Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಪಿಐ(ಎಂ) ಬೈಂದೂರು ವಲಯ ಸಮ್ಮೇಳನ
    ಊರ್ಮನೆ ಸಮಾಚಾರ

    ಸಿಪಿಐ(ಎಂ) ಬೈಂದೂರು ವಲಯ ಸಮ್ಮೇಳನ

    Updated:30/11/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಸಿಪಿಐ(ಎಂ) ಪಕ್ಷದ ಅಖಿಲ ಭಾರತ ೨೨ನೇ ಮಹಾ ಅಧಿವೇಶನ ಜರಗಲಿರುವುದರ ಪೂರ್ವಭಾವಿಯಾಗಿ ದೇಶದ ಎಲ್ಲಾ ರಾಜ್ಯ, ಜಿಲ್ಲಾ, ತಾಲೂಕು ವಲಯವಾರು ಸಮ್ಮೇಳನಗಳು ಜರಗುತ್ತಿದ್ದು, ಸಿಪಿಐ(ಎಂ) ಪಕ್ಷದ ಪ್ರಾಥಮಿಕ ಘಟಕದ ಶಾಖಾ ಸಮ್ಮೇಳನಗಳು ಜರಗುತ್ತಿದ್ದು, ಸಿಪಿಐ(ಎಂ) ಪಕ್ಷದ ಪ್ರಾಥಮಿಕ ಘಟಕದ ಶಾಖಾ ಸಮ್ಮೇಳನಗಳು ಸಂಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಸಿಪಿಐ(ಎಂ) ಬೈಂದೂರು ವಲಯ ಸಮ್ಮೇಳನವು ಹೆಮ್ಮಾಡಿ ಆದರ್ಶ ಯುವಕ ಮಂಡಲದ ಸಭಾಂಗಣದ ಅಬ್ರಹಾಂ ಕರ್ಕಡ ವೇದಿಕೆಯಲ್ಲಿ ಯಶಸ್ವಿಯಾಗಿ ಜರಗಿತು.

    Click Here

    Call us

    Click Here

    ಸಿಪಿಐ(ಎಂ) ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸಮ್ಮೇಳನದ ಉದ್ಘಾಟನೆ ಮಾಡುತ್ತಾ ದೇಶದಲ್ಲಿ ದುಡಿಯುವ ಜನರ ಐಕ್ಯತೆಯನ್ನು ಜಾತಿ, ಧರ್ಮ, ಭಾಷೆಗಳನ್ನು ಬಳಸಿ ವಿಚಿದ್ರಗೊಳಿಸುವ ಸಂಘ ಪರಿವಾರದ ಹುನ್ನಾರಕ್ಕೆ ಪ್ರತಿರೋಧ ಒಡ್ಡಬೇಕು. ಸಾಮೂಹಿಕ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು. ಅವರು ಮುಂದುವರಿದು ಮಾತನಾಡುತ್ತಾ, ಬಡತನ/ಸಮಸ್ಯೆಗಳನ್ನು ಪರಿಹರಿಸಲು ಬಂಡವಾಳಶಾಹಿಗೆ ಸಾಮರ್ಥ್ಯವೂ ಇಲ್ಲ, ನೈತಿಕತೆಯೂ ಇಲ್ಲ ಎಂದು ಟೀಕಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮುಖಂಡ ರಾಜೀವ ಪಡುಕೋಣೆ ವಹಿಸಿದ್ದರು. ಕೆ.ಶಂಕರ, ಮಹಾಬಲ ವಡೇರ ಹೋಬಳಿ, ಎಚ್. ನರಸಿಂಹ, ಯು. ದಾಸಭಂಡಾರಿ, ಸಂತೋಷ ಹೆಮ್ಮಾಡಿ, ನಾಗರತ್ನ ನಾಡಾ, ಜಿ.ಡಿ. ಪಂಜು, ಅಣ್ಣಪ್ಪ ಶೇರುಗಾರ, ಲಕ್ಷ್ಮಣ ಮೂವತ್ತುಮುಡಿ, ಉಪಸ್ಥಿತರಿದ್ದರು. ಸಮ್ಮೇಳನದ ಆರಂಭದಲ್ಲಿ ಸಿಪಿಐ(ಎಂ) ಮುಖಂಡ ವೆಂಕಟೇಶ ಕೋಣಿ ಪಕ್ಷದ ಧ್ವಜಾರೋಹಣ ನೆರವೇರಿಸಿದರು.

    ನಂತರ ಜರಗಿದ ಪ್ರತಿನಿಧ್ಯ ಅಧಿವೇಶನದಲ್ಲಿ ಬೈಂದೂರು ವಲಯ ಕಾರ್ಯದರ್ಶಿ ಸುರೇಶ ಕಲ್ಲಾಗರ ಗತ ಸಾಲಿನ ಚಟುವಟಿಕೆಯ ವರದಿ ಮಂಡಿಸಿದರು. ಮನೆ, ನಿವೇಶನ ರಹಿತರ ಭೂಮಿ ಹಕ್ಕಿನ ಹೋರಾಟ ತೀವ್ರ ಗೊಳಿಸುವುದು, ಬೈಂದೂರು ತಾಲೂಕು ಸರ್ವಾಗೀಣ ಅಭಿವೃದ್ಧಿಗೆ ಸೇನಾಪುರದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ, ಹಾಗೂ ಬೆಂಗಳೂರು-ಕಾರವಾರ ರೈಲು ಮಾರ್ಗದಲ್ಲಿ ಹೆಚ್ಚುವರಿ ರಾತ್ರಿ ರೈಲು ಹಾಸನ-ಕುಣಿಗಲ್ ಮಾರ್ಗವಾಗಿ ಓಡಿಸಬೇಕು ಇತ್ಯಾದಿ ನಿರ್ಣಯಗಳನ್ನು ಅಂಗೀಕರಿಸಿ, ಮುಂದಿನ ದಿನಗಳಲ್ಲಿ ಈ ಹೋರಾಟಗಳನ್ನು ತೀವ್ರಗೊಳಿಸುವುದಕ್ಕೆ ತೀರ್ಮಾನ ಕೈಗೊಳ್ಳಲಾಯಿತು. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಶಂಕರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

    ಸಿಪಿಐ(ಎಂ)ಬೈಂದೂರು ವಲಯ ಸಮಿತಿಗೆ ಸುರೇಶ್ ಕಲ್ಲಾಗರ ಕಾರ್ಯದರ್ಶಿಯಾಗಿ ಒಟ್ಟು ೧೩ ಮಂದಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೊನೆಯಲ್ಲಿ ವೆಂಕಟೇಶ ಕೋಣಿ ಎಲ್ಲರಿಗೂ ಅಭಿನಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    4 + twelve =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.