Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ. 28ರಿಂದ 5 ದಿನಗಳ ಕಾಲ ‘ಬೈಂದೂರು ಬೀಚ್ ಉತ್ಸವ’
    ಊರ್ಮನೆ ಸಮಾಚಾರ

    ಡಿ. 28ರಿಂದ 5 ದಿನಗಳ ಕಾಲ ‘ಬೈಂದೂರು ಬೀಚ್ ಉತ್ಸವ’

    Updated:30/11/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ ನೂತನ ಬೈಂದೂರು ತಾಲೂಕಿನ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೊಂಡಿಯಾಗಿ ಬೆಸುಗೆ ಫೌಂಡೇಶನ್ ಬೈಂದೂರು ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಸಂಸ್ಥೆಯ ಮೂಲಕ ಮೊದಲ ಭಾರಿಗೆ ಪಡುವರಿ ಗ್ರಾಮ ಪಂಚಾಯತ್ ಆತಿಥ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಡಿ.೨೮ರಿಂದ ಜ.೧ರ ತನಕ ಐದು ದಿನಗಳ ಕಾಲ ಬೀಚ್ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಬೆಸುಗೆ ಫೌಂಡೇಶನ್ ರಿ. ಬೈಂದೂರು ಇದರ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರಿನಲ್ಲಿ ನಡೆದ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಬೈಂದೂರು ತಾಲೂಕಿನ ಪ್ರಾಕೃತಿಕ ವೈಶಿಷ್ಟ್ಯವನ್ನು ಜಗತ್ತಿಗೆ ತೆರೆದಿಡಬೇಕೆಂಬ ನಮ್ಮ ಹಂಬಲವನ್ನು ಕಾರ್ಯಗತಗೊಳಿಸುವ ಸಲುವಾಗಿ ಸಮಾನ ಮನಸ್ಕರೊಡಗೂಡಿ ’ಬೆಸುಗೆ ಫೌಂಡೇಶನ್ ರಿ. ಬೈಂದೂರು’ ಎಂಬ ಸಂಸ್ಥೆಯನ್ನು ಹುಟ್ಟುಹಾಕಲಾಗಿದೆ. ತಾಲೂಕಿನ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಯೊಂದನ್ನೇ ಮೂಲ ಧ್ಯೇಯವನ್ನಾಗಿರಿಕೊಂಡು ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು ಈ ಮೂಲಕ ತಾಲೂಕಿನ ಪ್ರವಾಸಿ ಕೇಂದ್ರಗಳ ಬಗೆಗೆ ಮಾಹಿತಿ ಹಾಗೂ ಸರಕಾರದ ಮೂಲಕ ಆಗಬಹುದಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸುವ ಮಹತ್ವಾಕಾಂಕ್ಷೆ ನಮ್ಮ ಮುಂದಿದೆ ಎಂದು ವಿವರಿಸಿದರು.

    ಬೈಂದೂರು ಬೀಚ್ ಉತ್ಸವ 2017:
    ಪ್ರವಾಸೋದ್ಯಮದ ಅರಿವು ಮೂಡಿಸಬೇಕೆಂಬ ಉದ್ದೇಶದೊಂದಿಗೆ ಬೆಸುಗೆ ಫೌಂಡೇಶನ್‌ನ ಮೊದಲ ಕಾರ್ಯಕ್ರಮವಾಗಿ ಇತಿಹಾಸದಲ್ಲಿಯೇ ಪ್ರಥಮ ಭಾರಿಗೆ ’ಬೈಂದೂರು ಬೀಚ್ ಉತ್ಸವ’ವನ್ನು ಹಮ್ಮಿಕೊಂಡಿದೆ. ಪಡುವರಿ ಗ್ರಾಮ ಪಂಚಾಯತ್ ಆತಿಥ್ಯದೊಂದಿಗೆ, ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ದಿನಾಂಕ ೨೮-೧೨-೨೦೧೭ರಿಂದ ೦೧-೦೧-೨೦೧೮ ತನಕ ೫ ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ಪ್ರವಾಸಿ ತಾಣಗಳ ಅರಿವು ಮೂಡಿಸುವ ಜೊತೆ ಜೊತೆಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

    ಡಿ. 28ರಂದು ಉತ್ಸವ ಆರಂಭಗೊಳ್ಳಿದ್ದು, ಖ್ಯಾತ ಸಿನೆಮಾ ಹಿನ್ನೆಲೆ ಗಾಯಕರಾದ ಸುನೀತಾ, ಫರೀದ್ ಜೋಸ್ನಾ, ಯಶವಂತ್ ಮೊದಲಾದವರು ಸಾರಥ್ಯದಲ್ಲಿ ಸಂಗೀತ ನೃತ್ಯ ಮಾಯಾಲೋಕ ಕಾರ್ಯಕ್ರಮ, ಡಿ. 29ರಂದು ಉಡುಪಿಯ ಭಾರ್ಗವಿ ನೃತ್ಯ ತಂಡ ಹಾಗೂ ಸ್ಥಳೀಯ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜೊತೆಗೆ ಮರಳು ಶಿಲ್ಪ, ಗಾಳಿಪಟ ಹಾರಾಟ ಸ್ವರ್ಧೆ, ಪುರುಷರಿಗೆ ಹಗ್ಗ ಜಗ್ಗಾಟ ಹಾಗೂ ಕಬ್ಬಡ್ಡಿ ಸ್ಪರ್ಧೆ, ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ ಸ್ವರ್ಧೆ, ನಿಸರ್ಗ ಚಿತ್ರಕಲಾ ಸ್ವರ್ಧೆ ನಡೆಯಲಿದೆ. ಐದು ದಿನವೂ ಅಳಿವೆಕೋಡಿಗೆ ದೋಣಿ ವಿಹಾರ, ಮಕ್ಕಳಿಗೆ ಪ್ಯಾಂಟಸಿ ಪಾಕ್ ಸೇರಿದಂತೆ ವಿವಿಧ ವಿನೋದಾವಳಿಗಳು ಇರಲಿದ್ದು, ತಾಲೂಕಿನ ನಾಗರಿಕರು ಭಾಗವಹಿಸವಂತೆ ಅವರು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಪಡುವರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಬೆಸುಗೆ ಫೌಂಡೇಶನ್‌ನ ಕೋಶಾಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಕಾರ್ಯಕಾರಿ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಭೀಮೇಶ್ ಕುಮಾರ್ ಹಾಗೂ ಪಡುವರಿ ಗ್ರಾಪಂ ಸದಸ್ಯ ಮಾಣಿಕ್ಯ ಹೋಬಳಿದಾರ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಬೆಸುಗೆ ಫೌಂಡೇಶನ್ ಸ್ಥಾಪನೆಯ ಉದ್ದೇಶಗಳು:
    * ಬೈಂದೂರು ತಾಲೂಕಿನ ಪ್ರವಾಸಿ ತಾಣಗಳಾದ ಸೋಮೇಶ್ವರ ಕಡಲತೀರ, ಕ್ಷಿತಿಜ ನೇಸರಧಾಮ, ಕೂಸಳ್ಳಿ ಜಲಪಾತ, ಮರವಂತೆ ಕಡಲತೀರ, ಆನೆಜರಿ ಬಟರ್‌ಪೈ ಕ್ಯಾಂಪ್, ಅರಶಿಣ ಗುಂಡಿ ಜಲಪಾತ, ಬೆಳ್ಕಲ್ ತೀರ್ಥ, ಐತಿಹಾಸಿಕ ದೇವಾಲಯಗಳಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಬೈಂದೂರು ಸೇನೇಶ್ವರ, ಮೂಡುಗಲ್ಲು ಶ್ರೀ ಕೇಶವನಾಥ ಗುಹಾಂತರ ದೇವಾಲಯ ಸೇರಿದಂತೆ ಇತರೇ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಿವುದು.
    * ಬೈಂದೂರು ತಾಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯೊಂದಿಗೆ ನಿಟಕ ಸಂಪರ್ಕ ಹೊಂದಿ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಈ ಭಾಗಕ್ಕೆ ತರುವಲ್ಲಿ ಶ್ರಮಿಸುವುದು.
    * ಜನಪ್ರತಿನಿಧಿಗಳಿಗೆ ಪ್ರವಾಸೋದ್ಯಮ ಅಭಿವೃದ್ಧಿಯ ಬಗೆಗೆ ನಿರಂತರವಾಗಿ ಮನವರಿಕೆ ಮಾಡುವುದು ಮತ್ತು ಜನಸಾಮಾನ್ಯರಿಗೆ ಪ್ರವಾಸಿ ತಾಣದ ಅಗತ್ಯತೆಯನ್ನು ಮನವರಿಕೆ ಮಾಡಿಕೊಡುವುದು.
    * ಒಂದೇ ಪ್ರದೇಶದ ಭೇಟಿಗಾಗಿ ಆಗಮಿಸುವ ಪ್ರವಾಸಿಗರಿಗೆ ತಾಲೂಕಿನ ಇತರೇ ಪ್ರವಾಸಿ ತಾಣಗಳ ಬಗೆಗೆ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸುವುದು.
    * ವಾಹನ ಚಾಲಕರು, ಹೋಟೆಲ್ ಮಾಲಕರು ಹಾಗೂ ಪ್ರವಾಸಿಗರಿಗೆ ಕೊಂಡಿಯಾಗಿರುವ ವ್ಯಕ್ತಿಗಳಿಗೆ ತರಬೇತಿ, ಮಾರ್ಗದರ್ಶಿ ನೀಡುವುದು.
    * ಪ್ರತಿ ಪ್ರವಾಸಿ ತಾಣಗಳಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸಿ ಇಲಾಖೆ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವುದು.
    * ಪ್ರವಾಸಿಕೇಂದ್ರದ ಅಭಿವೃದ್ಧಿಗೆ ಪೂರಕವಾಗಿ ಹೂಡಿಕೆದಾರರನ್ನು ಹಾಗೂ ಇತರೆ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದು.
    * ರಸ್ತೆ, ರೈಲು ಹಾಗೂ ವಿಮಾನಯಾನಕ್ಕೆ ಅನುಕೂಲವಾಗುವ ವ್ಯವಸ್ಥೆಗೆ ಪೂರಕವಾಗಿ ಸ್ಪಂದಿಸುವುದು.

     

    Like this:

    Like Loading...

    Related

    Byndoor taluk Kundapura Tourism places Tourism
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d