ನ.5ಕ್ಕೆ ಹಂಪಿ ಉತ್ಸವದಲ್ಲಿ ಬೈಂದೂರು ’ರಂಗ ಸುರಭಿ’ಯ ಪಿಸುಣಾರಿ ಪ್ರೇಮ ಪ್ರಕರಣ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನ.೩ ರಿಂದ ೫ರ ತನಕ ನಡೆಯಲಿರುವ ಪ್ರಸಿದ್ಧ ಹಂಪಿ ರಾಷ್ಟ್ರೀಯ ಉತ್ಸವ ೨೦೧೭ರಲ್ಲಿ ಬೈಂದೂರಿನ ಹೆಮ್ಮೆಯ ರಂಗ ಕಲಾಸಂಸ್ಥೆ ’ರಂಗ ಸುರಭಿ’ ತಂಡದ ನಾಟಕ ಪ್ರದರ್ಶನಗೊಳ್ಳಲಿದೆ.

Call us

Click Here

ನ.೫ರ ಭಾನುವಾರ ಸಂಜೆ ಹಂಪಿ ಸಾಂಸ್ಕೃತಿಕ ಉತ್ಸವದಲ್ಲಿ ಕಡಲೆಕಾಳು ಗಣಪ ವೇದಿಕೆಯಲ್ಲಿ ಖ್ಯಾತ ನಾಟಕಕಾರ ರಾಜೇಂದ್ರ ಕಾರಂತ್ ಅವರು ರಚಿಸಿ, ಯೋಗೀಶ್ ಬಂಕೇಶ್ವರ ಅವರು ನಿರ್ದೇಶಿಸಿರುವ ’ಪಿಸುಣಾರಿ ಪ್ರೇಮ ಪ್ರಕರಣ’ ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕಕ್ಕೆ ನಾಗೇಂದ್ರ ಬಂಕೇಶ್ವರ್ ನೃತ್ಯ ಸಂಯೋಜನೆ, ಚಂದ್ರ ಬಂಕೇಶ್ವರ ಅವರ ಸಂಗೀತ ಸಂಯೋಜನೆ ಇರಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply