Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಶಾಲೆಯಲ್ಲಿ 12ನೇ ವಾರ್ಷಿಕ ಕ್ರೀಡಾಕೂಟ
    ಕ್ಯಾಂಪಸ್ ಕಾರ್ನರ್

    ಗುರುಕುಲ ಪಬ್ಲಿಕ್ ಶಾಲೆಯಲ್ಲಿ 12ನೇ ವಾರ್ಷಿಕ ಕ್ರೀಡಾಕೂಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಆಟ ಮತ್ತು ಪಾಠ ಕಲಿಕೆಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸುದೃಡವಾದ ದೇಹದಲ್ಲಿ ಸ್ವಸ್ಥವಾದ ಮನಸ್ಸು ಸದಾ ನೆಲೆಯೂರಿರುತ್ತದೆ. ಯಾವ ಶಾಲಾ ಸಂಸ್ಥೆಯು ವಿದ್ಯಾರ್ಥಿಗಳ ಕಲಿಕೆಗಳಲ್ಲಿ ಕ್ರೀಡೆಗೆ ಪ್ರಾಶಸ್ತ್ಯವನ್ನು ಕೊಡುತ್ತದೆಯೊ ಆ ಸಂಸ್ಥೆಯು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಗುರುತರವಾದ ಲಕ್ಷ್ಯವನ್ನು ಇಟ್ಟಿದೆ ಎಂದು ತಿಳಿಯಬೇಕು. ಕ್ರೀಡಾ ಜಗತ್ತಿನಲ್ಲಿ ಅನೇಕ ಕ್ರೀಡಾ ಪಟುಗಳು ತಮ್ಮ ಪ್ರತಿಭೆಗಳ ಮೂಲಕ ವಿಶವಿಖ್ಯಾತರಾಗಿದ್ದಾರೆ. ಕ್ರೀಡೆಯು ದೈಹಿಕ ಶ್ರಮದ ಜೊತೆಗೆ ಆಂತರಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಅಲ್ಲದೇ ವಿದ್ಯಾರ್ಥಿಗಳು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಲು ಕ್ರೀಡೆ ಪ್ರಮುಖ ಕಾರಕ ಅಂಶಗಳಾಗಿದೆ. ಕ್ರೀಡೆಯ ಮೂಲಕವೇ ನಮ್ಮ ಪ್ರತಿಭೆಗಳನ್ನು ಹಾಗೂ ಜೀವನವನ್ನು ನಡೆಸಲು ಸಾಧ್ಯವಿದೆ. ಇದು ವ್ಯಕ್ತಿಗಳಲ್ಲಿ ಶಿಸ್ತು, ಸಂಯಮ, ಸಹಬಾಳ್ವೆ, ನಾಯಕತ್ವ , ಐಕ್ಯತೆ ಮತ್ತು ಕ್ರೀಡಾ ಸ್ಪೂರ್ತಿಯನ್ನು ಬೆಳೆಸುತ್ತದೆ ಎಂದು ಕುಂದಾಪುರ ತಾಲೂಕಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್, ಐ.ಎಫ್.ಎಸ್ ನುಡಿದರು.

    Click Here

    Call us

    Click Here

    ಅವರು ಗುರುಕುಲ ವಿದ್ಯಾಸಂಸ್ಥೆಯ 12ನೇ ವಾರ್ಷಿಕ ಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿ, ಕ್ರೀಡೆಯ ಮಹತ್ವ ಮತ್ತು ಅದರ ಸಮಗ್ರತೆಯ ಬಗ್ಗೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರಲ್ಲದೇ, ಗುರುಕುಲ ವಿದ್ಯಾಸಂಸ್ಥೆಯ ನಿತ್ಯ ಸುಂದರ ಪರಿಸರದ ಬಗ್ಗೆ, ಮಕ್ಕಳಲ್ಲಿರುವ ಶಿಸ್ತು ಹಾಗೂ ಕ್ರೀಡಾಸ್ಪೂರ್ತಿಗಳ ಕುರಿತು ಪ್ರಶಂಸಿಸಿದರು. ಈ ಕಾರ್ಯಕ್ರಮವು ಕ್ರೀಡಾ ಬಾವುಟವನ್ನು ಹಾರಿಸುವುದರ ಮೂಲಕ ಪ್ರಾರಂಭವಾಗಿ, ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ, ಕರಾಟೆ, ಸ್ಕೇಟಿಂಗ್, ಪ್ಯಾರಾಚುಟ್ ಮತ್ತು ಎರೋಬಿಕ್ಸ್ ಇವೆ ಮುಂತಾದ ಪ್ರಾತ್ಯಕ್ಷಿಕೆಗಳು ಎಲ್ಲರ ಮನಸೂರೆಗೊಂಡವು. ಅಲ್ಲದೇ ವೈಯಕ್ತಿಕ ಮತ್ತು ಗುಂಪಿನ ಆಟಗಳನ್ನು ನಡೆಸಲಾಯಿತು. ಸಾಯಂಕಾಲ ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಮತ್ತು ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತಲ್ಲದೇ ಹಾಜರಿದ್ದ ಎಲ್ಲಾ ಪಾಲಕರಿಗೂ ವಿಭಿನ್ನ ಬಗೆಯ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಶಾಲೆಯ ನಾಲ್ಕು ತಂಡಗಳಾದ ರಾಮನ್, ಕಲಾಂ, ಆರ್ಯಭಟ ಮತ್ತು ಕಲ್ಪನಾ ತಂಡಗಳ ವಿಜೇತರಿಗೆ 12ನೇವಾರ್ಷಿಕ ಕ್ರೀಡಾಕೂಟದ ಸಮಗ್ರ ಕ್ರೀಡಾ ಪ್ರಶಸ್ತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಲಾಯಿತು.

    ಕಾರ್ಯಕ್ರಮದಲ್ಲಿ ಬಾಂಡ್ಯ ಶಿಕ್ಷಣಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರುಗಳಾದ.ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ ಎಸ್ ಶೆಟ್ಟಿ ಉಪಸ್ಥಿತರಿದ್ದರಲ್ಲದೇ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಸಾಯಿಜು ಕೆ. ಆರ್ ನಾಯರ್ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಸನ್ನಿ. ಪಿ. ಜಾನ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ, ಅನುಪಮ ಶೆಟ್ಟಿ ಹಾಗೂ ಉಪನ್ಯಾಸಕಿ ಅರ್ಷನಾ ಕಾರ್ಯಕ್ರಮವನ್ನು ನಿರೂಪಿಸಿದರು. ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಸರ್ವರನ್ನು ಸ್ವಾಗತಿಸಿ ಉದ್ಘಾಟಕರ ಪರಿಚಯ ಮಾಡಿದರು. ಅಲ್ಲದೇ, ಶಾಲೆಯ ದೈಹಿಕ ಶಿಕ್ಷಕರಾದ ಬಿನೀಶ್ ರವರು ಸರ್ವರನ್ನು ವಂದಿಸಿದರು.

    Like this:

    Like Loading...

    Related

    Gurukula Pre-University College
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d