Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಚ್ಚರ ಮಹಿಳೆಯರೇ! ನೀರೊಳಕ್ಕೂ ಕಿರುಕಳ ನೀಡುವ ಕೀಚಕರಿದ್ದಾರೆ!!
    ಅಪಘಾತ-ಅಪರಾಧ ಸುದ್ದಿ

    ಎಚ್ಚರ ಮಹಿಳೆಯರೇ! ನೀರೊಳಕ್ಕೂ ಕಿರುಕಳ ನೀಡುವ ಕೀಚಕರಿದ್ದಾರೆ!!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಸಮುದ್ರದ ಆಳದಲ್ಲಿ ಈಜಲು ತರಬೇತಿಗೆ ಬಂದ ಹೈದರಾಬಾದ್ ಮೂಲದ ಎಂಜಿನಿಯರ್ ಯುವತಿಗೆ ತರಬೇತಿ ನೀಡುತ್ತಿರುವಾಗಲೇ ಕಿರುಕುಳ ನೀಡಿದ ಪ್ರಕರಣ ಸಾಮಾಜಿಕ ತಾಣದ ಮೂಲಕ ಬೆಳಕಿಗೆ ಬಂದಿದ್ದು, ಪ್ರಕರಣ ಗಂಭೀರತೆ ಅರಿತ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿದ ಘಟನೆ ಇತ್ತಿಚಿಗೆ ವರದಿಯಾಗಿದೆ.

    Click Here

    Call us

    Click Here

    ಏನಿದು ಪ್ರಕರಣ:
    ಮುರ್ಡೇಶ್ವರದಲ್ಲಿ ಕಾರ್ಯಾಚರಿಸುತ್ತಿರುವ ಡ್ರಿಮ್ಝ್ ಸ್ಕೂಬಾ ಡ್ರೈವಿಂಗ್ ಸಂಸ್ಥೆಯಲ್ಲಿ ಮೂಲಕ ಆಳ ಸಮುದ್ರದ ಈಜು ತರಬೇತಿಗಾಗಿ ಕುಂದಾಪುರ ತಾಲೂಕಿನ ಶಿರೂರಿಗೆ ತನ್ನ ಸಹೋದ್ಯೋಗಿಗಳೊಂದಿಗೆ 2015ರ ಜನವರಿ 26ರಂದು ಆಗಮಿಸಿದ್ದ ಹೈದರಬಾದ್ ಮೂಲದ, ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಐಟಿ ಎಂಜಿನೀಯರ್ ಆಗಿರುವ ಯುವತಿಗೆ ತರಬೇತಿ ನೀಡಲು, ಡ್ರಿಮ್ಝ್ ಸ್ಕೂಬಾ ಡ್ರೈವಿಂಗ್ ಸಂಸ್ಥೆಯ ನಿರ್ದೇಶಕನಾಗಿರುವ ಉತ್ತರಖಾಂಡ ಮೂಲಕ ಧೀರೇಂದ್ರ ರಾವತ್ ಎಂಬುವವನು ಬಂದಿದ್ದ.

    ಸಮುದ್ರದ ಮಟ್ಟದಿಂದ 12ಮೀಟರ್ ಕೆಳಗೆ ಡೈವಿಂಗ್ ತರಬೇತಿ ನೀಡುತ್ತಿದ್ದ ವೇಳೆ ಯುವತಿಗೆ ಕಿರುಕುಳ ನೀಡಿದ ಬಗ್ಗೆ ಸ್ವತಃ ಯುವತಿ ಬೈಂದೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಆರೋಪಿಯ ವಿರುದ್ಧ ರೌಡಿಶೀಟ್ ತೆರೆದು, ಆತನನ್ನು ದಸ್ತಗಿರಿ ಮಾಡಿ ಬಂಧಿಸಿ, ದೋಷಾರೋಪಣಾ ಪತ್ರವನ್ನು ನ್ಯಾಯಾಲಕ್ಕೆ ಸಲ್ಲಿಸಲಾಗಿತ್ತು. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಡ್ರಿಮ್ಝ್ ಸ್ಕೂಬಾ ಡ್ರೈವಿಂಗ್ ಸಂಸ್ಥೆಯ ಪರವಾನಿಗೆಯನ್ನೂ ಉಡುಪಿಯ ಜಿಲ್ಲಾಧಿಕಾರಿ ರದ್ದುಗೊಳಿಸಿದ್ದಾರೆ. ಇಷ್ಟೇ ಅಲ್ಲದೇ ಪ್ರಕರಣದಿಂದ ಬೇರೆ ಯಾರಿಗಾದರೂ ತೊಂದರೆಯಾಗಿದ್ದಲ್ಲಿ ಉಡುಪಿ ಜಿಲ್ಲೆ ಪೊಲೀಸ್‌ ಅಧೀಕ್ಷಕರನ್ನು ತಕ್ಷಣವೇ ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ. ಸದ್ಯ ಧೀರೇಂದ್ರ ರಾವತ್ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.

    scuba diving Dhrendra rawath

    ಬ್ಲಾಗ್ ಮೂಲಕ ಬೆಳಕಿಗೆ ಬಂತು ಪ್ರಕರಣ
    ಧೀರೇಂದ್ರ ರಾವತ್ ನಿಂದ ಕಿರುಕುಳಕ್ಕೆ ಒಳಗಾದ ಯುವತಿ ತನ್ನ ಬ್ಲಾಗಿನಲ್ಲಿ (ಸ್ರೀಮಿಂಗ್ ಔಟ್ ಸೈಲೆಂಟ್ಲಿ ಫೆ.5,2015) ತಾನು ಅನುಭವಿಸಿದ ನೋವಿನ ಸಂಗತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಳು. ತಾನು ಚಿಕ್ಕವಳಿದ್ದಾಗ ರಾತ್ರಿ ಮಲಗುವ ವೇಳೆ ಹಾಸಿಗೆಯ ಕೆಳಗೆ ರಾಕ್ಷಸರು ಬರುತ್ತಾರೆ ಎಂದು ಹೆದರಿಸುತ್ತಿದ್ದರು. ನಾನು ಅದನ್ನು ನಂಬಿ ಹೊದಿಕೆಯನ್ನು ಮುಚ್ಚಿಕೊಂಡು ಮಲಗಿ ಸುಂದರ ಸೂರ್ಯೋದಯಕ್ಕಾಗಿ ಕಾಯುತ್ತಿದ್ದೆ. ಬೆಳೆಯುತ್ತಿದ್ದಂತೆ ಆ ರಾಕ್ಷಸರು ಮತ್ತೆ ಬರುವುದಿಲ್ಲ ಹೆಚ್ಚಾಗಿ ಅಂತವರು ಯಾರೂ ಇಲ್ಲ ಎಂದೇ ನಂಬಿದ್ದೆ.

    Click here

    Click here

    Click here

    Call us

    Call us

    ನನಗೀಗ 23 ವರ್ಷ. ಆದರೆ ರಾಕ್ಷಸರು ಇಂದಿಗೂ ಇದ್ದಾರೆ ಎಂದೆನಿಸುತ್ತಿದ್ದೆ. ಪ್ರಪಂಚದ ಬೀದಿ ಬೀದಿಗಳಲ್ಲಿ ಅಡಗಿ ಕುಳಿತಿರುವ ರಾಕ್ಷಸರುಗಳು ಪ್ರತಿ ಕ್ಷಣವೂ ನನ್ನಂಥ
    ಹ ಮಹಿಳೆಯರ ಸುರಕ್ಷೆ, ಘನತೆ ಹಾಗೂ ಸ್ವಗೌರವಕ್ಕೆ ಧಕ್ಕೆ ತರುತ್ತಿದ್ದಾರೆ. ನಮ್ಮ ದೌರ್ಬಲ್ಯ, ಅಸಾಹಾಯಕ ಕ್ಷಣಗಳನ್ನು ಅವರು ಚನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರ ಯಾವ ರೀತಿಯಲ್ಲಾದರೂ ಬರಬಹುದು. ಇಂಡಿಗೋ ಏರ್ಲೈನ್ಸ್ ನ ಪ್ರಯಾಣಿಕರಾಗಿ ಅಥವಾ ಸ್ಕೂಬಾ ಡ್ರೈವಿಂಗ್ ನ ತರಬೇತುದಾರರಾಗಿ… ಹೀಗೆ ತನ್ನ ನೋವಿಗೊಂದು ಪೀಠಿಕೆ ನೀಡುತ್ತಾ ಸಮುದ್ರದಾಳದಲ್ಲಿ ಅನುಭವಿಸಿದ ಯಾತನೆಯನ್ನು ಬರೆಯುತ್ತಾ ಮುಂದುವರಿಯುತ್ತಾಳೆ.

    ಅಂದು ಸಮುದ್ರ ಶಾಂತವಾಗಿಯೇ ಇತ್ತು ಆದರೆ ನನ್ನ ತಲೆಯೊಳಗೆ ಚಂಡಮಾರುತವೆದ್ದಿತ್ತು. ಆಮ್ಲಜನಕದ ಟ್ಯಾಂಕ್ ಆತನ ಬಳಿ ಇದ್ದಿದ್ದರಿಂದ ಆತ ಕಿರುಕುಳ ನೀಡುತ್ತಿದ್ದರೂ ‘ಓಕೆ’ ಎಂದು ಹೇಳುವುದನ್ನು ಬಿಟ್ಟು ಬೇರೆವನ್ನೂ ಹೇಳಲು ಸಾಧ್ಯವಾಗುತ್ತಿರಲಿಲ್ಲ ಎಂದು ತನಗಾದ ದೌರ್ಜನ್ಯದ ಅಧ್ಯಾಯವನ್ನು ಸಂಪೂರ್ಣವಾಗಿ ವಿವರಿಸಿದ್ದಳು.

    ಸಮುದಾಳದಲ್ಲಿ 40ನಿಮಿಷಗಳ ಕಾಲ ಆ ರಾಕ್ಷಸನ ಕಿರುಕುಳಕ್ಕೆ ನಲುಗಿ ಬಿಡುಗಡೆಗೊಂಡಾಗ ದಿಟ್ಟತನ ತೋರಿರುವ ಆಕೆ ತನ್ನ ಸಹೋದ್ಯೋಗಿಗಳೊಂದಿಗೆ ಉಳಿದ ತರಬೇತುದಾರರು ಹೇಗೆ ನಡೆದುಕೊಂಡಿದ್ದರು ಎಂಬುದನ್ನು ತಿಳಿದುಕೊಂಡು, ರಾವತ್ ವಿರುದ್ದ ಕಿಡಿಕಾರಿದ್ದಾಳೆ. ಅವನು ಕ್ಷಮೆ ಯಾಚಿಸಿದ ವಿಡಿಯೋವನ್ನೂ ಬ್ಲಾಗ್ ನಲ್ಲಿ ಪೋಸ್ಟ್ ಮಾಡಿದ್ದಾಳೆ. ತನ್ನ ಬಳಿಕ ಯಾವೊಬ್ಬ ಮಹಿಳೆಯೂ ಇಂತಹ ಯಾತನೆಯನ್ನು ಅನುಭವಿಸಬಾರದು ಎಂದು ಪ್ರಕರಣವನ್ನು ಇಷ್ಟಕ್ಕೆ ಬಿಡದೇ ಪೊಲೀಸರಿಗೆ ದೂರು ನೀಡಿದ್ದಳು. ಆಷ್ಟೇ ಅಲ್ಲದೇ ಆತ ಡ್ರೈವಿಂಗ್ ಪ್ರಮಾಣಪತ್ರ ಪಡೆದಿರುವ ಸಂಸ್ಥೆಗೂ ದೂರು ನೀಡಿದ್ದಳು.

    ಯುವತಿಯ ಪೋಷಕರು, ಸ್ನೇಹಿತರು, ಹಿತೈಷಿಗಳು ಆಕೆಯ ಹೋರಾಟದಲ್ಲಿ ಜೊತೆಯಾಗಿದ್ದಾರೆ. ಸಾಮಾಜಿಕ ಜಾಲಾ ತಾಣಗಳಲ್ಲಿ ಬ್ಲಾಗ್‌ ಪೋಸ್ಟ್‌ ಶೇರ್ ಆಗಿರುವುದರಿಂದ ಪ್ರಕರಣ ಸಮಾಜದ ಗಮನಕ್ಕೆ ಬಂದು ಬಾರಿ ಚರ್ಚೆಗೆ ಗ್ರಾಸವಾಗಿತ್ತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d