Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಡಿಗರು ಬಹು ಅರ್ಥಗಳುಳ್ಳ ಕವಿತೆ ರಚಿಸಿದ ಶ್ರೇಷ್ಠ ಕವಿ: ಯು.ಸಿ. ಹೊಳ್ಳ
    ಊರ್ಮನೆ ಸಮಾಚಾರ

    ಅಡಿಗರು ಬಹು ಅರ್ಥಗಳುಳ್ಳ ಕವಿತೆ ರಚಿಸಿದ ಶ್ರೇಷ್ಠ ಕವಿ: ಯು.ಸಿ. ಹೊಳ್ಳ

    Updated:22/09/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಮೊಗೇರಿ ಗೋಪಾಲಕೃಷ್ಣ ಅಡಿಗರು ಬಹು ಅರ್ಥಗಳುಳ್ಳ ಕವಿತೆಗಳನ್ನು ರಚಿಸಿದ ಶ್ರೇಷ್ಠ ಕವಿ. ಓದುಗರ ಗ್ರಹಿಕೆಯ ಸಾಮರ್ಥ್ಯದ ಆಧಾರದ ಮೇಲೆ ಅವರ ಕವಿತೆಗಳು ವಿವಿಧ ತೆರನಾದ ಅರ್ಥವನ್ನು ನೀಡುತ್ತಿದ್ದವು ಎಂದು ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದದ ಸುವಿಚಾರ ಬಳಗ ಮತ್ತು ಕುಂದ ಅಧ್ಯಯನ ಕೇಂದ್ರ ಸಿರಿಮೊಗೇರಿ ಸಮಷ್ಟಿ ವೇದಿಕೆಯ ಸಹಕಾರದೊಂದಿಗೆ ಗುರುವಾರ ಬೈಂದೂರು ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಂ. ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ದಿ ಸಪ್ತಾಹದ ಎರಡನೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಅಡಿಗರು ತಮ್ಮ ಅನುಭವಕ್ಕೆ ನಿಲುಕದ್ದನ್ನು ಇರಬಹುದು ಎನ್ನುತ್ತಿದ್ದರೇ ಹೊರತು ಒಂದು ಪರಿಧಿಗೆ ಸೀಮಿತಗೊಳಿಸಿ ಎಲ್ಲವನ್ನೂ ಒಪ್ಪಿಕೊಂಡವರಲ್ಲ. ಆ ಕಾರಣಕ್ಕೆ ಅಡಿಗರು ಗತಿಸಿದ ಬಳಿಕವೂ ಅವರ ವಿಚಾರಧಾರೆ, ಕಥೆ ಕವಿತೆಗಳು ಇಂದಿಗೂ ಪ್ರಸ್ತುತವಾಗಿ ಉಳಿದಿವೆ ಎಂದರು.

    ಶಾಲೆಯ ಮುಖ್ಯೋಪಧ್ಯಾಯ ಮಂಜು ಕಾಳಾವರ ಮಾತನಾಡಿ ಅಡಿಗರನ್ನು ಓದಿ ಹಾಡಿದಷ್ಟೂ ಸುಸಂಸ್ಕೃತ ಸಮಾಜವನ್ನು ಕಟ್ಟುವ ನಾಗರಿಕ ಪ್ರಜ್ಞೆ ಬೆಳೆಯುತ್ತದೆ. ಅವರು ಸಮಾಜದ ಲೋಪಗಳನ್ನು ತಿದ್ದುವ, ಸತ್ಯವನ್ನು ಪ್ರತಿಪಾದಿಸುವ ಕಾರ್ಯವನ್ನು ಮಾಡುತ್ತಲೇ ಬಂದವರು. ಜಗದ ಕವಿ ಎಂದೆನಿಸಿಕೊಂಡಿರುವ ಗೋಪಾಲಕೃಷ್ಣ ಅಡಿಗರನ್ನು ನೆನಪಿಸಿ ಯುವ ಚೇತನಗಳಿಗೆ ಸ್ಫೂರ್ತಿ ತುಂಬುವ ಕೆಲಸವಾಗುತ್ತಿರುವು ಶ್ಲಾಘನೀಯ ಎಂದರು.

    ರತ್ತೂಬಾಯಿ ಜನತಾ ಪ್ರೌಢಶಾಲೆಯ ವಿದ್ಯಾರ್ಥಿ ಸಾಹಿತ್ಯ ವೇದಿಕೆಯನ್ನು ಉದ್ಘಾಟಿಸಿದರು. ಕವಿ ಪುಂಡಲೀಕ ನಾಯಕ್, ಶಿಕ್ಷಕರಾದ ಡಿ.ಸಿ ಹಾಸ್ಯಗಾರ್, ಪ್ರಕಾಶ್, ಸಾಹಿತ್ಯ ವೇದಿಕೆಯ ಅಧ್ಯಕ್ಷ ಯೋಗೇಶ್ ಉಪಸ್ಥಿತರಿದ್ದರು. ಶಿಕ್ಷಕ ಚಂದ್ರ ದೇವಾಡಿಗ ಸ್ವಾಗತಿಸಿದರು. ಸಿರಿಮೊಗೇರಿ ಸಮಷ್ಟಿ ವೇದಿಕೆಯ ಎಂ. ಜಯರಾಮ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುವಿಚಾರ ಬಳಗದ ಸಂಚಾಲಕ ವಿ. ಎಚ್. ನಾಯಕ್ ವಂದಿಸಿದರು. ಶಿಕ್ಷಕ ಆನಂದ ಮದ್ದೋಡಿ ನಿರೂಪಿಸಿದರು. ಅಡಿಗರ ಕವನ ಗಾಯನ ನಡೆಯಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    2 × 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.