Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಸಮಾಲೋಚನೆಯಲ್ಲಿ ಸ್ಥಳೀಯಾಡಳಿತ ಬಲವರ್ಧನೆ ಪ್ರತಿಪಾದನೆಗೆ ನಿರ್ಧಾರ
    ಊರ್ಮನೆ ಸಮಾಚಾರ

    ರಾಷ್ಟ್ರೀಯ ಸಮಾಲೋಚನೆಯಲ್ಲಿ ಸ್ಥಳೀಯಾಡಳಿತ ಬಲವರ್ಧನೆ ಪ್ರತಿಪಾದನೆಗೆ ನಿರ್ಧಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಾನವ ಹಕ್ಕುಗಳ ಪ್ರತಿಪಾದನೆ ಮತ್ತು ಸಂಶೋಧನಾ ಪ್ರತಿಷ್ಠಾನವು ನವದೆಹಲಿಯ ಕಾನ್ಸ್ಟಿಟ್ಯೂಶನಲ್ ಕ್ಲಬ್‌ನಲ್ಲಿ ಈಚೆಗೆ ನಡೆಸಿದ ಎರಡು ದಿನಗಳ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ದೇಶದ ಸ್ಥಳೀಯಾಡಳಿತಗಳ ಬಲವರ್ಧನೆಗಾಗಿ ಸಂವಿಧಾನ ತಿದ್ದುಪಡಿ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರಗಳ ಮೇಲೆ ಒತ್ತಾಸೆ ತರುವ ನಿರ್ಧಾರ ಕೈಗೊಂಡಿತು. ಈ ಉದ್ದೇಶ ಸಾಧನೆಗಾಗಿ ಇದೇ ಗುರಿಹೊಂದಿರುವ ಸಂಸ್ಥೆಗಳ ಮತ್ತು ಸಮಾನ ಮನಸ್ಕ ವ್ಯಕ್ತಿಗಳ ಸಹಯೋಗ ಪಡೆದುಕೊಳ್ಳಲು ತೀರ್ಮಾನಿಸಿತು.

    Click Here

    Call us

    Click Here

    ಪಂಚಾಯತ್ ರಾಜ್ ಮತ್ತು ಪೌರಾಡಳಿತ ಸಂಸ್ಥೆಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಂವಿಧಾನದ ೭೩ ಮತ್ತು ೭೪ನೆಯ ತಿದ್ದುಪಡಿಗಳು ರಾಜ್ಯಗಳಿಗೆ ನೀಡಿದ ವಿವೇಚನಾಧಿಕಾರಗಳಲ್ಲಿ ಹಲವನ್ನು ಬಂಧನೀಯಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಆ ದಿಸೆಯ ಕಾರ್ಯವಿಧಾನಗಳ ಕುರಿತು ವಿಸ್ತೃತ ಚರ್ಚೆ ನಡೆಸಿತು. ಅದಕ್ಕಾಗಿ ರಾಷ್ಟ್ರೀಯ, ಪ್ರಾದೇಶಿಕ ಮತ್ತು ರಾಜ್ಯವಾರು ಕಾರ್ಯಪಡೆಗಳನ್ನು, ಸಂವಿಧಾನ ತಿದ್ದುಪಡಿ ಪ್ರಸ್ತಾವನೆಯ ಕರಡು ಸಿದ್ಧಪಡಿಸಲು ಪರಿಣತರ ಸಮಿತಿಯನ್ನು ರೂಪಿಸಲು ನಿರ್ಣಯಿಸಿತು. ಬದಲಾವಣೆಯ ಸಂದರ್ಭದಲ್ಲಿ ತೃಣಮೂಲ ಮತ್ತು ಜನಸಹಭಾಗಿತ್ವ ಪ್ರಜಾತಂತ್ರ ವ್ಯವಸ್ಥೆಗೆ ಸಂವಿಧಾನ ಮತ್ತು ರಾಜ್ಯಗಳ ಕಾಯಿದೆಗಳಲ್ಲಿ ಈಗ ಲಭ್ಯವಿರುವ ಅವಕಾಶಗಳ ರಕ್ಷಣೆಗೆ ಆದ್ಯತೆ ನೀಡಬೇಕು ಎಂಬ ದೃಢ ಅಭಿಪ್ರಾಯ ತಾಳಿತು.

    ಮಹಿಳೆಯರು ಮತ್ತು ಬದಿಗೊತ್ತಲ್ಪಟ್ಟ ಸಮುದಾಯಗಳಿಗೆ ಒತ್ತುನೀಡಿ ಗ್ರಾಮಸಭೆಗಳ ಸದಸ್ಯರು ತಮ್ಮ ಸಾಂವಿಧಾನಿಕ ಹಕ್ಕು ಚಲಾಯಿಸಲು ಸಾಧ್ಯವಾಗುವಂತೆ ಅವರಲ್ಲಿ ಅರಿವು ಮೂಡಿಸಲು ವ್ಯಾಪಕ ಮಾಹಿತಿ ಪ್ರಸಾರಕ್ಕೆ ಪರಿಣಾಮಕಾರಿ ಕ್ರಮಗಳನ್ನು ರೂಪಿಸಲು ನಿರ್ಧರಿಸಿತು.

    ಸಮಾಲೋಚನಾ ಸಭೆಯಲ್ಲಿ ದೇಶದ ೨೦ ರಾಜ್ಯಗಳಿಂದ ಬಂದ ೪೨ ನಾಗರಿಕ ಸಂಘಟನೆಗಳ ೫೯ ಪ್ರತಿನಿಧಿಗಳು ಭಾಗವಹಿಸಿದ್ದರು. ಕರ್ನಾಟಕ ಪ್ರತಿನಿಧಿಸಿದ್ದ ಬೆಂಗಳೂರಿನ ಸಿವಿಕ್ ಸಂಘಟನೆಯ ಕಾತ್ಯಾಯಿನಿ ಚಾಮರಾಜ್ ರಾಜ್ಯದಲ್ಲಿನ ಪೌರಾಡಳಿತದ ಮತ್ತು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆಯ ಕೃಪಾ ಎಂ. ಎಂ ಮತ್ತು ಎಸ್. ಜನಾರ್ದನ ಮರವಂತೆ ಪಂಚಾಯತ್ ರಾಜ್ ವ್ಯವಸ್ತೆಯ ಪ್ರಸಕ್ತ ಸ್ಥಿತಿಗತಿ ಮತ್ತು ಆಗಬೇಕಾಗಿರುವ ಬದಲಾವಣೆಗಳನ್ನು ಮುಂದಿಟ್ಟರಲ್ಲದೆ, ನಡೆದ ಚರ್ಚೆಗಳಲ್ಲಿ ಪಾಲ್ಗೊಂಡರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four + 9 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.