವೇದಿಕೆಯ ಸಹಕಾರದೊಂದಿಗೆ ಗುರುವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಎಂ. ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ದಿ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಯು. ಚಂದ್ರಶೇಖರ ಹೊಳ್ಳರು ಬರೆದ ‘ಅಡಿಗರ ವಿಶಿಷ್ಟತೆ-ಒಂದು ಅಧ್ಯಯನ’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಇತಿಹಾಸದ ವೈಭವೀಕರಣವನ್ನು ಗೇಲಿ ಮಾಡಿದ ಅಡಿಗರು ಪರಂಪರೆ ಮತ್ತು ಆಧುನಿಕತೆಯ ಸಂಘರ್ಷದ ಸಂಕೀರ್ಣ ಚಿತ್ರಗಳನ್ನು ತಮ್ಮ ಕಾವ್ಯದಲ್ಲಿ ನೀಡಿದರು. ‘ಚಲನವೇ ಬದುಕು-ನಿಶ್ಚಲವೇ ಮರಣ’ ಎನ್ನುವುದು ಅಡಿಗರ ಕಾಣ್ಕೆ ಎಂದು ಅವರು ಹೇಳಿದರು.

    ಸಪ್ತಾಹವನ್ನು ಉದ್ಘಾಟಿಸಿದ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ವಿದ್ಯಾರ್ಥಿಗಳು ಓದು, ಅಂಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಾಹಿತ್ಯದ ಅಧ್ಯಯನದ ಮೂಲಕ ಬೌದ್ಧಿಕ ಬೆಳವಣಿಗೆಗೆ ಒತ್ತು ನೀಡಬೇಕು. ಕೆರಳಿಸುವ ಸಾಹಿತ್ಯವನ್ನು ದೂರವಿರಿಸಿ, ಅರಳಿಸುವ ಸಾಹಿತ್ಯ ಓದಬೇಕು ಎಂದರು.

    ಪ್ರಾಂಶುಪಾಲ ಬಿ. ಎ. ಮೇಳಿ ಅಧ್ಯಕ್ಷತೆ ವಹಿಸಿದ್ದರು. ಮುರಳೀಧರ ಉಪಾಧ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪ್ರಾಧ್ಯಾಪಕ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಸಿರಿಮೊಗೇರಿ ಸಮಷ್ಟಿ ವೇದಿಕೆಯ ಎಂ. ಜಯರಾಮ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ನವೀನ್ ಪರಿಚಯಿಸಿದರು. ಸುವಿಚಾರ ಬಳಗದ ಸಂಚಾಲಕ ವಿ. ಎಚ್. ನಾಯಕ್ ವಂದಿಸಿದರು. ಕನ್ನಡ ವಿಭಾಗದ ಸತೀಶ್ ಎಂ. ನಿರೂಪಿಸಿದರು. ವಿದ್ಯಾರ್ಥಿಗಳಾದ ಪಲ್ಲವಿ, ಸಂಪ್ರೀತಾ, ದಿನೇಶ್, ಲೋಕೇಶ್, ಮೇಘನಾ ಅಡಿಗರ ಕವನಗಳನ್ನು ಓದಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.