Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ಷರದ ಅರಿವು ಇಲ್ಲದೆಯೇ ವಿದ್ಯಾವಂತರಾದವರು ಯಕ್ಷಗಾನ ಕಲಾವಿದರು: ಜೆಪಿ ಹೆಗ್ಡೆ
    ಊರ್ಮನೆ ಸಮಾಚಾರ

    ಅಕ್ಷರದ ಅರಿವು ಇಲ್ಲದೆಯೇ ವಿದ್ಯಾವಂತರಾದವರು ಯಕ್ಷಗಾನ ಕಲಾವಿದರು: ಜೆಪಿ ಹೆಗ್ಡೆ

    Updated:15/10/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಶಿವರಾಮ ಕಾರಂತರು ಅವಗಣನೆಗೆ ಈಡಾಗಿದ್ದ ಯಕ್ಷಗಾನಕ್ಕೆ ವಿಶೇಷ ಮಾನ್ಯತೆ ತಂದು ಕೊಟ್ಟ ಪರಿಣಾಮ ಈಗ ಈ ಕಲೆ ವ್ಯಾಪಕವಾಗಿ ಬೆಳೆದಿದೆ. ಹೊಸ ಪ್ರಯೋಗಗಳ ಮೂಲಕ ಹೊಸ ಪ್ರದೇಶಗಳಿಗೆ ವಿಸ್ತರಿಸಿದೆ. ಕಲಾವಿದರ ಆರ್ಥಿಕ ಮಟ್ಟ ಸುಧಾರಿಸಿದೆ. ಇದು ಇನ್ನಷ್ಟು ಬೆಳೆಯಬೇಕು. ಅದಕ್ಕೆ ಸಾಂಸ್ಕೃತಿಕ ಸಂಘಟನೆಗಳು ಪೋಷಣೆ ನೀಡಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು.

    Click Here

    Call us

    Click Here

    ನಾಗೂರು ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದ ಭಾಗವತ ಜಿ. ಆರ್. ಕಾಳಿಂಗ ನಾವುಡ ಸ್ಮರಣ ವೇದಿಕೆಯಲ್ಲಿ ಶನಿವಾರ ೫ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪದಲ್ಲಿ ಮಾತನಾಡಿದರು. ಅಕ್ಷರ ಜ್ಞಾನ ಮತ್ತು ಶಿಕ್ಷಣ ಒಂದೇ ಅಲ್ಲ. ಅಕ್ಷರದ ಅರಿವು ಇಲ್ಲದೆಯೂ ವಿದ್ಯಾವಂತನಾಗಬಹುದು ಎನ್ನುವುದಕ್ಕೆ ಯಕ್ಷಗಾನ ಕಲಾವಿದರಲ್ಲಿ ಉದಾಹರಣೆ ದೊರೆಯುತ್ತದೆ. ಅವರು ತಾವೂ ಬೆಳೆದು ಜನರಿಗೂ ಅನೌಪಚಾರಿಕ ಶಿಕ್ಷಣ ನೀಡುತ್ತಾರೆ. ಪೌರಾಣಿಕ ಕಥಾಪ್ರಸಂಗದ ಪ್ರದರ್ಶನಗಳ ಮೂಲಕ ಜನರಿಗೆ ಪುರಾಣಗಳ ಅರಿವು ಮೂಡಿಸುವುದರ ಜತೆಗೆ ಶುದ್ಧ ಕನ್ನಡ ಭಾಷೆಯನ್ನು ಕಲಿಸುತ್ತಾರೆ. ಆ ನೆಲೆಯಲ್ಲಿ ಪರಿಸರದಲ್ಲಿ ಕಲಾಸಕ್ತಿಯನ್ನು ಬೆಳೆಸಿ ಸಂಸ್ಕಾರ ನೀಡುತ್ತಿರುವ ಧಾರೇಶ್ವರ ಯಕ್ಷಬಳಗ ಐದು ವರ್ಷಗಳಿಂದ ನಡೆಸಿಕೊಂಡು ಬಂದ ಯಕ್ಷಗಾನ ಜ್ಞಾನಯಜ್ಞ, ಕಲಾವಿದರ ಸಂಮಾನ ಅನುಕರಣೀಯ ಎಂದರು.

    ಯಕ್ಷಗಾನ ಕೃಷಿಗೆ ಹೊಸ ಆಯಾಮ ಕೊಟ್ಟು ನಿರಂತರ ಅದರಲ್ಲಿ ತೊಡಗಿಕೊಂಡ ಹಿರಿಯ ಕಲಾವಿದರು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ. ಅವರು ರಂಗದ ಮೇಲೆ ಮೂಡಿಸಿದ ಹೆಜ್ಜೆಯ ಗುರುತುಗಳಿಗೆ ಸಾವೆಂಬುದಿಲ್ಲ. ಇಂತಹ ಮೇರು ವ್ಯಕ್ತಿತ್ವದ ಕಲಾವಿದರು ಚಿರಸ್ಮರಣೀಯರು ಎಂದು ಇತ್ತೀಚಿಗೆ ನಿಧನರಾದ ಚಿಟ್ಟಾಣಿಯವರನ್ನು ನೆನಪಿಸಿಕೊಂಡರು.

    ಪ್ರಸಕ್ತ ಸಾಲಿನ ತೆಕ್ಕಟ್ಟೆ ಆನಂದ ಮಾಸ್ತರ್ ಸ್ಮರಣೆಯ ’ಕಲಾತಪಸ್ವಿ’ ಪ್ರಶಸ್ತಿಯನ್ನು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಖಂಬದಕೋಣೆ ರೈತರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೀರ್ತಿಶೇಷ ಕಲಾವಿದ ತೆಕ್ಕಟ್ಟೆ ಆನಂದ ಮಾಸ್ತರ್ ಅವರ ಪತ್ನಿ ಸುನಂದಾ ಶೆಣೈ ಉಪಸ್ಥಿತರಿದ್ದರು. ಗೋವಿಂದ ಮಟ್ನಕಟ್ಟೆ ನಿರೂಪಿಸಿ ವಂದಿಸಿದರು. ನಂತರ ಸಪ್ತಾಹದ ಕೊನೆಯದಾದ ’ಶ್ರೀಕೃಷ್ಣ ಸಂಧಾನ’ ಪ್ರಸಂಗದ ತಾಳಮದ್ದಲೆ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    7 + 12 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.