Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಬೈಲ್‌ನಿಂದ ಖಾಸಗಿ ಬದುಕಿನ ಕ್ಷಣಗಳು ಜಗಜ್ಜಾಹಿರು: ಕಾರ್ಟೂನು ಹಬ್ಬ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ಎಸ್ಪಿ ಕೆ. ಅಣ್ಣಾಮಲೈ ಅಭಿಮತ
    Recent post

    ಮೊಬೈಲ್‌ನಿಂದ ಖಾಸಗಿ ಬದುಕಿನ ಕ್ಷಣಗಳು ಜಗಜ್ಜಾಹಿರು: ಕಾರ್ಟೂನು ಹಬ್ಬ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ಎಸ್ಪಿ ಕೆ. ಅಣ್ಣಾಮಲೈ ಅಭಿಮತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. ಬದಲಾದ ಸಮಾಜಕ್ಕೆ ತಕ್ಕಂತೆ ಸೈಬರ್ ಕ್ರೈಮ್ ಕಾನೂನು ಕೂಡ ಪ್ರಬಲವಾಗಿ ರೂಪುಗೊಂಡಿಲ್ಲ. ಸುಪ್ರಿಂ ಕೋರ್ಟ್ ಪಾರ್ಲಿಮೆಂಟ್‌ಗೆ ಕಾನೂನು ರಚಿಸಲು ನಿರ್ದೇಶನ ನೀಡಿದೆಯಾದರೂ, ಅಲ್ಲಿಯ ತನಕ ಅಸಹಾಯಕರಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಚಿಕ್ಕಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು.

    Click Here

    Call us

    Click Here

    ಅವರು ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ಆಶ್ರಯದಲ್ಲಿ, ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಜರುಗಿದ ಕಾರ್ಟೂನು ಹಬ್ಬದಲ್ಲಿ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಇಂದಿನ ಏಳು ನಿಮಿಷದಲ್ಲಿ ಆಗುತ್ತಿದ್ದ ಡಾಟಾ ವರ್ಗಾವಣೆ ನೂರು ವರ್ಷದ ಹಿಂದೆ ವರ್ಗಾವಣೆ ಆಗಲು ೩೫ ವರ್ಷ ಬೇಕಾಗುತ್ತಿತ್ತು. ಅಷ್ಟು ವೇಗದಲ್ಲಿ ಜಗತ್ತು ಸಾಗುತ್ತಿದೆ. ಒಂದು ಗಂಟೆಯಲ್ಲಿ ವಿಶ್ವದಲ್ಲಿ ೧.೧ ಟ್ರಿಲಿಯನ್ ಡಾಲರ್ ಹಣ ವರ್ಗಾವಣೆ ಮಾಡುತ್ತಿದ್ದೇವೆ. ಇಷ್ಟು ವೇಗದಲ್ಲಿ ಜಗತ್ತು ಸಾಗುತ್ತಿದೆ.

    ಮನುಷ್ಯನ ಕೈಯಲ್ಲಿರುವುದು ಮೊಬೈಲ್ ಮಾತ್ರವಲ್ಲ. ಅದು ಮೊಬೈಲ್ ಕಂಪ್ಯೂಟರ್ ಆಗಿ ಪರಿವರ್ತನೆಗೊಂಡಿದೆ. ಅದರಲ್ಲಿ ಎಲ್ಲಾ ಕಾರ್ಯವನ್ನೂ ನಿರ್ವಹಿಸಲು ಸಾಧ್ಯವಿದೆ. ಜೊತೆಗೆ ಮೊಬೈಲ್ ನಮ್ಮ ಖಾಸಗಿ ಬದುಕಿನ ಕ್ಷಣಗಳನ್ನು ಜಗಜ್ಜಾಹಿರು ಮಾಡುತ್ತಿವೆ. ನಮ್ಮ ಪ್ರತಿ ದಿನದ ಪ್ರತಿ ಕ್ಷಣವನ್ನೂ ಟ್ರಾಕ್ ಮಾಡಲಾಗುತ್ತಿದೆ. ಇನ್ನು ಹತ್ತು ವರ್ಷದಲ್ಲಿ ನಮ್ಮ ಬದುಕು ಬಿಗ್ ಡಾಟಾಗೆ ಒಗ್ಗಿಕೊಂಡು ತಂತ್ರಜ್ಞಾನದೊಂದಿಗೆ ಬದುಕಬೇಕಾದ ಅನಿವಾರ್ಯತೆ ಬರಲಿದೆ ಎಂದ ಅವರು ಪ್ರೈವೆಸಿ ನಮ್ಮ ಕೈನಲ್ಲಿಯೇ ಇದ್ದು ಅದನ್ನು ಕಾಪಾಡಿಕೊಳ್ಳುವ ಎಚ್ಚರಿಕೆ ಬೇಕಾಗಿದೆ. ತಂತ್ರಜ್ಞಾನದ ಬಗೆಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಸಾಮಾಜಿಕ ಜಾಲತಾಣಗಳನ್ನು ಬರುವ ಚಿತ್ರ ವಿಡಿಯೋಗಳ ನೈಜತೆಯನ್ನು ಅರಿತು ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯತೆ ಇದೆ ಇಲ್ಲವಾದಲ್ಲಿ ಕೈಯಲ್ಲಿರುವ ಮೊಬೈಲ್ ಕೇವಲ ಪೋನ್ ಆಗಿ ಉಳಿಯದೇ ಮೊಬೈಲ್ ಆಟಮ್ ಬಾಂಬ್ ಆಗಿ ಪರಿವರ್ತನೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ದೇಶದಲ್ಲಿ ಎಲ್ಲರಿಗೂ ಮಾತನಾಡುವ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ವೈರುಧ್ಯವಿರುತ್ತದೆ. ಒಬ್ಬ ವ್ಯಕ್ತಿ ಹೇಳುವುದು ಬಹಳಷ್ಟು ಭಾರಿ ಅರ್ಥವಾಗಿರುವುದಿಲ್ಲ. ಕೆಲವನ್ನೂ ವಿಚಾರಗಳನ್ನು ಒಪ್ಪಿಕೊಳ್ಳುವುದಕ್ಕೆ ತಯಾರಾಗುವುದಿಲ್ಲ. ಇದು ಗಲಭೆ ದಾರಿ ಮಾಡಿಕೊಡುತ್ತದೆ ಎಂದರು.

    Click here

    Click here

    Click here

    Call us

    Call us

    ಕಾರ್ಟೂನು ಮುಖಾಂತರ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ವಿಶೇಷವಾಗಿ ಸೈಬರ್ ಬಗ್ಗೆ ಅರಿವು ಮೂಡಿಸುವ ಕೆಲಸ ನಿರಂತರವಾಗಿ ಆಗುತ್ತಿದೆ.

    ಗೌರವ ಸ್ವೀಕರಿಸಿದ ವೆಬ್ ಡಿಸೈನರ್, ವ್ಯಂಗ್ಯಚಿತ್ರಕಾರ ದಿನೇಶ್ ಸಿ. ಹೊಳ್ಳ ಮಾತನಾಡಿ ಸತೀಶ್ ಆಚಾರ‍್ಯ ಅವರ ಕಾರ್ಟೂನು ವೆಬ್ಸೈಟ್ ಮೂಲಕ ಕಾರ್ಟೂನು ಪ್ರಪಂಚದ ವಿವಿಧ ಮಜಲುಗಳನ್ನು ತೆರೆದಿಡುವ ಪ್ರಯತ್ನ ಮಾಡಲಾಗುತ್ತದೆ. ದೈನಂದಿನ ಕಾರ್ಟೂನುಗಳನ್ನು ಪ್ರಕಟಿಸುವುದರೊಂದಿಗೆ, ಕಾರ್ಟೂನು ರಚನೆಯ ಬಗ್ಗೆ ಮಾಹಿತಿ, ಮುಂತಾದ ವೀಡಿಯೋಗಳನ್ನು ನಿರಂತರವಾಗಿ ಪ್ರಕಟಿಸಿ, ಕಾರ್ಟೂನು ಶಿಕ್ಷಣ ನೀಡುವ ಕೆಲಸ ಮಾಡಲಾಗುತ್ತದೆ ಎಂದರು.

    ಡಾ. ಅರುಲ್ ಕುಮಾರ್ ಕಾರ್ಟೂನಿಷ್ಠ್ ಸತೀಶ್ ಆಚಾರ‍್ಯ ಅವರ ವೆಬ್ಸೈಟ್ ಉದ್ಘಾಟಿಸಿದರು. ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಹಿರಿಯ ವಿಶೇಷ ವರದಿಗಾರ ಅಮಿತ್ ಉಪಾದ್ಯೆ, ಡಾ. ಬಿ.ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ದೋಮ ಚಂದ್ರಶೇಖರ್ ಉಪಸ್ಥಿತರಿದ್ದರು.

    ವೆಬ್ ಡಿಸೈನರ್ ಹಾಗೂ ವ್ಯಂಗ್ಯಚಿತ್ರಕಾರ ದಿನೇಶ್ ಸಿ ಹೊಳ್ಳ ಅವರನ್ನು ಗೌರವಿಸಲಾಯಿತು. ಕಾರ್ಟೂನಿಷ್ಠ್ ಜೀವನ್ ಶೆಟ್ಟಿ ಹಾಗೂ ಚಂದ್ರಶೇಖರ್ ಶೆಟ್ಟಿ ಲೈವ್ ಕಾರ್ಟೂನಿಂಗ್ ಮಾಡಿದರು. ಕಾರ್ಟೂನಿಷ್ಠ್ ಸತೀಶ್ ಆಚಾರ‍್ಯ ವಂದಿಸಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

    Cartoonu Habba 2017
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.