Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಕಾಲೇಜು ವಿದ್ಯಾರ್ಥಿಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಕಲಚೇತನ ರೋಹನ್ ನಾಯಕ್ ಆಯ್ಕೆ
    ಊರ್ಮನೆ ಸಮಾಚಾರ

    ಜಿಲ್ಲಾ ಕಾಲೇಜು ವಿದ್ಯಾರ್ಥಿಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಕಲಚೇತನ ರೋಹನ್ ನಾಯಕ್ ಆಯ್ಕೆ

    Updated:30/11/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು. ಶೇಷಗಿರಿ ಶೆಣೈ ಸ್ಮರಣಾರ್ಥ ಕುಂದಪ್ರಭ ಕುಂದಾಪುರ ಇವರ ಸಹಭಾಗಿತ್ವದೊಂದಿಗೆ ಆಯೋಜಿಸಿದ ನಾಲ್ಕನೆಯ ಉಡುಪಿ ಜಿಲ್ಲಾ ಕಾಲೇಜು ವಿದ್ಯಾರ್ಥಿಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೋಹನ್ ನಾಯಕ್ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ವಿಶೇಷವೆಂದರೆ ರೋಹನ್ ಹುಟ್ಟು ಅಂಧ. ಕಣ್ಣಿಲ್ಲದಿದ್ದರೂ ಸದಾ ಕ್ರಿಯಾಶೀಲ, ಕುತೂಹಲ ಸ್ವಭಾವದ ನಗುಮೊಗದ, ಉಪನ್ಯಾಸಕರ ಅಚ್ಚುಮೆಚ್ಚಿನ ವಿದ್ಯಾರ್ಥಿ. ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಉದ್ಯಮಿ ನಾಗರಮಠ ರಘುನಂದನ್ ನಾಯಕ್ ದಂಪತಿಯ ಹಿರಿಯ ಪುತ್ರನಾಗಿರುವ ಈತನ ಮಾತೃ ಭಾಷೆ ಕೊಂಕಣಿ. ಕೆ.ಜಿ. ತರಗತಿಯಿಂದ ೭ ನೇ ತರಗತಿಯವರೆಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಅನಂತರ ೮ ರಿಂದ ೧೦ ರವರೆಗೆ ಮಂಗಳೂರಿನ ಖomಚಿಟಿ & ಅಚಿಣheಡಿiಚಿಟಿ ಐobo Sಛಿhooಟ ಈoಡಿ ಖಿhe ಃಟiಟಿಜನಲ್ಲಿ ವ್ಯಾಸಂಗ ಮಾಡಿರುವ ಈತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಪಿ.ಯು. ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಈತನಿಗೆ ಬಿ.ಎ. ಮಾಡಿ. ಸಾಧ್ಯವಾದರೆ ಎಲ್.ಎಲ್.ಬಿ ಮಾಡಿ ವಕೀಲನಾಗಬೇಕೆಂಬಾಸೆ ಈತನದ್ದು.

    ಮಂಗಳೂರಿನಲ್ಲಿದ್ದಾಗ ಬ್ರೈಲ್ ಲಿಪಿಯನ್ನು ಅಭ್ಯಸಿರುವ ಈತ ಅಲ್ಲಿನ ಗುರುಗಳ ಮತ್ತು ಸ್ನೇಹಿತರ ಸಹಾಯದಿಂದ ಕನ್ನಡ, ಹಿಂದಿ, ಇಂಗ್ಲಿಷ್‌ನ್ನು ಬರೆಯಲು ಹಾಗೂ ಓದಲು ಕಲಿತಿದ್ದಾನೆ. ಹತ್ತನೆ ತರಗತಿಯ ಪರೀಕ್ಷೆ ಬರೆಯಲು ಬ್ರೈಲ್ ಲಿಪಿಯಲ್ಲಿ ಅವಕಾಶವಿಲ್ಲದ ಕಾರಣ ಪರೀಕ್ಷಾ ಮಂಡಳಿಯ ನಿಯಮದ ಪ್ರಕಾರ ಈತನಿಗಿಂತ ಕಡಿಮೆ ವಯಸ್ಸಿನ, ಈತನ ಪಾಠದ ವಿಷಯಕ್ಕೆ ಹೊರತಾದ ಸಹಾಯಕರೋರ್ವರನ್ನು ಸ್ಕ್ರೈಬ್ ಆಗಿ ನೇಮಿಸಿಕೊಂಡು ಪರೀಕ್ಷೆ ಬರೆದು ಉತ್ತೀರ್ಣನಾಗಿದ್ದಾನೆ.

    ಓದುವುದೆಂದರೆ ಈತನಿಗೆ ಬಲು ಇಷ್ಟ. ಆಗಾಗ ಸಂಗೀತವನ್ನು ಆಲಿಸುತ್ತಿರುವ ಈತ ಟಿ.ವಿ.ಯ ನ್ಯೂಸ್‌ಗಳನ್ನು ನಿತ್ಯವೂ ಕೇಳುತ್ತಾನೆ. ತನ್ನ ಸ್ನೇಹಿತರೊಂದಿಗೆ ಸದಾ ಮಾತಾಡುತ್ತಾ ಖುಷಿ ಪಡುತ್ತಾನೆ. ಎದುರಿಗೆ ಯಾರೇ ಬರಲಿ, ಯಾರೋ ಬಳಿಯಲ್ಲಿದ್ದಾರೆ ಎಂಬುದು ಈತನಿಗೆ ಕೂಡಲೆ ಅರಿವಿಗೆ ಬರುತ್ತದೆ. ಎಷ್ಟೋ ವರ್ಷಗಳ ಹಿಂದೆ ಸಿಕ್ಕವರು ಮತ್ತೆ ಸಿಕ್ಕರೂ ಅವರ ಮಾತುಗಳಿಂದ ಆ ವ್ಯಕ್ತಿಯನ್ನು ಗುರುತಿಸಿ ಮಾತನಾಡಿಸುತ್ತಾನೆ.

    ಈ ಪ್ರಪಂಚದಲ್ಲಿ ಎಷ್ಟೋ ಜನರು ನನ್ನಂತೆ ಅಂಧರಿದ್ದಾರೆ. ಮತ್ತೊಬ್ಬರ ಕಣ್ಣುಗಳನ್ನು ದಾನವಾಗಿ ಪಡೆದು ಮತ್ತೆ ಪ್ರಪಂಚವನ್ನು ನೋಡಿದವರಿದ್ದಾರೆ. ಹಾಗಾಗಿ ನಿಮ್ಮಲ್ಲಿ ಕೇಳುವುದಿಷ್ಟೆ. ನೀವು ನಿಮ್ಮ ಅಂಗಾಂಗಗಳನ್ನು ನಿಮ್ಮ ಕಾಲಾನಂತರ ದಾನಮಾಡಿ. ದೇಹವನ್ನು ಮಣ್ಣು ಮಾಡುವುದಕ್ಕೂ ಮೊದಲು ನಿಮ್ಮ ಕಣ್ಣುಗಳನ್ನು ದಾನಮಾಡಿ. ಬೆಳಕಿಲ್ಲದ ಅಂಧರ ಬಾಳಿಗೆ ಬೆಳಕಾಗಿ ಎಂಬುದು ಈತನ ಕಳಕಳಿ.

    Click here

    Click here

    Click here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.