Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳ ಕನಸು ನನಸಾಗಲು ಮಾರ್ಗದರ್ಶನದ ಅಗತ್ಯವಿದೆ: ಗಣೇಶ ಕಾಮತ್
    ಊರ್ಮನೆ ಸಮಾಚಾರ

    ವಿದ್ಯಾರ್ಥಿಗಳ ಕನಸು ನನಸಾಗಲು ಮಾರ್ಗದರ್ಶನದ ಅಗತ್ಯವಿದೆ: ಗಣೇಶ ಕಾಮತ್

    No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ : ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳ ನಡುವೆ ಇಂತಹ ತರಬೇತಿ ಮಾರ್ಗದರ್ಶನ ನೀಡುವುದು ಅಸಾಧ್ಯ. ವಿದ್ಯಾರ್ಥಿವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ಹೆಚ್ಚಿನ ಲಾಭ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ತರಬೇತಿ ಪಡೆದುಕೊಳ್ಳಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ ಉತ್ತಮವಾಗಲು ಸಾಧ್ಯ ಎಂದು ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಹಾಗೂ ಗಂಗಾಮೃತ ಯೋಜನೆಯ ಭಾಗವಾಗಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಜ್ಞಾನಾಮೃತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಕೆ.ಸದಾನಂದ ವೈದ್ಯ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಸುಜಾತಾ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರಸಿದ್ಧ ಮಾನಸಿಕ ರೋಗ ತಜ್ಞ ಡಾ.ಪಿ.ವಿ.ಭಂಡಾರಿ ಅವರು ಹದಿಹರೆಯದ ಸಮಸ್ಯೆಗಳು, ಕಾರಣ ಮತ್ತು ಪರಿಹಾರದ ಬಗೆಗ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕ ಡಾ.ಗಣೇಶ ಭಟ್ ಎಸ್. ಅವರು ನಿಮ್ಮ ವ್ಯಕ್ತಿತ್ವವನ್ನು ಗುರುತಿಸಿ ವಿಚಾರದ ಮಾಹಿತಿ ಮಾರ್ಗದರ್ಶನ ನೀಡಿದರು. ಜ್ಞಾನಗಂಗಾ ಕಾರ್ಯಕ್ರಮದ ಅಧ್ಯಕ್ಷ ಕೆ.ಕೃಷ್ಣ ಭಟ್ ಉಪಸ್ಥಿತರಿದ್ದರು.

    ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ ಕಾಮತ್ ಗುಜ್ಜಾಡಿ ಕಾರ್ಯಕ್ರಮ ನಿರೂಪಿಸಿದರು. ಜ್ಞಾನಾಮೃತ ಕಾರ್ಯಕ್ರಮದ ಉಸ್ತುವಾರಿ ಜಿ.ವೆಂಕಟೇಶ ನಾಯಕ್ ವಂದಿಸಿದರು.

     

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.