Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದದಲ್ಲಿ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ ಉದ್ಘಾಟನೆ
    ಊರ್ಮನೆ ಸಮಾಚಾರ

    ಉಪ್ಪುಂದದಲ್ಲಿ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ ಉದ್ಘಾಟನೆ

    Updated:17/11/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಂಘಟನೆಯ ಏಳಿಗೆಗೋಸ್ಕರ ಯಾವುದೇ ಫಲಾಪೇಕ್ಷೆಗಳಿಲ್ಲದೇ ಸಮಾನ ಮನಸ್ಕರು ಒಟ್ಟಾಗಿ ಮಾಡಿದ ಸ್ವಾರ್ಥರಹಿತವಾದ ಶ್ರಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಬುದ್ಧವಂತಿಕೆ, ಕಾರ್ಯಚತುರತೆ ಹಾಗೆಯೇ ಹಿರಿಯರು ಹಾಕಿಕೊಟ್ಟ ವಿಚಾರಧಾರೆಗಳನ್ನು ಹೀಗೆಯೆ ಉಳಿಸಿ ಬೆಳೆಸಬೇಕು ಎಂದು ಕರಸಾಸಂ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೆ ಶಕ್ತಿವಂತರಿಗಿಂತ ಭಕ್ತಿವಂತರು ಹೆಚ್ಚಾಗಿದ್ದರು. ಆದರೆ ಈಗ ಕೆಲವು ಸಂಘಟನೆಗಳಲ್ಲಿ ಶಕ್ತಿವಂತರೇ ಮೇಲ್ಗೈ ಸಾಧಿಸಿರುವುದರಿಂದ ಪರಸ್ಪರ ಅನುಮಾನಗಳು, ಭಿನ್ನಾಭಿಪ್ರಾಯಗಳು ಕಂಡುಬರುತ್ತಿದ್ದು, ಸಮಾಜದ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಟ್ರಸ್ಟ್ ಹೆಸರೇ ಸೂಚಿಸುವಂತೆ ಪರಸ್ಪರ ವಿಶ್ವಾಸದಿಂದ ಸರ್ವರೂ ಸಮಾನರು ಎಂಬ ನೆಲೆಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ನಮ್ಮ ಜೀವನದ ಸಾರ್ಥಕತೆ ಕಾಣಬಹುದು. ಯಕ್ಷಗಾನ ಕಲೆ ಉಳಿಸುವ ನಿಟ್ಟಿನಲ್ಲಿ ಆಸಕ್ತರಿಗೆ ಯಕ್ಷಗಾನ, ಮುಖವರ್ಣಿಕೆ ಉಚಿತ ತರಬೇತಿ ಮತ್ತು ಅಶಕ್ತ ಯಕ್ಷ ಕಲಾವಿದರಿಗೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಉಪ್ಪುಂದ ಪರಿಸರದ ಕಲಾವಿದರು ಹುಟ್ಟುಹಾಕಿದ ಈ ಟ್ರಸ್ಟ್ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದರು.

    ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ರಘುರಾಮ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ವಿದ್ವಾನ್ ಶಂಕರನಾರಾಯಣ ಭಟ್ ಶುಭಾಶಂಸನೆಗೈದರು. ಜಿಪಂ ಸದಸ್ಯ ಸುರೇಶ ಬಟ್ವಾಡಿ, ಉದ್ಯಮಿಗಳಾದ ಬಿ. ಜಿ. ಲಕ್ಷ್ಮೀಕಾಂತ್ ಬೆಸ್ಕೂರ್, ಯು. ಎ. ಮಂಜು ದೇವಾಡಿಗ, ಬಿ. ಅಣ್ಣಪ್ಪ ಖಾರ್ವಿ ಕರ್ಕಿಕಳಿ, ಗಣೇಶ ಗಾಣಿಗ ಉಪ್ಪುಂದ, ಟ್ರಸ್ಟಿನ ಅಧ್ಯಕ್ಷ ಉಪ್ಪುಂದ ನಾಗೇಂದ್ರರಾವ್, ಕಾರ್ಯದರ್ಶಿ ಶ್ರೀಧರ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಶ್ರೀಧರ ಸ್ವಾಗತಿಸಿ ಗಿರೀಶ್ ಶ್ಯಾನುಭಾಗ್ ನಿರೂಪಿಸಿ, ವಂದಿಸಿದರು. ನಂತರ ಈ ಟ್ರಸ್ಟಿನ ವೃತ್ತಿಪರ ಕಲಾವಿದರಿಂದ ’ಪಿಂಡೋದ್ಭ’ ಯಕ್ಷಗಾನ ಪ್ರದರ್ಶನ ನಡೆಯಿತು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.