ಯಕ್ಷಗಾನ ಧ್ರುವತಾರೆ ಚಿಟ್ಟಾಣಿಗೆ ಕೋಟ, ಕುಂದಾಪುರ, ಬೈಂದೂರಿನಲ್ಲಿ ಅಂತಿಮ ನಮನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಅ.4: ಬಡಗುತಿಟ್ಟಿನ ಯಕ್ಷಗಾನದ ಧ್ರುವತಾರೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ (84) ಅವರು ನಿನ್ನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಮೃತದೇಹವನ್ನು ಚಿಟ್ಟಾಣಿಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಉಡುಪಿಂದ ಆರಂಭಿಸಿ ಸಾಲಿಗ್ರಾಮ, ಕೋಟ, ಕುಂದಾಪುರ, ಬೈಂದೂರು ಸೇರಿದಂತೆ ವಿವಿಧೆಡೆ ಅವರ ಅಪಾರ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.

Call us

Click Here

ಯಕ್ಷಗಾನದ ಬಡಗುತಿಟ್ಟು ಶೈಲಿಯ ಮೇರು ಕಲಾವಿದರು ಚಿಟ್ಟಾಣಿಯವರು ಕೌರವ, ದುಷ್ಟಬುದ್ದಿ, ಭಸ್ಮಾಸುರ, ಕೀಚಕ, ಮಾಗದ, ಕರ್ಣ, ರುದ್ರಕೋಪ, ಕಂಸನ ಪಾತ್ರಗಳಲ್ಲಿ ವಿಂಚಿದ್ದರು. ‘ಚಿಟ್ಟಾಣಿ ಘರಾಣಾ’ ಎಂದೇ ರಾಮಚಂದ್ರ ಹೆಗಡೆ ಶೈಲಿ ಹೆಸರುವಾಸಿಯಾಗಿತ್ತು. ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾದ ಮೊದಲ ಯಕ್ಷಗಾನ ಕಲಾವಿದ ಇವರು. ವಿದೇಶಗಳಲ್ಲೂ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ಬಡಗುತಿಟ್ಟು ಶೈಲಿಯಲ್ಲಿ ನವರಸಗಳನ್ನೂ ಹೊರಹೊಮ್ಮಿಸುತ್ತಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರ ಹುಟ್ಟೂರಿನಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

Leave a Reply